Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:89 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

89 ಮೋಶೆ ಯೆಹೋವನ ಸಂಗಡ ಮಾತನಾಡಬೇಕೆಂದು ದೇವದರ್ಶನದ ಗುಡಾರದೊಳಗೆ ಹೋದಾಗ ಆಜ್ಞಾಶಾಸನಗಳ ಮಂಜೂಷದ ಮೇಲಣ ಕೃಪಾಸನದ ಮೇಲಿನಿಂದ ಆ ಎರಡು ಕೆರೂಬಿಗಳ ನಡುವೆಯಿಂದ ತನ್ನ ಸಂಗಡ ಮಾತನಾಡುವ ಯೆಹೋವನ ಸ್ವರವು ಅವನಿಗೆ ಕೇಳಿಸಿತು. ಹೀಗೆ ಯೆಹೋವನು ಮೋಶೆಯ ಸಂಗಡ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

89 ಮೋಶೆ ಯೆಹೋವನ ಸಂಗಡ ಮಾತಾಡಬೇಕೆಂದು ದೇವದರ್ಶನದ ಗುಡಾರದೊಳಗೆ ಹೋದಾಗ ಆಜ್ಞಾಶಾಸನಗಳ ಮಂಜೂಷದ ಮೇಲಣ ಕೃಪಾಸನದ ಮೇಲಿನಿಂದ ಆ ಎರಡು ಕೆರೂಬಿಗಳ ನಡುವೆಯಿಂದ ತನ್ನ ಸಂಗಡ ಮಾತಾಡುವ ಯೆಹೋವನ ಸ್ವರವು ಅವನಿಗೆ ಕೇಳಿಸಿತು. ಹೀಗೆ ಆತನು ಅವನ ಸಂಗಡ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

89 ಮೋಶೆ ಯೆಹೋವನ ಸಂಗಡ ಮಾತಾಡಲು ದೇವದರ್ಶನಗುಡಾರದೊಳಗೆ ಹೋದಾಗ, ಒಡಂಬಡಿಕೆಯ ಪವಿತ್ರ ಪೆಟ್ಟಿಗೆಯ ಹೊದಿಕೆಯ ಮೇಲಿದ್ದ ಎರಡು ಕೆರೂಬಿಗಳ ಮಧ್ಯದಿಂದ ಯೆಹೋವನ ಸ್ವರವು ಮೋಶೆಗೆ ಕೇಳಿಸಿತು. ಹೀಗೆ ಆತನು ಅವನ ಸಂಗಡ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

89 ಮೋಶೆಯು ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಾಗ, ಅವನು ಒಡಂಬಡಿಕೆಯ ಮಂಜೂಷದ ಮೇಲೆ ಇರುವ ಕರುಣಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವ ಧ್ವನಿಯನ್ನು ಮೋಶೆಯು ಕೇಳಿದನು. ಹೀಗೆ ದೇವರು ಅವನ ಸಂಗಡ ಮಾತನಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:89
15 ತಿಳಿವುಗಳ ಹೋಲಿಕೆ  

ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂಮಿಯು ಕಂಪಿಸಲಿ.


ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.


ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.


ಇದಲ್ಲದೆ ಅವನು ಎಣ್ಣೇ ಮರದಿಂದ ಹತ್ತು ಮೊಳ ಎತ್ತರವಾದ ಎರಡು ಕೆರೂಬಿಗಳನ್ನು ಮಾಡಿಸಿ, ಅವುಗಳನ್ನು ಗರ್ಭಗೃಹದಲ್ಲಿ ಇರಿಸಿದನು.


ಕೆರೂಬಿಗಳ ಮಧ್ಯದಲ್ಲಿ ಆಸೀನನಾಗಿರುವ ಸೇನಾಧೀಶ್ವರ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.


ನಾನು ಅವನ ಸಂಗಡ ಗುಪ್ತವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರುದ್ಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?” ಎಂದನು.


ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸೀನಾಯಿ ಅರಣ್ಯದಲ್ಲಿ ದೇವದರ್ಶನದ ಗುಡಾರದೊಳಗೆ ಯೆಹೋವನು ಮೋಶೆಯ ಸಂಗಡ ಹೀಗೆ ಮಾತನಾಡಿದನು,


ಯೆಹೋವನು ಮೋಶೆಯನ್ನು ಕರೆದು ದೇವದರ್ಶನದ ಗುಡಾರದೊಳಗಿಂದ ಅವನ ಸಂಗಡ ಮಾತನಾಡಿ ಹೀಗೆಂದನು,


ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿಕೊಂಡಿತು.


ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಗೊಂಡಿದ್ದು ಯೆಹೋವನ ತೇಜಸ್ಸು ಪರಿಶುದ್ಧ ನಿವಾಸದ ತುಂಬಾ ಅವರಿಸಿ ಯೆಹೋವನ ಮಹಿಮೆಯು ಗುಡಾರದೊಳಗೆ ತುಂಬಿಕೊಂಡ್ದಿದರಿಂದಲೂ ಮೋಶೆಯು ಗುಡಾರದ ಒಳಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ.


ಯೆಹೋವನು ಮೋಶೆಯ ಸಂಗಡ ಮಾತನಾಡಿ, ಹೇಳಿದ್ದೇನೆಂದರೆ:


ನಾನು ಅಲ್ಲಿಗೆ ಇಳಿದು ಬಂದು ನಿನ್ನ ಸಂಗಡ ಮಾತನಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮದಲ್ಲಿ ಸ್ವಲ್ಪವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಹೊಣೆಯನ್ನು ವಹಿಸಬೇಕಾಗಿರುವುದಿಲ್ಲ; ನಿನ್ನ ಜೊತೆಯಲ್ಲಿ ಇವರೂ ಜವಾಬ್ದಾರಿ ವಹಿಸುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು