Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕೆಹಾತ್ಯರು ಒಳಗೆ ಬಂದು, ಒಂದು ಕ್ಷಣವು ಆ ಪರಿಶುದ್ಧ ವಸ್ತುಗಳನ್ನು ನೋಡಬಾರದು; ನೋಡಿದರೆ ಸತ್ತೇ ಹೋಗುವರು. ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಪ್ರವೇಶಿಸಿ ಅವರ ಕೆಲಸಗಳನ್ನು ಅವರವರ ಹೊರೆಗಳನ್ನೂ ಅವರಿಗೆ ನೇಮಿಸಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕೆಹಾತ್ಯರೇ ಒಳಗೆ ಬಂದು, ಒಂದು ಕ್ಷಣ ಮಾತ್ರವೂ ಆ ಪವಿತ್ರ ವಸ್ತುಗಳನ್ನು ನೋಡದಿರಲಿ; ನೋಡಿ ಸಾಯದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕೆಹಾತ್ಯರೇ ಒಳಗೆ ಬಂದು ಒಂದು ಕ್ಷಣವಾದರೂ ಆ ಪರಿಶುದ್ಧವಸ್ತುಗಳನ್ನು ನೋಡಬಾರದು; ನೋಡಿದರೆ ಸತ್ತಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಇಲ್ಲವಾದರೆ, ಕೆಹಾತ್ಯರು ಒಳಗೆ ಬಂದು ಪರಿಶುದ್ಧವಸ್ತುಗಳನ್ನು ಮುಟ್ಟುವರು. ಆ ಮಹಾ ಪರಿಶುದ್ಧವಸ್ತುಗಳನ್ನು ಅವರು ಒಂದು ಕ್ಷಣ ಮುಟ್ಟಿದರೂ ಸಾಯುತ್ತಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ಕೊಹಾತ್ಯರು ದೇವದರ್ಶನದ ಗುಡಾರದ ಒಳಗೆ ಬಂದು, ಒಂದು ಕ್ಷಣವೂ ಆ ಪವಿತ್ರ ವಸ್ತುಗಳನ್ನು ನೋಡಬಾರದು, ನೋಡಿ ಸಾವನ್ನಪ್ಪದಿರಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:20
11 ತಿಳಿವುಗಳ ಹೋಲಿಕೆ  

ಬೇತ್ ಷೆಮೆಷಿನವರು ಯೆಹೋವನ ಮಂಜೂಷದಲ್ಲಿ ಇಣಕಿ ನೋಡಿದ್ದರಿಂದ ಯೆಹೋವನು ಅವರಲ್ಲಿ ಎಪ್ಪತ್ತು ಮಂದಿಯನ್ನು ಸಾಯಿಸಿದನು. ಯೆಹೋವನು ತಮ್ಮಲ್ಲಿ ಮಹಾನಾಶನವನ್ನು ಉಂಟುಮಾಡಿದ್ದರಿಂದ ಬೇತ್ ಷೆಮೆಷಿನವರು ಗೋಳಾಡಿದರು.


ಆಗ ಯೆಹೋವನು ಮೋಶೆಗೆ, “ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಗಡಿಯನ್ನು ದಾಟಿ ಯೆಹೋವನ ಹತ್ತಿರಕ್ಕೆ ಬಂದರೆ ಅವರಲ್ಲಿ ಬಹಳ ಜನರು ನಾಶವಾಗುವರು.


ಅವರು ಮಹಾಪರಿಶುದ್ಧ ವಸ್ತುಗಳ ಹತ್ತಿರಕ್ಕೆ ಬಂದು ಸಾಯದಂತೆ ನೀವು ಅವರ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕು.


ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.


ಆಗ ಯೆಹೋವನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ದಹಿಸಿಬಿಟ್ಟಿತು; ಅವರು ಯೆಹೋವನ ಸನ್ನಿಧಿಯಲ್ಲಿಯೇ ಸತ್ತರು.


ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು. ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ, ಗರ್ಜನೆ, ಗುಡುಗು, ಮಿಂಚುಗಳು, ಭೂಕಂಪವು, ದೊಡ್ಡ ಆಲಿಕಲ್ಲಿನ ಮಳೆಯೂ ಸುರಿಯಿತು.


ಅವನು ಆ ಧೂಪವನ್ನು ಯೆಹೋವನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಆ ಧೂಪದ ಹೊಗೆಯು ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಆವರಿಸಿಕೊಳ್ಳುವುದು.


ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,


ಗುಡಾರವು ಹೊರಡುವಾಗ ಲೇವಿಯರೇ ಅದನ್ನು ಬಿಚ್ಚಬೇಕು; ಇಳಿದುಕೊಳ್ಳುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.


ಲೇವಿಯರು ನಿನ್ನ ಅಪ್ಪಣೆಯ ಪ್ರಕಾರ ನಡೆದು ಗುಡಾರವನ್ನು ಕಾಯಬೇಕು. ಆದರೆ ಪವಿತ್ರಸ್ಥಾನದ ವಸ್ತುಗಳ ಹತ್ತಿರವಾಗಲಿ ಅಥವಾ ಯಜ್ಞವೇದಿಯ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಸಾಯುವುದು ಮಾತ್ರವಲ್ಲದೆ ನೀವೂ ಸಾಯುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು