Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದಕಾರಣ ನೀವು, ದಾಸರಾದ ನಮ್ಮ ಮೇಲೆ ದಯೆ ಇಟ್ಟು ನಮ್ಮನ್ನು ಯೊರ್ದನ್ ನದಿಯ ಆಚೆಗೆ ಬರಮಾಡಿದ ಈ ಪ್ರದೇಶವನ್ನೇ ಸ್ವತ್ತಾಗಿ ಕೊಡಬೇಕು” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದಕಾರಣ ದಾಸರಾದ ನಮ್ಮ ಮೇಲೆ ದಯವಿಟ್ಟು ನಮ್ಮನ್ನು ಜೋರ್ಡನ್ ನದಿಯ ಆಚೆಗೆ ಬರಮಾಡಬೇಡಿ. ಈ ಪ್ರದೇಶವನ್ನೇ ಸೊತ್ತಾಗಿ ಕೊಡಿ,” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದಕಾರಣ ನೀವು ದಾಸರಾದ ನಮ್ಮ ಮೇಲೆ ದಯವಿಟ್ಟು ನಮ್ಮನ್ನು ಯೊರ್ದನ್ ಹೊಳೆಯ ಆಚೆಗೆ ಬರಮಾಡದೆ ಈ ಪ್ರದೇಶವನ್ನೇ ಸ್ವಾಸ್ತ್ಯಕ್ಕಾಗಿ ಕೊಡಬೇಕೆಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದ್ದರಿಂದ ಈ ಪ್ರದೇಶವನ್ನೇ ನಮಗೆ ಸ್ವಾಸ್ತ್ಯವನ್ನಾಗಿ ಕೊಟ್ಟರೆ ನಮಗೆ ಉಪಕಾರ ಮಾಡಿದಂತಾಗುವುದು. ನಾವು ಜೋರ್ಡನ್ ನದಿಯನ್ನು ದಾಟಿ ಹೋಗುವಂತೆ ಮಾಡಬೇಡ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದ್ದರಿಂದ ನಮಗೆ ನಿಮ್ಮ ದೃಷ್ಟಿಯಲ್ಲಿ ದಯೆಯು ಸಿಕ್ಕಿದ್ದಾದರೆ, ಈ ದೇಶವನ್ನು ನಿಮ್ಮ ಸೇವಕರಿಗೆ ಸ್ವಾಸ್ತ್ಯಕ್ಕಾಗಿ ಕೊಡಬೇಕು. ನಮ್ಮನ್ನು ಯೊರ್ದನ್ ನದಿಯ ಆಚೆಗೆ ತೆಗೆದುಕೊಂಡು ಹೋಗಬೇಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:5
11 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು, “ಖಡ್ಗಕ್ಕೆ ಹತರಾಗದೆ ಉಳಿದ ಜನಕ್ಕೆ ಅರಣ್ಯದಲ್ಲಿ ದಯೆ ದೊರೆಯುವುದು; ಇಸ್ರಾಯೇಲ್ ವಿಶ್ರಾಂತಿಯನ್ನು ಹುಡುಕುವುದಕ್ಕೆ ಹೋಗುವಾಗ ಯೆಹೋವನು ದೂರದಿಂದ ಬಂದು ಅದಕ್ಕೆ ದರ್ಶನಕೊಟ್ಟು,


ಅವನು ಪ್ರಾಕಾರದಲ್ಲಿ ನಿಂತಿರುವ ಎಸ್ತೇರ್ ರಾಣಿಯನ್ನು ಕಂಡ ಕೂಡಲೆ ಆಕೆಯ ಮೇಲೆ ದಯವಿಟ್ಟು ತನ್ನ ಕೈಯಲ್ಲಿದ್ದ ಸುವರ್ಣದಂಡವನ್ನು ಆಕೆಯ ಕಡೆಗೆ ಚಾಚಿದನು.


ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ, ಅರಸನನ್ನು ಹರಸಿ, “ಅರಸನೇ ನನ್ನ ಒಡೆಯನೇ, ನೀನು ನಿನ್ನ ಸೇವಕನಾದ ನನ್ನ ಬಿನ್ನಹವನ್ನು ಲಾಲಿಸಿದ್ದರಿಂದ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂದು ಈಗ ಗೊತ್ತಾಯಿತು” ಎಂದು ಹೇಳಿದನು.


ಅದಕ್ಕೆ ದಾವೀದನು, “ನಿನ್ನ ಕಣ್ಣುಮುಂದೆ ನನಗೆ ದಯೆ ದೊರಕುತ್ತದೆಂಬುದನ್ನು ನಿನ್ನ ತಂದೆಯು ಬಲ್ಲನು. ಆದ್ದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಅಂತರವಿದೆ” ಎಂದು ಖಂಡಿತವಾಗಿ ಹೇಳಿದನು.


ರೂತಳು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ “ಪರದೇಶಿಯಾದ ನನ್ನ ಮೇಲೆ ಇಷ್ಟು ಕಟಾಕ್ಷವಿಟ್ಟು ದಯೆ ತೋರಿಸಲು ಕಾರಣವೇನು?” ಎಂದು ಕೇಳಿದಳು.


ಯೆಹೋಶುವನು “ಅಯ್ಯೋ, ಕರ್ತನೇ, ಯೆಹೋವನೇ, ನೀನು ಈ ಜನರನ್ನು ಯೊರ್ದನ್ ಹೊಳೆ ದಾಟಿಸಿದ್ದೇಕೆ? ನಮ್ಮನ್ನು ಅಮೋರಿಯರ ಕೈಗೊಪ್ಪಿಸಿ ನಾಶ ಮಾಡಬೇಕೆಂದಿರುವಿಯಾ? ನಾವು ಇಷ್ಟೇ ಸಾಕೆಂದು ಯೊರ್ದನ್ ನದಿಯ ಆಚೆ ಕಡೆಯಲ್ಲೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು.


ಅದು ಮಾತ್ರವಲ್ಲದೆ ಯೆಹೋವನು ನಿಮ್ಮಿಂದ ನನ್ನ ಮೇಲೆಯೂ ಕೋಪಗೊಂಡು, “ನೀನೂ ಆ ದೇಶಕ್ಕೆ ಸೇರುವುದಿಲ್ಲ;


ನೀನು ನಿನ್ನ ದಾಸನ ಮೇಲೆ ದಯೆ ಇಟ್ಟು ನನ್ನ ಪ್ರಾಣವನ್ನು ಉಳಿಸಿದ್ದು ಬಹು ವಿಶೇಷವಾದ ಉಪಕಾರವೇ; ಆದರೆ ಬೆಟ್ಟಕ್ಕೆ ಓಡಿ ಹೋಗಲಾರೆನು; ನಾನು ಹೋಗುತ್ತಿರುವಾಗ ಆ ವಿಪತ್ತು ನನಗೂ ಉಂಟಾಗಿ ಸತ್ತೇನು.


ಇವು ಯೆಹೋವನು ಇಸ್ರಾಯೇಲರ ಸಮೂಹಕ್ಕೆ ಅಧೀನಪಡಿಸಿದ ಪಟ್ಟಣಗಳು. ದನಕುರಿಗಳ ಮೇವಿಗೆ ತಕ್ಕ ಪ್ರದೇಶವಾಗಿದೆ. ನಿಮ್ಮ ದಾಸರಾದ ನಮಗೆ ಬಹಳ ದನ ಕುರಿಗಳುಂಟು.


ಮೋಶೆಯು ಗಾದ್ ಮತ್ತು ರೂಬೇನ್ ಸಂತಾನದವರಿಗೆ, “ನಿಮ್ಮ ಸಹೋದರರು ಯದ್ಧಕ್ಕೆ ಹೋಗುವಾಗ ನೀವು ಅಲ್ಲೇ ಕುಳಿತುಕೊಂಡಿರಬೇಕೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು