Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ನೀನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು, ‘ನೀವು ಇಸ್ರಾಯೇಲರನ್ನು ಹೀಗೆ ಆಶೀರ್ವದಿಸಬೇಕು. ಈ ಪ್ರಕಾರ ಅವರಿಗೆ ಹೇಳಬೇಕು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ”ನೀನು ಆರೋನನಿಗೂ ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು: ‘ನೀವು ಇಸ್ರಯೇಲರನ್ನು ಆಶೀರ್ವದಿಸುವಾಗ ಈ ಪ್ರಕಾರ ಹೇಳಬೇಕು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀನು ಆರೋನನಿಗೂ ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು - ನೀವು ಇಸ್ರಾಯೇಲ್ಯರನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ನೀನು ಆರೋನನಿಗೂ ಅವನ ಪುತ್ರರಿಗೂ ಹೀಗೆ ಆಜ್ಞಾಪಿಸು: ನೀವು ಇಸ್ರೇಲರನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ನೀನು ಆರೋನನಿಗೆ ಮತ್ತು ಅವನ ಪುತ್ರರಿಗೆ ಹೀಗೆ ಆಜ್ಞಾಪಿಸು, ‘ನೀವು ಇಸ್ರಾಯೇಲರನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:23
27 ತಿಳಿವುಗಳ ಹೋಲಿಕೆ  

ಅಮ್ರಾಮನ ಮಕ್ಕಳು ಆರೋನ್ ಮತ್ತು ಮೋಶೆ ಎಂಬುವವರು. ಆರೋನನು ಅವನ ಸಂತಾನದವರು ಮಹಾ ಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟರು. ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ, ಆತನ ಸೇವೆ ಮಾಡುವವರೂ, ಆತನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿದ್ದರು.


ಲೇವಿ ಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಬರಬೇಕು. ನಿಮ್ಮ ದೇವರಾದ ಯೆಹೋವನು ಅವರನ್ನೇ ತನ್ನ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಆರಿಸಿಕೊಂಡಿದ್ದಾನಲ್ಲಾ; ಅನುಮಾನವಾದ ಎಲ್ಲಾ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸುವವರು, ಅವರ ಮಾತುಗಳನ್ನು ಕೇಳಿರಿ.


ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದನು. ಈತನು ರಾಜರನ್ನು ಸಂಹಾರ ಮಾಡಿ ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು.


ಆ ದಿನದಲ್ಲಿ ಅವನು ಅವರನ್ನು ಆಶೀರ್ವದಿಸಿ, “ನಿಮ್ಮ ಹೆಸರಿನಲ್ಲಿ ಇಸ್ರಾಯೇಲರು ಆಶೀರ್ವದಿಸಲ್ಪಡುವರು. ಎಫ್ರಾಯೀಮ್ ಹಾಗೂ ಮನಸ್ಸೆಯ ಹಾಗೆ ದೇವರು ನಿಮ್ಮನ್ನೂ ಆಶೀರ್ವದಿಸಲಿ” ಎಂದು ಹೇಳಿ ಎಫ್ರಾಯೀಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.


ತಂದೆಯಾದ ದೇವರಿಂದಲೂ, ದೇವರ ಮಗನಾಗಿರುವ ಯೇಸು ಕ್ರಿಸ್ತನಿಂದಲೂ, ಕೃಪೆಯೂ, ಕರುಣೆಯೂ, ಶಾಂತಿಯೂ, ಸತ್ಯವೂ, ಪ್ರೀತಿಯೂ ಸದಾಕಾಲ ನಮ್ಮೊಂದಿಗಿರಲಿ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ, ದೇವರ ಪ್ರೀತಿಯೂ, ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.


ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಕರೆದುಕೊಂಡು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಲು, ಯಾಕೋಬನು ಫರೋಹನನ್ನು ಆಶೀರ್ವದಿಸಿದನು.


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.


ಆಶೀರ್ವಾದ ಹೊಂದುವವನಿಗಿಂತ ಆಶೀರ್ವದಿಸುವವನೇ ಹೆಚ್ಚಿನವನು ಎಂಬುದನ್ನು ನಿರಾಕರಿಸುವಂತಿಲ್ಲ.


ನಮ್ಮ ತಂದೆಯಾಗಿರುವ ದೇವರಿಂದಲೂ ಹಾಗೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಉಂಟಾಗಲಿ.


ಆತನ ಹೆಸರಿನ ಪ್ರಸಿದ್ಧಿಗಾಗಿ ನಂಬಿಕೆಯೆಂಬ ವಿಧೇಯತ್ವವು ಉಂಟಾಗುವುದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಮತ್ತು ಅಪೊಸ್ತಲತನವನ್ನೂ ಹೊಂದಿದೆವು.


ಎಲ್ಲಾ ಇಸ್ರಾಯೇಲ್ಯರು, ಅಂದರೆ ಹಿರಿಯರು, ಅಧಿಕಾರಿಗಳು, ನ್ಯಾಯಾಧಿಪತಿಗಳು, ಪರದೇಶದವರೂ ಹಾಗೂ ಸ್ವದೇಶಸ್ಥರೂ ಯೆಹೋವನ ಒಡಂಬಡಿಕೆಯ ಮಂಜೂಷದ ಎಡಬಲಗಳಲ್ಲಿ ಅದನ್ನು ಹೊತ್ತ ಲೇವಿಯರಾದ ಯಾಜಕರ ಎದುರಾಗಿ ನಿಂತುಕೊಂಡರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನರೂ, ಏಬಾಲ್ ಬೆಟ್ಟದ ಕಡೆ ಅರ್ಧ ಜನರೂ, ಹೀಗೆ ಯೆಹೋವನ ಸೇವಕನಾದ ಮೋಶೆಯು ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ನುಡಿಯುವುದಕ್ಕೋಸ್ಕರ ನಿಂತರು.


ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ತನ್ನ ಸನ್ನಿಧಿಯಲ್ಲಿ ಸೇವೆ ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದನು. ಅವರು ಇಂದಿನ ವರೆಗೂ ಆ ಕೆಲಸವನ್ನು ನಡಿಸುತ್ತಾರೆ.


ಪುನಃ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.


ದೇವಪುರುಷನಾದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಾಯೇಲರ ವಿಷಯವಾಗಿ ಹೇಳಿದ ಆಶೀರ್ವಾದವು:


ಮತ್ತು ರೆಬೆಕ್ಕಳಿಗೆ, “ತಂಗಿ, ನಿನ್ನಿಂದ ಸಾವಿರ, ಹತ್ತು ಸಾವಿರ ಸಂತಾನವಾಗಲಿ; ನಿನ್ನ ಸಂತಾನದವರು ತಮ್ಮ ವೈರಿಗಳ ಸ್ವತ್ತನ್ನು ಸ್ವಾಧೀನಮಾಡಿಕೊಳ್ಳಲಿ” ಎಂದು ಹೇಳಿ ಹರಸಿದರು.


ಅವರು ಮಾಡಿದ್ದ ಕೆಲಸವನ್ನು ಮೋಶೆಯು ಪರೀಕ್ಷಿಸಿ ನೋಡಲಾಗಿ ಯೆಹೋವನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿದ್ದರಿಂದ ಮೋಶೆಯು ಅವರನ್ನು ಆಶೀರ್ವದಿಸಿದನು.


ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,


ಇಸ್ರಾಯೇಲ್ ಸರ್ವಸಮೂಹದವರನ್ನು ಆಶೀರ್ವದಿಸಿ ಗಟ್ಟಿಯಾಗಿ ಹೇಳಿದ್ದೇನಂದರೆ,


ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಪ್ರಾರ್ಥನೆಯ ಸ್ವರವು ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ತಲುಪಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು