Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇಲ್ಲವೆ ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ ಅವನು ನರಹತ್ಯೆಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು. ಹತವಾದವನ ಸಮೀಪಬಂಧುವು ಅವನನ್ನು ಎಲ್ಲಿ ಕಂಡರೂ ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ ಅವನು ಕೂಡ ನರಹತ್ಯಗಾರನೆ. ಅಂಥವನಿಗೂ ಮರಣಶಿಕ್ಷೆಯಾಗಬೇಕು. ಹತನಾದವನ ಸಮೀಪಬಂಧು ಅವನನ್ನು ಕಂಡೊಡನೆ ಕೊಲ್ಲಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದ್ವೇಷದಿಂದ ಕೈಯಾರೆ ಹೊಡೆಯುವದರಿಂದಾಗಲಿ ಕೊಂದರೆ ಅವನು ನರಹತ್ಯ ಮಾಡಿದವನೇ; ಅವನಿಗೆ ಮರಣ ಶಿಕ್ಷೆಯಾಗಬೇಕು. ಹತವಾದವನ ಸಮೀಪಬಂಧುವು ಅವನನ್ನು ಎಲ್ಲಿ ಕಂಡರೂ ಕೊಲ್ಲಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ, ಅವನು ನರಹತ್ಯ ಮಾಡಿದವನೇ. ಅವನಿಗೆ ಮರಣ ಶಿಕ್ಷೆಯಾಗಬೇಕು. ಹತನಾದವನ ಸಮೀಪ ಬಂಧುವು ಅವನನ್ನು ಎಲ್ಲಿ ಕಂಡರೂ ಕೊಲ್ಲಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇಲ್ಲವೆ ಹಗೆತನ ಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ, ಹೊಡೆದವನನ್ನು ನಿಜವಾಗಿ ಸಾಯಿಸಬೇಕು. ರಕ್ತಪಾತಕ್ಕೆ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆಪಾತಕನನ್ನು ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:21
7 ತಿಳಿವುಗಳ ಹೋಲಿಕೆ  

ಯಾವನಾದರೂ ಮತ್ತೊಬ್ಬನನ್ನು ಹಗೆಮಾಡಿ ನೂಕುವುದರಿಂದಾಗಲಿ, ಸಮಯ ನೋಡಿಕೊಂಡು ಅವನ ಮೇಲೆ ಏನಾದರೂ ಎಸೆಯುವುದರಿಂದಾಗಲಿ,


“‘ಆದರೆ ಒಬ್ಬನು ಯಾವ ದ್ವೇಷವೂ ಇಲ್ಲದೆ ಆಕಸ್ಮಾತ್ತಾಗಿ ನೂಕುವುದರಿಂದಾಗಲಿ, ಹಾನಿಮಾಡುವ ಸಮಯವನ್ನು ನೋಡಿಕೊಳ್ಳದೆ ಏನಾದರೂ ಎಸೆಯುವುದರಿಂದಾಗಲಿ,


ಆಗ ಆ ಸ್ತ್ರೀಯು, “ಸಮೀಪ ಬಂಧುವು ನನ್ನ ಎರಡನೆಯ ಮಗನನ್ನು ಕೊಂದು ನನ್ನನ್ನು ಪೂರ್ಣವಾಗಿ ನಾಶಮಾಡದಂತೆ ಅರಸನು ತಾನಾಗಿ ನೋಡಿಕೊಳ್ಳುವನೆಂಬುದಾಗಿ ನನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ಪ್ರಮಾಣಮಾಡಬೇಕು” ಎಂದು ಬೇಡಿಕೊಂಡಳು. ಅದಕ್ಕೆ ಅರಸನು, “ಯೆಹೋವನಾಣೆ, ನಿನ್ನ ಮಗನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡಿಸುವುದಿಲ್ಲ” ಎಂದು ಹೇಳಿದನು.


ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.


ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ?


ನರಹತ್ಯೆಮಾಡಿದವನು ಎಲ್ಲಿ ಸಿಕ್ಕಿದರೂ ಅವನನ್ನು ಕೊಲ್ಲಬೇಕಾದವನು ಯಾರೆಂದರೆ ಹತವಾದವನ ಸಮೀಪಬಂಧುವೇ.


ವ್ಯಭಿಚಾರ ಮಾಡುವಂಥ, ರಕ್ತಸುರಿಸುವಂಥ ಹೆಂಗಸರಿಗೆ ತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ನಿನ್ನ ರಕ್ತವನ್ನು ಸುರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು