Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನು ಇಸ್ರಾಯೇಲರಿಗೆ ಕೊಟ್ಟ ದೇಶಕ್ಕೆ ಅವರು ಹೋಗದಂತೆ ನೀವು ಏಕೆ ಅವರಿಗೆ ಅಧೈರ್ಯವನ್ನು ಹುಟ್ಟಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರ ಇಸ್ರಯೇಲರಿಗೆ ಕೊಟ್ಟ ನಾಡಿಗೆ ಅವರು ಹೋಗದಂತೆ ನೀವೇಕೆ ಅಧೈರ್ಯವನ್ನು ಹುಟ್ಟಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನು ಇಸ್ರಾಯೇಲ್ಯರಿಗೆ ಕೊಟ್ಟ ದೇಶಕ್ಕೆ ಅವರು ಹೋಗದಂತೆ ನೀವು ಯಾಕೆ ಅವರಿಗೆ ಅಧೈರ್ಯವನ್ನು ಹುಟ್ಟಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ಇಸ್ರೇಲರಿಗೆ ಕೊಟ್ಟ ದೇಶಕ್ಕೆ ಅವರು ಹೋಗದಂತೆ ನೀವು ಯಾಕೆ ಅವರಿಗೆ ಅಧೈರ್ಯವನ್ನು ಹುಟ್ಟಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ಅವರಿಗೆ ಕೊಟ್ಟ ದೇಶಕ್ಕೆ ಹೋಗುವುದಕ್ಕೆ ನೀವು ಇಸ್ರಾಯೇಲರ ಹೃದಯಗಳನ್ನು ಅಧೈರ್ಯಪಡಿಸುವುದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:7
9 ತಿಳಿವುಗಳ ಹೋಲಿಕೆ  

ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು.


ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ, ‘ಆ ದೇಶದ ಜನರು ನಮಗಿಂತ ಬಲಿಷ್ಠರಾಗಿಯೂ ಮತ್ತು ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡದಾಗಿಯೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳಿಂದ ಇವೆ. ಅಲ್ಲಿ ನಾವು ಎತ್ತರವಾದ ಪುರುಷರನ್ನು ಅಂದರೆ ಅನಾಕೀಮ್ ವಂಶಸ್ಥರ ಮಕ್ಕಳನ್ನು ನೋಡಿದ್ದೇವೆ’ ಎಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ” ಅಂದುಕೊಳ್ಳುತ್ತಿದ್ದಿರಿ.


ಅವರು ಎಷ್ಕೋಲ್ ತಗ್ಗಿಗೆ ಬಂದು ಆ ದೇಶವನ್ನು ನೋಡಿ ಇಸ್ರಾಯೇಲರಿಗೆ ಅಧೈರ್ಯವನ್ನು ಹುಟ್ಟಿಸಿದ್ದರಿಂದ ಇಸ್ರಾಯೇಲರು ತಮಗೆ ಯೆಹೋವನು ವಾಗ್ದಾನಮಾಡಿದ ದೇಶಕ್ಕೆ ಹೋಗಲು ಆಗಲಿಲ್ಲ.


ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡುವಾಗ, ದಾರಿಯಲ್ಲಿ ಆಯಾಸದಿಂದ ಅವರಿಗೆ ಬೇಸರವಾಯಿತು.


ಅವರು ಮೋಶೆಗೆ, “ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು; ಅದು ನಿಜವಾಗಿಯೂ ಹಾಲೂ ಮತ್ತು ಜೇನೂ ಹರಿಯುವ ದೇಶವೇ; ಅಲ್ಲಿನ ಹಣ್ಣುಗಳು ಇಂಥವು.


ಅವರ ಹೆಸರುಗಳು ಯಾವುವೆಂದರೆ: ರೂಬೇನ್ ಕುಲದ ಜಕ್ಕೂರನ ಮಗನಾದ ಶಮ್ಮೂವ,


ಮೋಶೆಯು ಗಾದ್ ಮತ್ತು ರೂಬೇನ್ ಸಂತಾನದವರಿಗೆ, “ನಿಮ್ಮ ಸಹೋದರರು ಯದ್ಧಕ್ಕೆ ಹೋಗುವಾಗ ನೀವು ಅಲ್ಲೇ ಕುಳಿತುಕೊಂಡಿರಬೇಕೇನು?


ಆದರೆ ಅವನ ಜೊತೆಯಲ್ಲಿ ಹೋದವರು, “ಆ ಜನರು ನಮಗಿಂತ ಬಲಿಷ್ಠರು; ಅವರನ್ನು ಜಯಿಸಲು ನಮಗೆ ಶಕ್ತಿಸಾಲುವುದಿಲ್ಲ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು