Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನರಹತ್ಯೆಮಾಡಿದವನು ಎಲ್ಲಿ ಸಿಕ್ಕಿದರೂ ಅವನನ್ನು ಕೊಲ್ಲಬೇಕಾದವನು ಯಾರೆಂದರೆ ಹತವಾದವನ ಸಮೀಪಬಂಧುವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನರಹತ್ಯ ಮಾಡಿದವನನ್ನು ಕಂಡೊಡನೆ ಕೊಲ್ಲಬೇಕಾದವನು ಹತನಾದವನ ಸಮೀಪ ಬಂಧುವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನರಹತ್ಯಮಾಡಿದವನು ಎಲ್ಲಿ ಸಿಕ್ಕಿದರೂ ಅವನನ್ನು ಕೊಲ್ಲಬೇಕಾದವನು ಯಾರಂದರೆ ಹತವಾದವನ ಸಮೀಪಬಂಧುವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಕೊಲ್ಲಲ್ಪಟ್ಟವನ ಸಮೀಪ ಬಂಧುವು ಕೊಲೆಗಾರನನ್ನು ಮರಣಕ್ಕೀಡುಮಾಡಬೇಕು. ಅವನು ಕೊಲೆಗಾರನನ್ನು ಯಾವಾಗ ಕಂಡರೂ ಅವನನ್ನು ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ರಕ್ತಪಾತಕ್ಕೆ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ಕೊಲ್ಲಬೇಕು. ಅವನು ಕೊಲೆಪಾತಕನನ್ನು ನೋಡಿದಾಗ, ಅವನನ್ನೂ ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:19
16 ತಿಳಿವುಗಳ ಹೋಲಿಕೆ  

ಹತವಾದವನ ಸಮೀಪ ಬಂಧುವು ಕೊಂದವನನ್ನು ಹಿಂದಟ್ಟಿಕೊಂಡು ಅಲ್ಲಿಗೆ ಬಂದರೆ ಅವರು ಅವನನ್ನು ಅವನ ಕೈಗೆ ಒಪ್ಪಿಸಬಾರದು. ಏಕೆಂದರೆ ಅವನು ನೆರೆಯವನನ್ನು ಹಳೆಯ ದ್ವೇಷವೇನೂ ಇಲ್ಲದೆ ಆಕಸ್ಮಾತ್ತಾಗಿ ಕೊಂದನು.


ನಿಮ್ಮಲ್ಲಿ ತಿಳಿಯದೆ ಆಕಸ್ಮಾತ್ತಾಗಿ ನರಹತ್ಯಮಾಡಿದವನು ಅಲ್ಲಿಗೆ ಓಡಿಹೋಗಲಿ. ಹತವಾದವನ ಸಮೀಪ ಬಂಧುವು ಮುಯ್ಯಿತೀರಿಸದಂತೆ ಅವು ನಿಮಗೆ ಆಶ್ರಯಸ್ಥಾನಗಳಾಗಿರಲಿ.


ಒಂದಕ್ಕೆ ಓಡಿಹೋದರೆ, ಅವನ ಊರಿನ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ ಅವನಿಗೆ ಮರಣಶಿಕ್ಷೆಯಾಗುವಂತೆ ಮುಯ್ಯಿತೀರಿಸುವ ಹಂಗುಳ್ಳವನ ಕೈಗೆ ಒಪ್ಪಿಸಬೇಕು.


ಸತ್ತವನ ಮೇಲೆ ಅವನಿಗೆ ಮೊದಲು ದ್ವೇಷವಿಲ್ಲದ್ದರಿಂದ ಮತ್ತು ಅವನನ್ನು ಸಾಯಿಸುವ ಉದ್ದೇಶವಿಲ್ಲದ ಕಾರಣ ಮರಣಶಿಕ್ಷೆಗೆ ಪಾತ್ರನಲ್ಲ. ಆದರೂ ಹತ್ಯಮಾಡಿದವನಿಗೆ ಮುಯ್ಯಿತೀರಿಸುವ ಹಂಗುಳ್ಳ ಸಮೀಪ ಬಂಧುವು ಇನ್ನು ಕೋಪದಿಂದ ಉರಿಯುತ್ತಿರುವಾಗಲೇ ಅವನನ್ನು ಹಿಂದಟ್ಟಿ ಹೋಗಬಹುದು ಮತ್ತು ಮಾರ್ಗ ದೂರವಾಗಿರುವ ಪಕ್ಷಕ್ಕೆ ಅವನನ್ನು ಹಿಡಿದು ಕೊಂದು ಹಾಕಿಬಿಡಬಹುದು.


ಇಲ್ಲವೆ ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ ಅವನು ನರಹತ್ಯೆಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು. ಹತವಾದವನ ಸಮೀಪಬಂಧುವು ಅವನನ್ನು ಎಲ್ಲಿ ಕಂಡರೂ ಕೊಲ್ಲಬೇಕು.


ಹತವಾದವನ ಸಮೀಪಬಂಧುವು ಅವನನ್ನು ಆಶ್ರಯಪಟ್ಟಣದ ಹೊರಗೆ ಕಂಡು ಕೊಂದುಹಾಕಿದರೆ ಅವನು ಕೊಲೆಪಾತಕನಾಗುವುದಿಲ್ಲ.


ಸಭೆಯವರು ಹತ್ಯೆಮಾಡಿದವನಿಗೂ, ಹತವಾದವನ ಸಮೀಪಬಂಧುವಿಗೂ ಈ ಸಂಗತಿಗಳಿಗೆ ಅನುಸಾರವಾಗಿ ನ್ಯಾಯತೀರಿಸಬೇಕು.


ಅವನು ಸಭೆಯವರಿಂದ ತೀರ್ಪು ಹೊಂದುವುದಕ್ಕಿಂತ ಮೊದಲೇ ಹತವಾದವನ ಸಮೀಪಬಂಧುವಿನಿಂದ ಸಾಯದಂತೆ ಆ ಆಶ್ರಯ ಪಟ್ಟಣಗಳು ನಿಮ್ಮೊಳಗೆ ಇರಬೇಕು.


ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.


ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಮರದ ಆಯುಧವನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು.


ಯಾವನಾದರೂ ಮತ್ತೊಬ್ಬನನ್ನು ಹಗೆಮಾಡಿ ನೂಕುವುದರಿಂದಾಗಲಿ, ಸಮಯ ನೋಡಿಕೊಂಡು ಅವನ ಮೇಲೆ ಏನಾದರೂ ಎಸೆಯುವುದರಿಂದಾಗಲಿ,


ಈಗ ನೋಡು ಬಳಗದವರೆಲ್ಲರು ನಿನ್ನ ದಾಸಿಯಾದ ನನಗೆ ವಿರೋಧವಾಗಿ ಎದ್ದು ‘ತಮ್ಮನನ್ನು ಕೊಂದವನೆಲ್ಲಿ?, ಅವನನ್ನು ನಮಗೆ ಒಪ್ಪಿಸು. ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥನಿಲ್ಲದ ಹಾಗೆ ಮಾಡಿಬಿಡುತ್ತೇವೆ’ ಅನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು, ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಭೂಲೋಕದ ಮೇಲಿನಿಂದ ಅಳಿಸಬೇಕೆಂದಿದ್ದಾರೆ” ಎಂದು ಉತ್ತರ ಕೊಟ್ಟಳು.


ಆಗ ಆ ಸ್ತ್ರೀಯು, “ಸಮೀಪ ಬಂಧುವು ನನ್ನ ಎರಡನೆಯ ಮಗನನ್ನು ಕೊಂದು ನನ್ನನ್ನು ಪೂರ್ಣವಾಗಿ ನಾಶಮಾಡದಂತೆ ಅರಸನು ತಾನಾಗಿ ನೋಡಿಕೊಳ್ಳುವನೆಂಬುದಾಗಿ ನನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ಪ್ರಮಾಣಮಾಡಬೇಕು” ಎಂದು ಬೇಡಿಕೊಂಡಳು. ಅದಕ್ಕೆ ಅರಸನು, “ಯೆಹೋವನಾಣೆ, ನಿನ್ನ ಮಗನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡಿಸುವುದಿಲ್ಲ” ಎಂದು ಹೇಳಿದನು.


ಆಗ ಅವನು, “ಅವರು ನನ್ನ ತಾಯಿಯ ಮಕ್ಕಳು; ನನ್ನ ಸಹೋದರರು; ಯೆಹೋವನಾಣೆ, ನೀವು ಅವರನ್ನು ಉಳಿಸಿದ್ದರೆ ನಾನು ನಿಮ್ಮನ್ನು ಕೊಲ್ಲುತ್ತಿರಲಿಲ್ಲ” ಎಂದು ಹೇಳಿ


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ರಹಸ್ಯ ಸಂಭಾಷಣೆಗೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ಕೊಂದದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.


ಅಬ್ನೇರನು ಗಿಬ್ಯೋನಿನ ಸಮೀಪದಲ್ಲಾದ ಯುದ್ಧದಲ್ಲಿ ಯೋವಾಬ ಅಬೀಷೈಯರ ತಮ್ಮನಾದ ಅಸಾಹೇಲನನ್ನು ಸಾಯಿಸಿದ್ದರಿಂದ ಅವರು ಇವನನ್ನು ಕೊಂದು ಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು