Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಮಹಾಯಾಜಕನು ಜೀವದಿಂದಿರುವ ತನಕ ಅವನು ಆಶ್ರಯ ಪಟ್ಟಣದೊಳಗೆ ಇರಬೇಕಾಗಿತ್ತು. ಮಹಾಯಾಜಕನು ತೀರಿಹೋದ ನಂತರ ಅವನು ತನ್ನ ಸ್ವಾಸ್ತ್ಯವಿರುವ ಸ್ಥಳಕ್ಕೆ ಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಏಕೆಂದರೆ ಮಹಾಯಾಜಕನು ಜೀವದಿಂದಿರುವ ತನಕ ಅವನು ಆಶ್ರಯನಗರದೊಳಗೇ ಇರಬೇಕಾಗಿತ್ತು. ಮಹಾಯಾಜಕನು ತೀರಿಹೋದ ನಂತರ ಅವನು ತನ್ನ ಆಸ್ತಿಪಾಸ್ತಿಯಿರುವ ಸ್ಥಳಕ್ಕೆ ಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಮಹಾಯಾಜಕನು ಜೀವದಿಂದಿರುವ ತನಕ ಅವನು ಆಶ್ರಯನಗರದೊಳಗೆ ಇರಬೇಕಾಗಿತ್ತು. ಮಾಹಾಯಾಜಕನು ತೀರಿಹೋದನಂತರ ಅವನು ತನ್ನ ಸ್ವಾಸ್ತ್ಯವಿರುವ ಸ್ಥಳಕ್ಕೆ ಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಮಹಾಯಾಜಕನು ಜೀವದಿಂದಿರುವ ತನಕ ಅವನು ಆಶ್ರಯನಗರದೊಳಗೆ ಇರಬೇಕು. ಮಹಾಯಾಜಕನು ತೀರಿಹೋದ ನಂತರ ಅವನು ತನ್ನ ಸ್ವಾಸ್ತ್ಯವಿರುವ ಸ್ಥಳಕ್ಕೆ ಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಏಕೆಂದರೆ ಅವನು ತನ್ನ ಆಶ್ರಯದ ಪಟ್ಟಣದ ಮಹಾಯಾಜಕನು ಸಾಯುವವರೆಗೂ ವಾಸಮಾಡಬೇಕಾಗಿತ್ತು. ಮಹಾಯಾಜಕನ ಮರಣದ ತರುವಾಯ ಕೊಲೆಪಾತಕನು ತನ್ನ ಸೊತ್ತಿರುವ ದೇಶಕ್ಕೆ ಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:28
11 ತಿಳಿವುಗಳ ಹೋಲಿಕೆ  

ನಾವಾದರೋ ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ.


ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ.


ಪೌಲನು ಶತಾಧಿಪತಿಗೂ, ಸಿಪಾಯಿಗಳಿಗೂ; “ಇವರು ಹಡಗಿನಲ್ಲಿ ಉಳಿಯದಿದ್ದರೆ ನಿಮ್ಮ ಪ್ರಾಣ ಉಳಿಯುವುದಿಲ್ಲವೆಂದು” ಹೇಳಿದನು.


ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.


ಹತವಾದವನ ಸಮೀಪಬಂಧುವು ಅವನನ್ನು ಆಶ್ರಯಪಟ್ಟಣದ ಹೊರಗೆ ಕಂಡು ಕೊಂದುಹಾಕಿದರೆ ಅವನು ಕೊಲೆಪಾತಕನಾಗುವುದಿಲ್ಲ.


“‘ನೀವೂ, ನಿಮ್ಮ ಸಂತತಿಯವರೂ ನಿಮ್ಮ ಎಲ್ಲಾ ವಾಸಸ್ಥಳಗಳಲ್ಲಿ ಈ ಮಾತುಗಳಿಗೆ ಅನುಸಾರವಾಗಿ ನ್ಯಾಯತೀರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು