Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 8:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ಮೇಲೆ ಲೇವಿಯರು ತಮಗೆ ನೇಮಕವಾದ ಕೆಲಸವನ್ನು ದೇವದರ್ಶನ ಗುಡಾರದಲ್ಲಿ ಆರೋನನ ಮತ್ತು ಅವನ ಮಕ್ಕಳ ಕೈಕೆಳಗೆ ಆರಂಭಿಸಿದರು. ಅವರ ವಿಷಯದಲ್ಲಿ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇದಾದ ಮೇಲೆ ಲೇವಿಯರು ತಮಗೆ ನೇಮಕವಾದ ಕೆಲಸವನ್ನು ದೇವದರ್ಶನದ ಗುಡಾರದಲ್ಲಿ ಆರೋನನ ಮತ್ತು ಅವನ ಮಕ್ಕಳ ಕೈಕೆಳಗೆ ನಡೆಸಲಾರಂಭಿಸಿದರು. ಅವರ ಬಗ್ಗೆ ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಮೇಲೆ ಲೇವಿಯರು ತಮಗೆ ನೇಮಕವಾದ ಕೆಲಸವನ್ನು ದೇವದರ್ಶನದ ಗುಡಾರದಲ್ಲಿ ಆರೋನನ ಮತ್ತು ಅವನ ಮಕ್ಕಳ ಕೈಕೆಳಗೆ ನಡಿಸಲಾರಂಭಿಸಿದರು. ಅವರ ವಿಷಯದಲ್ಲಿ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಗ ಲೇವಿಯರು ದೇವದರ್ಶನಗುಡಾರದಲ್ಲಿ ಆರೋನನ ಮತ್ತು ಅವನ ಪುತ್ರರ ಮೇಲ್ವಿಚಾರಣೆಯಲ್ಲಿ ಕೆಲಸ ಮಾಡಲು ಅರ್ಹರಾದರು. ಯೆಹೋವನು ಮೋಶೆಗೆ ಲೇವಿಯರ ಬಗ್ಗೆ ಆಜ್ಞಾಪಿಸಿದ್ದಂತೆಯೇ ಅವರಿಗೆ ಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ತರುವಾಯ ಲೇವಿಯರು ದೇವದರ್ಶನದ ಗುಡಾರದಲ್ಲಿ ಆರೋನನ ಮುಂದೆಯೂ, ಅವನ ಪುತ್ರರ ಮುಂದೆಯೂ ಅವರ ಸೇವೆ ಮಾಡುವುದಕ್ಕೆ ಒಳಗೆ ಪ್ರವೇಶಿಸಿದರು. ಯೆಹೋವ ದೇವರು ಮೋಶೆಗೆ ಲೇವಿಯರ ವಿಷಯವಾಗಿ ಹೇಗೆ ಆಜ್ಞಾಪಿಸಿದರೋ, ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 8:22
9 ತಿಳಿವುಗಳ ಹೋಲಿಕೆ  

ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ಸರ್ವಾಂಗಹೋಮ, ಸಮಾಧಾನ ಯಜ್ಞ, ಇವುಗಳನ್ನು ಸಮರ್ಪಿಸುವುದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ, ಕೀರ್ತಿಸುತ್ತಾ, ಕೃತಜ್ಞತಾಸ್ತುತಿಮಾಡುತ್ತಾ ಇರುವುದಕ್ಕೂ ನೇಮಿಸಿದನು.


ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಪ್ರಾರ್ಥನೆಯ ಸ್ವರವು ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ತಲುಪಿತು.


“ಅದಾದ ನಂತರ ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ನೀನು ಅವರನ್ನು ಶುದ್ಧೀಕರಿಸಿ ನೈವೇದ್ಯದಂತೆ ಸಮರ್ಪಿಸಬೇಕು.


ಲೇವಿಯರು ತಮ್ಮನ್ನು ಶುದ್ಧಪಡಿಸಿಕೊಂಡು ಬಟ್ಟೆಗಳನ್ನು ಒಗೆದುಕೊಂಡರು. ಆರೋನನು ಅವರನ್ನು ನೈವೇದ್ಯದಂತೆ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿ, ಅವರನ್ನು ಶುದ್ಧೀಕರಿಸುವುದಕ್ಕಾಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.


ಪುನಃ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,


ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲರೆಲ್ಲರೂ ಮಾಡಿದರು.


ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವುದಕ್ಕಾಗಿ ಲೇವಿಯರನ್ನು ನೇಮಿಸಬೇಕು. ಅವರು ಆ ಗುಡಾರವನ್ನೂ ಮತ್ತು ಅದರ ಸಾಮಾನುಗಳನ್ನೂ ಹೊರುವುದಕ್ಕಾಗಿ ಇರಬೇಕು. ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು