Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 8:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಲೇವಿಯರು ಯೆಹೋವನ ಸೇವಾಕಾರ್ಯವನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲರ ನಿಮಿತ್ತ ಅವರನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯದಂತೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಲೇವಿಯರು ಇಸ್ರಯೇಲರ ಪರವಾಗಿ ಸರ್ವೇಶ್ವರನ ಪರಿಚರ್ಯ ಮಾಡಲು ಯೋಗ್ಯರಾಗುವಂತೆ ಆರೋನನು ಅವರನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ನೈವೇದ್ಯದಂತೆ ಸಮರ್ಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಲೇವಿಯರು ಯೆಹೋವನ ಪರಿಚರ್ಯವನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲ್ಯರ ನಿವಿುತ್ತ ಅವರನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯದೋಪಾದಿಯಲ್ಲಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ಆರೋನನು ಲೇವಿಯರನ್ನು ಯೆಹೋವನಿಗೆ ಇಸ್ರೇಲರ ಕಾಣಿಕೆಯಾಗಿ ಕೊಡುವನು. ಈ ರೀತಿಯಾಗಿ ಲೇವಿಯರು ಯೆಹೋವನ ಪರಿಚರ್ಯ ಕೆಲಸಕ್ಕಾಗಿ ಸಿದ್ಧರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಲೇವಿಯರು ಇಸ್ರಾಯೇಲರ ಪರವಾಗಿ ಯೆಹೋವ ದೇವರ ಸೇವೆಯನ್ನು ಮಾಡುವುದಕ್ಕೆ ಸಿದ್ಧರಾಗುವಂತೆ ಆರೋನನು ಅವರನ್ನು ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯದಂತೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 8:11
9 ತಿಳಿವುಗಳ ಹೋಲಿಕೆ  

ಯೆಹೋವನಿಗೆ ಹೋಮರೂಪವಾಗಿ ಸಮರ್ಪಿಸಬೇಕಾದುದನ್ನು ಅಂದರೆ ಪಶುವಿನ ಕೊಬ್ಬನ್ನು ತನ್ನ ಕೈಯಿಂದಲೇ ಕೊಡಬೇಕು. ಅದರೊಂದಿಗೆ ಅದರ ಎದೆಯ ಭಾಗವನ್ನು ನೈವೇದ್ಯರೂಪವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವುದಕ್ಕಾಗಿ ತಂದು ಸಮರ್ಪಿಸಬೇಕು.


ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸಿ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಿಸಬೇಕು. ಅನಂತರ ಆ ನಾಜೀರನು ದ್ರಾಕ್ಷಾರಸವನ್ನು ಪಾನಮಾಡಬೇಕು.


ಮೋಶೆ ಅದರ ಎದೆಯ ಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು. ಯೆಹೋವನು ಆಜ್ಞಾಪಿಸಿದಂತೆ ಆ ಪಟ್ಟಾಭಿಷೇಕಯಜ್ಞದ ಟಗರಿನಲ್ಲಿ ಆ ಎದೆಯ ಭಾಗವೇ ಮೋಶೆಗೆ ಸಲ್ಲಬೇಕಾದದ್ದು.


ಅವನು ಅವೆಲ್ಲವುಗಳನ್ನು ಆರೋನನ ಮತ್ತು ಅವನ ಮಕ್ಕಳ ಕೈಗಳಿಗೆ ಕೊಟ್ಟು ನೈವೇದ್ಯವೆಂದು ಸೂಚಿಸುವುದಕ್ಕೆ ಯೆಹೋವನ ಸನ್ನಿಧಿಯಲ್ಲಿ ಅದನ್ನು ನಿವಾಳಿಸಿದನು.


ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಮಕ್ಕಳ ಕೈಗೆ ಕೊಟ್ಟು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ಅರ್ಪಿಸಬೇಕು.


ಇಸ್ರಾಯೇಲರು ಸಮಾಧಾನಯಜ್ಞಪಶುವಿನ ಮಾಂಸದಲ್ಲಿ ನೈವೇದ್ಯರೂಪವಾಗಿ ನಿವಾಳಿಸುವ ಎದೆಯ ಭಾಗವನ್ನು ಮತ್ತು ಯಾಜಕನಿಗೋಸ್ಕರ ಪ್ರತ್ಯೇಕಿಸುವ ತೊಡೆಯನ್ನು ನಾನು ತೆಗೆದುಕೊಂಡು ಮಹಾಯಾಜಕನಾದ ಆರೋನನಿಗೂ ಹಾಗು ಅವನ ವಂಶದವರಿಗೂ ಕೊಟ್ಟು ಇವು ಇಸ್ರಾಯೇಲರಿಂದ ಯಾಜಕರಿಗೆ ಯಾವಾಗಲೂ ಸಲ್ಲಬೇಕೆಂದು ಶಾಶ್ವತವಾದ ನಿಯಮವನ್ನು ಮಾಡಿದ್ದೇನೆ’” ಎಂದು ಹೇಳಿದನು.


ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ತನ್ನ ಸನ್ನಿಧಿಯಲ್ಲಿ ಸೇವೆ ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದನು. ಅವರು ಇಂದಿನ ವರೆಗೂ ಆ ಕೆಲಸವನ್ನು ನಡಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು