Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ’ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಸರ್ವೇಶ್ವರ ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಯೆಹೋವ ದೇವರು ತಮ್ಮ ಮುಖವನ್ನು ನಿಮ್ಮ ಕಡೆಗೆ ಎತ್ತಿ, ನಿಮಗೆ ಸಮಾಧಾನ ಅನುಗ್ರಹಿಸಲಿ.” ’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:26
24 ತಿಳಿವುಗಳ ಹೋಲಿಕೆ  

“ನಮಗೆ ಒಳ್ಳೆಯದನ್ನು ಮಾಡುವವರು ಯಾರಿದ್ದಾರೆ?” ಎಂದು ಅನೇಕರು ಹೇಳಿಕೊಳ್ಳುತ್ತಾರೆ. ಯೆಹೋವನೇ, ನೀನು ಪ್ರಸನ್ನಮುಖದಿಂದ ನಮ್ಮನ್ನು ನೋಡಬೇಕು.


ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ.


ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು; ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು.


ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.


ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.


ಜೀವದ ಮಾರ್ಗಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನನ್ನಾಗಮಾಡುವಿ’ ಎಂದು ಹೇಳಿದ್ದಾನೆ.


ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.


ಶಾಂತಿದಾಯಕವಾದ ದೇವರು ನಿಮ್ಮೆಲ್ಲರೊಂದಿಗಿರಲಿ. ಆಮೆನ್.


ಯೇಸು ಅವರಿಗೆ, “ನಿಮಗೆ ಸಮಾಧಾನವಾಗಲಿ” ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು.


ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ. ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.


ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.


ಯೆಹೋವನು ಮನುಷ್ಯರ ಬಾಯಿಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ, “ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು” ಎಂದು ಹೇಳುತ್ತಾನೆ.


ಯೆಹೋವನೇ, ನೀನು ನಮಗೆ ಸಮಾಧಾನವನ್ನು ವಿಧಿಸುವಿ, ಏಕೆಂದರೆ ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದಿ.


ಉತ್ಸಾಹಧ್ವನಿಯನ್ನು ತಿಳಿದಿರುವ ಜನರು ಧನ್ಯರು; ಯೆಹೋವನೇ, ಅವರು ನಿನ್ನ ಮುಖಪ್ರಕಾಶದಲ್ಲಿ ಸಂಚರಿಸುತ್ತಾರೆ.


ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವುದು.


ಎಲ್ಲಾ ಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿಸಿದ ವಾಕ್ಯವು ನಿಮಗೇ ತಿಳಿದಿದೆ.


ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ “ಸಮಾಧಾನವಾಗಲಿ ಎಂದನು”


“ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.


ಆತನೇ ನಮಗೆ ಸಮಾಧಾನಪ್ರದನು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಅರಮನೆಗಳನ್ನು ತುಳಿದುಹಾಕುವಾಗ, ನಾವು ಅವರಿಗೆ ವಿರುದ್ಧವಾಗಿ ಏಳು ಪಾಲಕರನ್ನು ಹೌದು ಎಂಟು ಪುರುಷಶ್ರೇಷ್ಠರನ್ನು ನೇಮಿಸುವೆವು.


ನಮ್ಮ ಪೂರ್ವಿಕರಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ; ನಿನ್ನ ಭುಜಬಲ, ಬಲಗೈ ಮತ್ತು ಪ್ರಸನ್ನತೆ ಅವರಿಗೆ ಜಯವನ್ನು ಉಂಟುಮಾಡಿದವು; ನಿನ್ನ ಸಹಾಯ ಸದಾಕಾಲ ಅವರಿಗಿತ್ತಲ್ಲಾ.


ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯೂ, ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರೆಲ್ಲರಿಗೆ ಉಂಟಾಗಲಿ.


ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು