Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮೋಶೆಯು ಯಜ್ಞವೇದಿಯನ್ನು ಅಭಿಷೇಕಿಸಿದ ದಿನದಲ್ಲಿ, ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಕಾಣಿಕೆಗಳನ್ನು ತಂದು ಅದರ ಮುಂದೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಬಲಿಪೀಠವನ್ನು ಅಭಿಷೇಕಿಸಿದ ದಿನದಂದು ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಕಾಣಿಕೆಗಳನ್ನು ತಂದು ಅದರ ಮುಂದೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯಜ್ಞವೇದಿಯು ಅಭಿಷೇಕಿಸಲ್ಪಟ್ಟ ದಿನದಲ್ಲಿ ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಕಾಣಿಕೆಗಳನ್ನು ತಂದು ಅದರ ಮುಂದೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ವೇದಿಕೆಯು ಅಭಿಷೇಕಿಸಲ್ಪಟ್ಟಾಗ, ಯಜ್ಞವೇದಿಕೆಯ ಆರಂಭಕ್ಕಾಗಿ ಪ್ರಧಾನರು ಸಹ ತಮ್ಮ ಕಾಣಿಕೆಗಳನ್ನು ವೇದಿಕೆಯ ಮುಂದೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬಲಿಪೀಠವನ್ನು ಅಭಿಷೇಕಿಸಿದ ದಿನದಂದು ಪ್ರತಿಷ್ಠೆಗಾಗಿ ಅದರ ಮುಂದೆ ಬಂದು, ಪ್ರಧಾನರು ತಮ್ಮ ಕಾಣಿಕೆಗಳನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:10
12 ತಿಳಿವುಗಳ ಹೋಲಿಕೆ  

ತರುವಾಯ ಎಂಟನೆಯ ದಿನದಲ್ಲಿ ಪರಿಶುದ್ಧ ಸಭೆ ನಡಿಸಿದರು. ಹೀಗೆ ಏಳು ದಿನ ಯಜ್ಞವೇದಿಯ ಪ್ರತಿಷ್ಠೆಯನ್ನು ಮತ್ತು ಇನ್ನು ಏಳು ದಿನ ಜಾತ್ರೆಯ ಹಬ್ಬವನ್ನು ಆಚರಿಸಿದರು.


ಯೆರೂಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು, ಕೀರ್ತನೆ ಗಾಯನಗಳಿಂದಲೂ ತಾಳ, ಸ್ವರಮಂಡಲ ಹಾಗು ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಕರೆಸಿಕೊಂಡರು.


ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ಇಪ್ಪತ್ತೆರಡು ಸಾವಿರ ಹೋರಿಗಳನ್ನು, ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸಿದನು. ಈ ಪ್ರಕಾರ ಅರಸನು ಮತ್ತು ಎಲ್ಲಾ ಇಸ್ರಾಯೇಲರು ಯೆಹೋವನ ದೇವಾಲಯವನ್ನು ಪ್ರತಿಷ್ಠೆ ಮಾಡಿದರು.


ಸೊಲೊಮೋನನು ಯೆಹೋವನಿಗೋಸ್ಕರ ಮಾಡಿದ ಸಮಾಧಾನಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ ಮತ್ತು ಕುರಿಗಳು ಲಕ್ಷದ ಇಪ್ಪತ್ತು ಸಾವಿರ, ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲರೂ ಯೆಹೋವನ ಆಲಯವನ್ನು ಪ್ರತಿಷ್ಠೆ ಮಾಡಿದರು.


ಮತ್ತು ಸೈನ್ಯಾಧಿಪತಿಗಳು ಅವರಿಗೆ, “ನಿಮ್ಮಲ್ಲಿ ಯಾವನಾದರೂ ಹೊಸ ಮನೆಯನ್ನು ಕಟ್ಟಿಸಿಕೊಂಡು ಇನ್ನು ಪ್ರತಿಷ್ಠೆ ಮಾಡದಿದ್ದರೆ ಅವನು ಆ ಮನೆಗೆ ಹೋಗಲಿ, ಅವನು ಯುದ್ಧಕ್ಕೆ ಬಂದು ಸತ್ತರೆ ಮತ್ತೊಬ್ಬನು ಆ ಮನೆಯಲ್ಲಿ ಗೃಹಪ್ರವೇಶ ಮಾಡಿಕೊಳ್ಳಬಹುದು.


ಯೆಹೋವನೇ, ನನ್ನ ಶತ್ರುಗಳು ಸಂತೋಷಿಸುವುದಕ್ಕೆ ಅವಕಾಶಕೊಡದೆ, ನನ್ನನ್ನು ಉದ್ಧರಿಸಿದ್ದರಿಂದ ನಿನ್ನನ್ನು ಕೊಂಡಾಡುವೆನು.


ದೇವರು ತಮಗೆ ವಿಶೇಷ ಆನಂದವನ್ನು ಉಂಟುಮಾಡಿದ್ದರಿಂದ, ಜನರು ಆ ದಿನದಲ್ಲಿ ಅನೇಕ ಯಜ್ಞಗಳನ್ನು ಸಮರ್ಪಿಸಿ ತಮ್ಮ ಹೆಂಡತಿ ಮಕ್ಕಳೊಡನೆ ಮಹೋತ್ಸವಮಾಡಿದರು. ಯೆರೂಸಲೇಮಿನ ಉತ್ಸವದ ಹರ್ಷಧ್ವನಿಯು ಬಹಳ ದೂರದವರೆಗೂ ಕೇಳಿಸಿತು.


ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿ ಅದನ್ನೂ, ಅದರ ಸಾಮಾನುಗಳನ್ನೂ, ಯಜ್ಞವೇದಿಯನ್ನೂ ಮತ್ತು ಯಜ್ಞವೇದಿಯ ಉಪಕರಣಗಳನ್ನೂ ಯೆಹೋವನಿಗಾಗಿ ಅಭಿಷೇಕಿಸಿ ಪ್ರತಿಷ್ಠಿಸಿದನು.


ಆಗ ಯೆಹೋವನು ಮೋಶೆಗೆ, “ಒಬ್ಬೊಬ್ಬ ಕುಲಾಧಿಪತಿಯು ತನಗೆ ನೇಮಕವಾದ ದಿನದಲ್ಲಿ ಯಜ್ಞವೇದಿಯ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ಸಮರ್ಪಿಸಬೇಕು” ಎಂದು ಆಜ್ಞಾಪಿಸಿದನು.


ಯಜ್ಞವೇದಿ ಅಭಿಷೇಕಿಸಲ್ಪಟ್ಟ ದಿನದಲ್ಲಿ ಇಸ್ರಾಯೇಲರ ಕುಲಾಧಿಪತಿಗಳು, ಅದರ ಪ್ರತಿಷ್ಠೆಗಾಗಿ ಕೊಟ್ಟ ಕಾಣಿಕೆಗಳು ಒಟ್ಟಾಗಿ 12 ಬೆಳ್ಳಿಯ ತಟ್ಟೆಗಳು, 12 ಬೆಳ್ಳಿಯ ಬಟ್ಟಲುಗಳು, 12 ಚಿನ್ನದ ಧೂಪಾರತಿಗಳು.


ಸಮಾಧಾನಯಜ್ಞಕ್ಕಾಗಿ ಕೊಟ್ಟ ಒಟ್ಟು ಪಶುಗಳು: 24 ಹೋರಿಗಳು, 60 ಟಗರುಗಳು, 60 ಹೋತಗಳು, ಒಂದು ವರ್ಷದ 60 ಕುರಿಗಳು, ಯಜ್ಞವೇದಿಯು ಅಭಿಷೇಕಿಸಲ್ಪಟ್ಟ ನಂತರ ಇದೇ ಅದರ ಪ್ರತಿಷ್ಠೆಗೆ ಸಮರ್ಪಿಸಲ್ಪಟ್ಟ ಕಾಣಿಕೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು