Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿ ಅದನ್ನೂ, ಅದರ ಸಾಮಾನುಗಳನ್ನೂ, ಯಜ್ಞವೇದಿಯನ್ನೂ ಮತ್ತು ಯಜ್ಞವೇದಿಯ ಉಪಕರಣಗಳನ್ನೂ ಯೆಹೋವನಿಗಾಗಿ ಅಭಿಷೇಕಿಸಿ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ಮೇಲೆ ಅದನ್ನೂ ಅದರ ಸಾಮಾನುಗಳನ್ನೂ ಹಾಗೂ ಬಲಿಪೀಠವನ್ನು ಅದರ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿ ಅದನ್ನೂ ಅದರ ಸಾಮಾನುಗಳನ್ನೂ ಯಜ್ಞವೇದಿಯನ್ನೂ ವೇದಿಯ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮೋಶೆ ಪವಿತ್ರಗುಡಾರದ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿದ ಮೇಲೆ ಅದನ್ನು ಅದರ ವಸ್ತುಗಳೊಡನೆ, ಯಜ್ಞವೇದಿಕೆಯೊಡನೆ ಮತ್ತು ಅದರ ಎಲ್ಲಾ ಉಪಕರಣಗಳೊಡನೆ ಯೆಹೋವನಿಗಾಗಿ ಅಭಿಷೇಕಿಸಿ ಪ್ರತಿಷ್ಠಿಸಿದನು. ಇವು ಯೆಹೋವನ ಆರಾಧನೆಗಾಗಿ ಮಾತ್ರ ಉಪಯೋಗಿಸಲ್ಪಡುತ್ತವೆಂದು ಹೀಗೆ ಪ್ರತ್ಯೇಕಿಸಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮೋಶೆಯು ದೇವದರ್ಶನ ಗುಡಾರವನ್ನು ನಿಲ್ಲಿಸಿ, ಅಭಿಷೇಕಿಸಿ ಪರಿಶುದ್ಧ ಮಾಡಿದ ದಿನದಲ್ಲಿ ಅದರ ಎಲ್ಲಾ ಸಲಕರಣೆಗಳನ್ನೂ, ಬಲಿಪೀಠವನ್ನೂ, ಅದರ ಎಲ್ಲಾ ಸಾಮಗ್ರಿಗಳನ್ನೂ ಅಭಿಷೇಕಿಸಿ ಪರಿಶುದ್ಧ ಮಾಡಿದನು. ಅನಂತರ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:1
15 ತಿಳಿವುಗಳ ಹೋಲಿಕೆ  

ಯಜ್ಞವೇದಿ ಅಭಿಷೇಕಿಸಲ್ಪಟ್ಟ ದಿನದಲ್ಲಿ ಇಸ್ರಾಯೇಲರ ಕುಲಾಧಿಪತಿಗಳು, ಅದರ ಪ್ರತಿಷ್ಠೆಗಾಗಿ ಕೊಟ್ಟ ಕಾಣಿಕೆಗಳು ಒಟ್ಟಾಗಿ 12 ಬೆಳ್ಳಿಯ ತಟ್ಟೆಗಳು, 12 ಬೆಳ್ಳಿಯ ಬಟ್ಟಲುಗಳು, 12 ಚಿನ್ನದ ಧೂಪಾರತಿಗಳು.


ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಕಾಣಿಕೆಯೋ, ಆ ಕಾಣಿಕೆಯನ್ನು ಪ್ರತಿಷ್ಠೆ ಮಾಡುವ ಯಜ್ಞವೇದಿಯೋ?


ಯೆಹೋವನ ಆಲಯದ ಮುಂದಿರುವ ತಾಮ್ರದ ಯಜ್ಞವೇದಿಯು ಈ ಎಲ್ಲಾ ಸರ್ವಾಂಗಹೋಮ ದ್ರವ್ಯಗಳನ್ನೂ, ಧಾನ್ಯ ನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಹಿಡಿಯಲಾರದಷ್ಟು ‍ಚಿಕ್ಕದಾಗಿದ್ದುದರಿಂದ ಸೊಲೊಮೋನನು ಆ ದಿನ ದೇವಾಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ, ಅಲ್ಲಿ ಅವುಗಳನ್ನೆಲ್ಲಾ ಸಮರ್ಪಿಸಿದನು.


ಸಮಾಧಾನಯಜ್ಞಕ್ಕಾಗಿ ಕೊಟ್ಟ ಒಟ್ಟು ಪಶುಗಳು: 24 ಹೋರಿಗಳು, 60 ಟಗರುಗಳು, 60 ಹೋತಗಳು, ಒಂದು ವರ್ಷದ 60 ಕುರಿಗಳು, ಯಜ್ಞವೇದಿಯು ಅಭಿಷೇಕಿಸಲ್ಪಟ್ಟ ನಂತರ ಇದೇ ಅದರ ಪ್ರತಿಷ್ಠೆಗೆ ಸಮರ್ಪಿಸಲ್ಪಟ್ಟ ಕಾಣಿಕೆ.


“ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಪ್ರತಿಷ್ಠಿಸಬೇಕು. ಮನುಷ್ಯರಲ್ಲಾಗಲೀ, ಪಶುಗಳಲ್ಲಾಗಲೀ ಹುಟ್ಟುವ ಪ್ರಥಮ ಗರ್ಭಫಲವು ನನ್ನದಾಗಿದೆ” ಎಂದು ಹೇಳಿದನು.


ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.


ಮೋಶೆಯು ಯಜ್ಞವೇದಿಯನ್ನು ಅಭಿಷೇಕಿಸಿದ ದಿನದಲ್ಲಿ, ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಕಾಣಿಕೆಗಳನ್ನು ತಂದು ಅದರ ಮುಂದೆ ಇಟ್ಟರು.


ಪ್ರತಿದಿನವೂ ದೋಷಪರಿಹಾರಕ್ಕಾಗಿ ಒಂದು ಹೋರಿಯನ್ನು ಯಜ್ಞಮಾಡಬೇಕು. ಅದಲ್ಲದೆ ಯಜ್ಞವೇದಿಯನ್ನು ಶುದ್ಧಮಾಡುವುದಕ್ಕಾಗಿ ಅದರ ಮೇಲೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಿ, ಅದನ್ನು ದೇವರ ಸೇವೆಗಾಗಿ ಪ್ರತಿಷ್ಠಿಸುವುದಕ್ಕಾಗಿ ಅಭಿಷೇಕಿಸಬೇಕು.


ನೀನು ತಾಮ್ರದ ಬೋಗುಣಿಯನ್ನೂ ಅದರ ಪೀಠವನ್ನೂ ಅಭಿಷೇಕಿಸಿ ಪ್ರತಿಷ್ಠಿಸಬೇಕು.


“ನೀನು ಇಸ್ರಾಯೇಲರ ಸಂಗಡ ಮಾತನಾಡಿ, ‘ಅವರ ಪೂರ್ವಿಕರ ಒಂದೊಂದು ಕುಲದ ಅಧಿಪತಿಯಿಂದ ಗೋತ್ರಗಳ ಪ್ರಕಾರವಾಗಿ ಒಂದೊಂದು ಕೋಲುಗಳನ್ನು ತೆಗೆದುಕೊಳ್ಳಬೇಕು. ಗೋತ್ರಗಳ ಪ್ರಕಾರವಾಗಿ ಒಬ್ಬೊಬ್ಬ ಪ್ರಧಾನರ ಹೆಸರಿನಲ್ಲಿ ಹನ್ನೆರಡು ಕೋಲುಗಳನ್ನು ತೆಗೆದುಕೊಳ್ಳಬೇಕು. ಅವನವನ ಕೋಲಿನ ಮೇಲೆ ಅವರ ಹೆಸರನ್ನು ಬರೆಯಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು