Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯಾಜಕನು ಆ ಸ್ತ್ರೀಯನ್ನು ಯೆಹೋವನ ಸಮ್ಮುಖದಲ್ಲಿ ನಿಲ್ಲಿಸಿ, ಅವಳ ತಲೆಯ ಮೇಲಿರುವ ಮುಸುಕನ್ನು ತೆಗೆದು, ಕೂದಲನ್ನು ಕೆದರಿಸಿ ವ್ಯಭಿಚಾರದ ಸಂಶಯವನ್ನು ಸೂಚಿಸುವ ಆ ನೈವೇದ್ಯದ ಹಿಟ್ಟನ್ನು ಅವಳ ಕೈಯಲ್ಲಿ ಇಟ್ಟು, ಶಾಪವನ್ನುಂಟುಮಾಡುವ ವಿಷಕರವಾದ ಆ ನೀರನ್ನು ಯಾಜಕನು ತನ್ನ ಕೈಯಲ್ಲಿ ಹಿಡಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯಾಜಕನು ಆಕೆಯನ್ನು ಸರ್ವೇಶ್ವರನ ಸಮ್ಮುಖದಲ್ಲಿ ನಿಲ್ಲಿಸಿ, ಅವಳ ತಲೆಕೂದಲನ್ನು ಕೆದರಿಸಿ, ವ್ಯಭಿಚಾರದ ಸಂಶಯವನ್ನು ಸೂಚಿಸುವ ಆ ನೈವೇದ್ಯದ ಹಿಟ್ಟನ್ನು ಅವಳ ಕೈಯಲ್ಲಿಡಬೇಕು; ಶಾಪವನ್ನು ತರುವ ವಿಷಕರವಾದ ನೀರನ್ನು ತನ್ನ ಕೈಯಲ್ಲೇ ಹಿಡಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನು ಆ ಸ್ತ್ರೀಯನ್ನು ಯೆಹೋವನ ಮುಂದೆ ನಿಲ್ಲಿಸಿ ಅವಳ ತಲೆಯ ಕೂದಲನ್ನು ಕೆದರಿಸಿ ಹಾದರದ ಸಂಶಯವನ್ನು ಸೂಚಿಸುವ ಆ ನೈವೇದ್ಯದ ಹಿಟ್ಟನ್ನು ಅವಳ ಕೈಯಲ್ಲಿ ಇಟ್ಟು ಶಾಪವನ್ನುಂಟುಮಾಡುವ ವಿಷಕರವಾದ ಆ ನೀರನ್ನು ತನ್ನ ಕೈಯಲ್ಲಿ ಹಿಡಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯಾಜಕನು ಅವಳನ್ನು ಯೆಹೋವನ ಮುಂದೆ ನಿಲ್ಲಿಸಿ ಅವಳ ತಲೆಯ ಕೂದಲನ್ನು ಕೆದರಿಸಿ ಆಕೆಯ ದೋಷವನ್ನು ಹೊರಪಡಿಸುವ ಧಾನ್ಯಸಮರ್ಪಣೆಯನ್ನು ಅವಳ ಕೈಯಲ್ಲಿ ಇಡಬೇಕು. ಅದು ಈರ್ಷೆಯುಳ್ಳ ಗಂಡನ ಧಾನ್ಯಸಮರ್ಪಣೆ. ಅದೇ ಸಮಯದಲ್ಲಿ ಶಾಪವನ್ನು ಉಂಟುಮಾಡುವ ನೀರಿನ ವಿಶೇಷ ಪಾತ್ರೆಯನ್ನು ಯಾಜಕನು ತನ್ನ ಕೈಯಲ್ಲಿ ಹಿಡಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯಾಜಕನು ಆ ಸ್ತ್ರೀಯನ್ನು ಯೆಹೋವ ದೇವರ ಸಮ್ಮುಖದಲ್ಲಿ ನಿಲ್ಲಿಸಿ, ಆಕೆಯ ತಲೆಯ ಮೇಲಿರುವ ಮುಸುಕನ್ನು ತೆಗೆದು, ಅವಳ ಕೈಗಳಲ್ಲಿ ಸಂಶಯ ಸೂಚಿಸುವ ಕಾಣಿಕೆಯಾದ ನೈವೇದ್ಯದ ಹಿಟ್ಟನ್ನು ಇಡಬೇಕು. ಯಾಜಕನ ಕೈಯಲ್ಲಿ ಶಾಪತರುವ ಕಹಿಯಾದ ನೀರು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:18
18 ತಿಳಿವುಗಳ ಹೋಲಿಕೆ  

ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.


ಸ್ತ್ರೀಯು ಮುಸುಕು ಹಾಕಿಕೊಳ್ಳದಿದ್ದರೆ ಆಕೆಯು ಕೂದಲನ್ನು ತೆಗೆಯಿಸಿಬಿಡಬೇಕಷ್ಟೆ. ಆದರೆ ಕೂದಲನ್ನು ಕತ್ತರಿಸಿಕೊಳ್ಳುವುದಾಗಲಿ ತಲೆಬೋಳಿಸಿಕೊಳ್ಳುವುದಾಗಲಿ ಸ್ತ್ರೀಗೆ ಅವಮಾನಕರವಾಗಿದ್ದರೆ ಆಕೆಯು ಮುಸುಕನ್ನು ಹಾಕಿಕೊಳ್ಳಲಿ.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.


ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು, ನನ್ನ ಆತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಮೇಲೆ ಹಾಕಿಕೊಂಡಿದ್ದಿ.


ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು. ಯಾವುದೆಂದರೆ ಕೆಟ್ಟ ಹೆಂಗಸೇ. ಅವಳ ಹೃದಯವು ಉರುಲುಗಳೂ, ಬಲೆಗಳೂ, ಅವಳ ತೋಳುಗಳು ಸಂಕೋಲೆಗಳು. ದೇವರು ಒಲಿದವನು ಅವಳಿಂದ ತಪ್ಪಿಸಿಕೊಳ್ಳುವನು. ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು.


ಅವಳು ಕಡೆಯಲ್ಲಿ ವಿಷದಂತೆ ಕಹಿಯೂ, ಇಬ್ಬಾಯಿಕತ್ತಿಯಂತೆ ತೀಕ್ಷ್ಣವೂ ಆಗುವಳು.


ತರುವಾಯ ಸಮುವೇಲನು, “ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ಕರೆತನ್ನಿರಿ” ಎಂದನು. ಅಗಾಗನು ಮರಣಭಯ ತಪ್ಪಿತೆಂದು ನೆನಪಿಸಿಕೊಂಡು ಸಂತೋಷದಿಂದ ಅವನ ಹತ್ತಿರ ಬಂದನು.


“ಎಚ್ಚರಿಕೆಯಿಂದಿರಿ, ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಯರಾಗಲಿ, ಪುರುಷರಾಗಲಿ ನಿಮ್ಮಲ್ಲಿ ಇರಲೇ ಬಾರದು; ನಿಮ್ಮಲ್ಲಿ ಯಾವ ವಿಷದ ಬಳ್ಳಿಯ ಬೇರೂ ಇರಬಾರದು.


ಶಾಪವನ್ನುಂಟುಮಾಡುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆಯು ಉಬ್ಬುವಂತೆ ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ ನಿನ್ನ ಜನನೇಂದ್ರಿಯಗಳು ಬತ್ತಿ ಹೋಗುವಂತೆ ಮಾಡುವುದು.” ಅದಕ್ಕೆ ಆ ಸ್ತ್ರೀಯು, “ನಾನು ಅಪರಾಧಿಯಾಗಿದ್ದರೆ ಹಾಗೆಯೇ ಆಗಲಿ” ಎಂದು ಹೇಳಬೇಕು.


ಯಾಜಕನು ಮಣ್ಣಿನ ಪಾತ್ರೆಯಲ್ಲಿ ಪರಿಶುದ್ಧ ಜಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು.


ಆಗ ಅವನು ಮಾಡಬೇಕಾದದ್ದೇನೆಂದರೆ, ಆ ಪುರುಷನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು ಮತ್ತು ಅವಳ ಸಂಗತಿಯನ್ನು ವಿಚಾರಿಸುವುದಕ್ಕಾಗಿ ಅವನು ಯಾಜಕನಿಗೆ ಮೂರು ಸೇರು ಜವೆಗೋದಿಯ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರ ಸಂಶಯವನ್ನು ಸೂಚಿಸುವುದಕ್ಕೂ ಮತ್ತು ಪಾಪವನ್ನು ಹೊರಪಡಿಸುವುದಕ್ಕೂ ಯೆಹೋವನಿಗೆ ನೈವೇದ್ಯವಾದ ಕಾಣಿಕೆಯಾದುದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯ್ಯಲೂಬಾರದು, ಧೂಪವನ್ನು ಇಡಲೂಬಾರದು.


“ಯಾರಲ್ಲಿ ಕುಷ್ಠದ ಗುರುತು ಕಾಣಿಸಿತೋ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು, ತಲೆಯನ್ನು ಕೆದರಿಕೊಂಡು, ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು ‘ನಾನು ಅಶುದ್ಧನು, ಅಶುದ್ಧನು’ ಎಂದು ಕೂಗಿಕೊಳ್ಳಬೇಕು.


ಸ್ತ್ರೀಯು ಉದ್ದ ಕೂದಲು ಬೆಳೆಸಿಕೊಂಡರೆ ಅದು ಅವಳಿಗೆ ಮುಸುಕಿಗೆ ಬದಲಾಗಿ ನೀಡಲಾಗಿದ್ದು ಅದು ಅವಳಿಗೆ ಗೌರವವಾಗಿದೆಯೆಂದೂ ಸ್ವಾಭಾವಿಕವಾಗಿ ನಿಮಗೆ ತಿಳಿಯುತ್ತದಲ್ಲವೋ?


ಯಾಜಕನೂ ಅವಳಿಂದ ಪ್ರಮಾಣಮಾಡಿಸಿ ಹೀಗೆ ಹೇಳಬೇಕು, “ಒಬ್ಬ ಪರಪುರುಷನ ಸಂಗಮಮಾಡದಿದ್ದರೆ, ನಿನ್ನ ಗಂಡನನ್ನು ಬಿಟ್ಟು ನೀನು ಜಾರತ್ವ ಮಾಡದೇ ನಿರಪರಾಧಿಯಾಗಿದ್ದರೆ ಶಪಿಸಲ್ಪಟ್ಟ ವಿಷಕರವಾದ ಈ ನೀರು ನಿನಗೆ ಯಾವ ಹಾನಿಯನ್ನು ಮಾಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು