Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ಅವನು ತನ್ನ ಹರಕೆಯ ದಿನಗಳಲ್ಲಿ ಕ್ಷೌರಮಾಡಿಸಿಕೊಳ್ಳಬಾರದು. ಅವನು ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ತಾನು ದೇವರಿಗೆ ಮೀಸಲಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವನು ತನ್ನ ವ್ರತ ದಿನಗಳಲ್ಲೆಲ್ಲಾ ಕ್ಷೌರ ಮಾಡಿಸಿಕೊಳ್ಳಬಾರದು. ತನ್ನನ್ನೇ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ವ್ರತಬದ್ಧನಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬೆಳೆಯಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ತನ್ನ ಹರಕೆಯ ದಿನಗಳಲ್ಲೆಲ್ಲಾ ಕ್ಷೌರಮಾಡಿಸಿಕೊಳ್ಳಬಾರದು. ಅವನು ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ತಾನು ಮೀಸಲಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಅವನ ವ್ರತದ ಕಾಲದಲ್ಲಿ ಕ್ಷೌರದ ಕತ್ತಿಯು ಅವನ ತಲೆಯನ್ನು ಸೋಂಕಬಾರದು. ಯೆಹೋವನಿಗೋಸ್ಕರ ಪ್ರತಿಷ್ಠಿತವಾದ ತನ್ನ ಕಾಲವನ್ನು ಪೂರ್ಣಗೊಳಿಸುವ ತನಕ ಅವನು ಪರಿಶುದ್ಧನಾಗಿರಬೇಕು. ತನ್ನ ವ್ರತದ ದಿನಗಳು ಮುಗಿಯುವ ತನಕ ಅವನು ಕೂದಲನ್ನು ಬೆಳೆಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ ‘ಅವರ ನಾಜೀರ ವ್ರತದ ದಿನಗಳಲ್ಲೆಲ್ಲಾ ಕ್ಷೌರಮಾಡಿಸಿಕೊಳ್ಳಬಾರದು. ಅವರು ಯೆಹೋವ ದೇವರಿಗೆ ತಮ್ಮನ್ನು ಪ್ರತ್ಯೇಕಿಸಿಕೊಂಡ ದಿವಸಗಳು ಪೂರ್ತಿಯಾಗುವವರೆಗೆ ಅವರು ಪರಿಶುದ್ಧರಾಗಿರುವರು, ಅವರು ತಮ್ಮ ತಲೆಗೂದಲನ್ನು ಕತ್ತರಿಸದೇ ಬೆಳೆಯಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:5
9 ತಿಳಿವುಗಳ ಹೋಲಿಕೆ  

“ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ” ಎಂದು ಪ್ರಾರ್ಥಿಸಿ ಹರಕೆಮಾಡಿದಳು.


ಆಗ ಅವನು, “ಕ್ಷೌರಕತ್ತಿಯು ನನ್ನ ತಲೆಯ ಮೇಲೆ ಮುಟ್ಟಿಸಿಲ್ಲ; ನಾನು ಮಾತೃಗರ್ಭದಿಂದಲೇ ದೇವರಿಗೆ ಪ್ರತಿಷ್ಠಿತನಾದವನು (ನಾಜೀರನು). ನನ್ನ ತಲೆಯನ್ನು ಕ್ಷೌರಮಾಡುವುದಾದರೆ ನನ್ನ ಶಕ್ತಿಯು ಹೋಗುವುದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು” ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿಹೇಳಿದನು.


ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇಬಾರದು; ಅವನು ಹುಟ್ಟಿದಂದಿನಿಂದ ದೇವರಿಗೆ ಪ್ರತಿಷ್ಠಿತನಾಗಿರುವನು; ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಲು ಪ್ರಾರಂಭಿಸುವನು” ಅಂದನು.


ಆಕೆಯು ಸಂಸೋನನನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡು ಅವನಿಗೆ ನಿದ್ರೆಹತ್ತಿದಾಗ ಒಬ್ಬ ಮನುಷ್ಯನಿಂದ ಅವನ ತಲೆಯ ಏಳು ಜಡೆಗಳನ್ನು ಬೋಳಿಸಿ, ಅವನನ್ನು ದುರ್ಬಲಪಡಿಸಿದಳು. ಅವನ ಶಕ್ತಿಯು ಅವನನ್ನು ಬಿಟ್ಟು ಹೋಯಿತು,


ಪೌಲನು ಇನ್ನು ಅನೇಕ ದಿನಗಳ ಕಾಲ ಅಲ್ಲಿದ್ದ ಅನಂತರ ಸಹೋದರರಿಂದ ಅಪ್ಪಣೆತೆಗೆದುಕೊಂಡು ತನಗೆ ದೀಕ್ಷೆ ಇದ್ದುದರಿಂದ ಕೆಂಖ್ರೆಯ ಪಟ್ಟಣದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಅವನ ಸಂಗಡ ಹೊರಟರು.


ಅವನು ಹರಕೆಮಾಡಿ ಪ್ರತಿಷ್ಠಿಸಿಕೊಂಡ ದಿನಗಳಲ್ಲೆಲ್ಲಾ ದ್ರಾಕ್ಷಾಲತೆಯಿಂದ ಬೆಳೆದ ಬೀಜವನ್ನಾಗಲಿ, ಸಿಪ್ಪೆಯನ್ನಾಗಲಿ ತಿನ್ನಬಾರದು.


“ಅವರು ತಲೆಬೋಳಿಸಿಕೊಳ್ಳದೆ; ಕೂದಲನ್ನು ಬೆಳಸದೆ, ತಮ್ಮ ತಲೆ ಕೂದಲನ್ನು ಕತ್ತರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು