Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 9:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಕೆಲವು ಜನರಿಗೆ ಮನುಷ್ಯನ ಶವಸೋಂಕು ಇದ್ದುದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗದೆ ಮೋಶೆ ಮತ್ತು ಆರೋನರ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದರೆ ಕೆಲವರು ನರಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿದ್ದರು. ಆದ್ದರಿಂದ ಪಾಸ್ಕಹಬ್ಬವನ್ನು ನಿಯಮಿತ ದಿನದಂದು ಆಚರಿಸಲಾಗಲಿಲ್ಲ. ಅವರು ಮೋಶೆ - ಆರೋನರ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ಕೆಲವು ಜನರು ಮನುಷ್ಯ ಶವ ಸೋಂಕಿದದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾರದೆ ಮೋಶೆ ಆರೋನರ ಬಳಿಗೆ ಬಂದು ಮೋಶೆಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಕೆಲವು ಜನರು ಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗಲಿಲ್ಲ. ಆದ್ದರಿಂದ ಅವರು ಆ ದಿನ ಮೋಶೆ ಆರೋನರ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಕೆಲವು ಜನರು ಮನುಷ್ಯನ ಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿ ಆ ದಿವಸದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗಲಿಲ್ಲ ಅದಕ್ಕೆ ಅದೇ ದಿನ ಅವರು ಮೋಶೆ ಮತ್ತು ಆರೋನರ ಬಳಿಗೆ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 9:6
16 ತಿಳಿವುಗಳ ಹೋಲಿಕೆ  

ಅವರು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಮೋಶೆ, ಮಹಾಯಾಜಕನಾದ ಎಲ್ಲಾಜಾರ್, ಕುಲಾಧಿಪತಿಗಳು, ಸರ್ವಸಮೂಹದವರೆಲ್ಲರ ಮುಂದೆ ನಿಂತು ಅವರಿಗೆ,


ಮೋಶೆ ತನ್ನ ಮಾವನಿಗೆ, “ದೇವರ ನಡೆಸುವಿಕೆಯನ್ನು ತಿಳಿದುಕೊಳ್ಳುವುದಕ್ಕಾಗಿ ಜನರು ನನ್ನ ಹತ್ತಿರ ಬರುತ್ತಾರೆ.


ಬಯಲಿನಲ್ಲಿರುವ ಯಾವನಾದರೂ ಕತ್ತಿಯಿಂದ ಕೊಲ್ಲಲ್ಪಟ್ಟವನಾದರೂ, ಯಾವನಿಗಾದರೂ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬಾಗಲಿ, ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.


“ಮನುಷ್ಯನ ಶವ ಸೋಂಕಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.


“ಕುಷ್ಠರೋಗಿಗಳನ್ನು, ಸಾಂಕ್ರಾಮಿಕವಾದ ಚರ್ಮರೋಗ ಇರುವವರನ್ನು, ಮೇಹಸ್ರಾವವುಳ್ಳವರನ್ನು ಹಾಗು ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.


ಮುಂಜಾನೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರೆದುಕೊಂಡು ಹೋದರು. ಅವರು ತಮಗೆ ಮೈಲಿಗೆಯಾಗಿ ಪಸ್ಕದ ಊಟ ಮಾಡುವುದಕ್ಕೆ ಅಡ್ಡಿಯಾದೀತೆಂದು ಅರಮನೆಯ ಒಳಗೆ ಹೋಗಲಿಲ್ಲ.


ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಬರಲಿಂದ ಮನುಷ್ಯನು ಸತ್ತ ಆ ಡೇರೆಯ ಮೇಲೆಯೂ, ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೆಯೂ ಚಿಮಿಕಿಸಬೇಕು. ಹಾಗೆಯೇ ಎಲುಬಾಗಲಿ, ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾವನಿಗೆ ಸೋಂಕುವುದೋ ಅವನ ಮೇಲೆಯೂ ನೀರನ್ನು ಚಿಮಿಕಿಸಬೇಕು.


ಇವರು ಯಾವಾಗಲೂ ಜನರಿಗೆ ನ್ಯಾಯತೀರಿಸುವವರಾಗಿ ಕಠಿಣ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಾ, ಸುಲಭವಾದ ವ್ಯಾಜ್ಯಗಳನ್ನು ತಾವೇ ತೀರಿಸುತ್ತಾ ಬಂದರು.


ನನ್ನ ಮಾತನ್ನು ಕೇಳು. ನಾನು ನಿನಗೆ ಒಂದು ಆಲೋಚನೆಯನ್ನು ಹೇಳುತ್ತೇನೆ ಮತ್ತು ದೇವರು ನಿನ್ನ ಸಂಗಡ ಇರಲಿ. ನೀನು ಜನರಿಗೂ, ದೇವರಿಗೂ ಮಧ್ಯಸ್ಥನಾಗಿದ್ದು ಜನರ ವ್ಯಾಜ್ಯಗಳನ್ನು ದೇವರ ಹತ್ತಿರಕ್ಕೆ ತರಬೇಕು.


ಮೋಶೆಯು ಅವರ ವಿಜ್ಞಾಪನೆಯನ್ನು ಯೆಹೋವನ ಸಮ್ಮುಖದಲ್ಲಿ ವಿಚಾರಿಸಿದನು.


ಅದನ್ನು ನೋಡಿದವರು ಅವನನ್ನು ಮೋಶೆ, ಆರೋನರ ಮತ್ತು ಸರ್ವಸಮೂಹದವರ ಬಳಿಗೆ ಹಿಡಿದುಕೊಂಡು ಬಂದರು.


ಅವನು ಯೆಹೋವನ ಹೆಸರನ್ನು ದೂಷಿಸಿ ಆತನನ್ನು ಶಪಿಸಿದ್ದರಿಂದ ಅವರು ಅವನನ್ನು ಮೋಶೆಯ ಬಳಿಗೆ ಹಿಡಿದು ಕರೆದುಕೊಂಡು ಬಂದರು. ಅವನ ತಾಯಿಯು ದಾನ್ ಕುಲದ ದಿಬ್ರೀಯ ಮಗಳಾದ ಶೆಲೋಮೀತ್ ಎಂಬುವವಳು.


ಅವನು ಶವವಿರುವ ಯಾವ ಸ್ಥಳಕ್ಕೂ ಹೋಗಬಾರದು. ತಂದೆತಾಯಿಗಳ ಮರಣದ ನಿಮಿತ್ತ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.


ಈ ಜನರು ಮೋಶೆಗೆ “ಮನುಷ್ಯನ ಶವಸೋಂಕಿದರಿಂದ ನಾವು ಅಶುದ್ಧರಾದೆವು. ನಾವು ಉಳಿದ ಇಸ್ರಾಯೇಲರೊಡನೆ ನೇಮಕವಾದ ಕಾಲದಲ್ಲಿ ಯೆಹೋವನಿಗೆ ಯಜ್ಞವನ್ನು ಸಮರ್ಪಿಸುವುದಕ್ಕೆ ಅಪ್ಪಣೆಯಿಲ್ಲವೋ?” ಎಂದು ಕೇಳಿದರು.


“ಯಾರಾದರೂ ಡೇರೆಯಲ್ಲಿ ಸತ್ತರೆ ಅವನ ವಿಷಯವಾದ ನಿಯಮವೇನೆಂದರೆ: ಆ ಡೇರೆಯಲ್ಲಿರುವವರೆಲ್ಲರೂ ಮತ್ತು ಅದರೊಳಗೆ ಪ್ರವೇಶಿಸುವವರು ಏಳು ದಿನಗಳವರೆಗೆ ಅಶುದ್ಧರಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು