Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೇವದರ್ಶನ ಗುಡಾರದ ವಿಷಯದಲ್ಲಿ ಕೆಹಾತ್ಯರು ಮಾಡಬೇಕಾದ ಕೆಲಸ ಯಾವುದೆಂದರೆ; ಅವರು ಮಹಾಪರಿಶುದ್ಧ ವಸ್ತುಗಳನ್ನು ನೋಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಕೆಹಾತ್ಯರು ಕೈಗೊಳ್ಳಬೇಕಾದ ಕರ್ತವ್ಯಗಳು ಇವು: ದೇವದರ್ಶನದ ಗುಡಾರದಲ್ಲಿ ಪರಮ ಪವಿತ್ರವಾದ ವಸ್ತುಗಳನ್ನು ಅವರು ನೋಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದೇವದರ್ಶನದ ಗುಡಾರದ ವಿಷಯದಲ್ಲಿ ಕೆಹಾತ್ಯರು ಮಾಡಬೇಕಾದ ಕೆಲಸ ಯಾವದಂದರೆ - ಅವರು ಮಹಾಪರಿಶುದ್ಧ ವಸ್ತುಗಳನ್ನು ನೋಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರು ದೇವದರ್ಶನಗುಡಾರದಲ್ಲಿರುವ ಮಹಾ ಪರಿಶುದ್ಧವಸ್ತುಗಳನ್ನು ನೋಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ದೇವದರ್ಶನದ ಗುಡಾರದಲ್ಲಿ ಕೊಹಾತ್ಯರು ಮಾಡುವ ಸೇವೆ ಯಾವುದೆಂದರೆ, ದೇವದರ್ಶನ ಗುಡಾರದ ಅತಿಪರಿಶುದ್ಧವಾದ ವಸ್ತುಗಳನ್ನು ಕಾಪಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:4
11 ತಿಳಿವುಗಳ ಹೋಲಿಕೆ  

ಅವರು ಮಹಾಪರಿಶುದ್ಧ ವಸ್ತುಗಳ ಹತ್ತಿರಕ್ಕೆ ಬಂದು ಸಾಯದಂತೆ ನೀವು ಅವರ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕು.


ಅದು ಒಬ್ಬ ಮನುಷ್ಯನು ತನ್ನ ಮನೆಯನ್ನು ಬಿಟ್ಟು ದೂರಪ್ರಯಾಣಕ್ಕೆ ಹೋಗುವಾಗ ತನ್ನ ಸೇವಕರಿಗೆ ಮನೇ ಅಧಿಕಾರವನ್ನು ಒಪ್ಪಿಸಿಕೊಟ್ಟು ಪ್ರತಿಯೊಬ್ಬನಿಗೆ ಅವನವನ ಕೆಲಸಗಳನ್ನು ಕೊಟ್ಟು ಬಾಗಿಲು ಕಾಯುವವನಿಗೆ, ನೀನು ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ” ಎಂದು ನಾನು ನಿಮಗೆ ಹೇಳುತ್ತಿದ್ದೇನೆ.


ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಲೆಕ್ಕಿಸಬೇಕು.


ಸೇವಾಕಾರ್ಯ ಮಾಡುವುದರಲ್ಲಿಯೂ, ಹೊರೆಗಳನ್ನು ಹೊರುವುದರಲ್ಲಿಯೂ ಗೇರ್ಷೋನ್ಯರ ಗೋತ್ರಕುಟುಂಬದವರು ಮಾಡಬೇಕಾದ ಸೇವೆ ಯಾವುದೆಂದರೆ;


ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.


ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರನ್ನು ಎಣಿಕೆಮಾಡು, ಅವರು ದೇವದರ್ಶನದ ಗುಡಾರದ ಸೇವೆ ಮಾಡಬೇಕು.


ದಂಡು ಹೊರಡುವಾಗ, ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಬಂದು ಮಹಾಪವಿತ್ರಸ್ಥಾನವನ್ನು ಮರೆಮಾಡುವ ತೆರೆಯನ್ನು ಇಳಿಸಿ ಅದರಿಂದ ಮಂಜೂಷದ ಆಜ್ಞಾಶಾಸನವನ್ನು ಮುಚ್ಚಿಬಿಟ್ಟು,


ಅವರ ಹಿಂದೆ ಕೆಹಾತ್ಯರು ದೇವಾಲಯದ ಸಾಮಾನುಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ಉಳಿದ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ಕೆಹಾತ್ಯರಿಗೆ ಮಾತ್ರ ಏನೂ ಕೊಡಲಿಲ್ಲ. ಏಕೆಂದರೆ ಅವರು ದೇವದರ್ಶನ ಗುಡಾರದ ಸಾಮಾನುಗಳನ್ನು ಸಾಗಿಸುವುದೇ ಅವರಿಗೆ ನೇಮಕವಾದ ಕೆಲಸವಾಗಿತ್ತು. ಅವರು ಅವುಗಳನ್ನು ಹೆಗಲಿನ ಮೇಲೆ ಹೊರುತ್ತಿದ್ದರು.


ಇದಲ್ಲದೆ ದಾವೀದನು ಲೇವಿಯ ಸಂತಾನದವರಾದ ಗೇರ್ಷೋನ್ಯರು, ಕೆಹಾತ್ಯರು ಮತ್ತು ಮೆರಾರೀಯರು ಇವರನ್ನು ವಿವಿಧ ವರ್ಗಗಳನ್ನಾಗಿ ವಿಭಾಗಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು