Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 9:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದಕ್ಕೆ ಮೋಶೆ ಅವರಿಗೆ, “ಸ್ವಲ್ಪ ಕಾದುಕೊಂಡಿರಿ. ನಿಮ್ಮ ವಿಷಯದಲ್ಲಿ ಯೆಹೋವನು ಏನು ಅಪ್ಪಣೆಮಾಡುವನೋ ನಾನು ವಿಚಾರಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರಿಗೆ ಮೋಶೆ, “ಸ್ವಲ್ಪ ತಾಳಿ, ಸರ್ವೇಶ್ವರ ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುತ್ತಾರೋ ಎಂದು ವಿಚಾರಿಸುತ್ತೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸ್ವಲ್ಪ ಕಾದು ಕೊಂಡಿರ್ರಿ; ನಿಮ್ಮ ವಿಷಯದಲ್ಲಿ ಯೆಹೋವನು ಏನು ಅಪ್ಪಣೆಮಾಡುವನೋ ನಾನು ವಿಚಾರಿಸುತ್ತೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮೋಶೆಯು ಅವರಿಗೆ, “ಇಲ್ಲೇ ಇರಿ. ಇದರ ವಿಷಯದಲ್ಲಿ ಯೆಹೋವನು ಏನು ಹೇಳುತ್ತಾನೆಂದು ನಾನು ಆತನನ್ನು ವಿಚಾರಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮೋಶೆ ಅವರಿಗೆ, “ಸ್ವಲ್ಪ ಕಾಯಿರಿ, ಯೆಹೋವ ದೇವರು ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುತ್ತಾರೋ ನಾನು ಕೇಳುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 9:8
19 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ. ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ. ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ.


ಮೋಶೆಯು ಅವರ ವಿಜ್ಞಾಪನೆಯನ್ನು ಯೆಹೋವನ ಸಮ್ಮುಖದಲ್ಲಿ ವಿಚಾರಿಸಿದನು.


ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನೆಂದರೆ, ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು,


ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಿಗೆ ತೋರುವುದಿಲ್ಲವಾದರೂ ನಾನು ನಿರ್ದೋಷಿಯೆಂದು ನಿರ್ಣಯಿಸುವಂತಿಲ್ಲ. ನನ್ನನ್ನು ನ್ಯಾಯವಿಚಾರಣೆ ಮಾಡುವವನು ಕರ್ತನೇ.


ಏಕೆಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.


ಹೇಗೆಂದರೆ, ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿದ್ದಾರೆ ಮತ್ತು ನಾನು ನಿನ್ನ ಬಳಿಯಿಂದ ಬಂದವನೆಂದು ಇವರು ನಿಜವಾಗಿ ತಿಳಿದು, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ನಂಬಿದ್ದಾರೆ.


ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.


“ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.


ಅವರು ಕೇಳಿದರೂ, ಕೇಳದೆ ಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿ ದ್ರೋಹಿಗಳೇ.”


ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.


ಈ ಸಮೂಹದೊಂದಿಗೆ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇಮಿನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ಮಾಡುವ ರಕ್ಷಣಾ ಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು” ಎಂದು ಹೇಳಿದನು.


ಆದರೆ ಮೋಶೆ ಆ ಜನರಿಗೆ, “ನೀವು ಅಂಜಬೇಡಿರಿ. ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವುದಿಲ್ಲ.


ಮೋಶೆ ತನ್ನ ಮಾವನಿಗೆ, “ದೇವರ ನಡೆಸುವಿಕೆಯನ್ನು ತಿಳಿದುಕೊಳ್ಳುವುದಕ್ಕಾಗಿ ಜನರು ನನ್ನ ಹತ್ತಿರ ಬರುತ್ತಾರೆ.


ಈ ಜನರು ಮೋಶೆಗೆ “ಮನುಷ್ಯನ ಶವಸೋಂಕಿದರಿಂದ ನಾವು ಅಶುದ್ಧರಾದೆವು. ನಾವು ಉಳಿದ ಇಸ್ರಾಯೇಲರೊಡನೆ ನೇಮಕವಾದ ಕಾಲದಲ್ಲಿ ಯೆಹೋವನಿಗೆ ಯಜ್ಞವನ್ನು ಸಮರ್ಪಿಸುವುದಕ್ಕೆ ಅಪ್ಪಣೆಯಿಲ್ಲವೋ?” ಎಂದು ಕೇಳಿದರು.


ಆಗ ಯೆಹೋವನು ಮೋಶೆ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,


ಅಂಥವನಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯದಲ್ಲಿ ಆ ವರೆಗೂ ನಿಯಮವೇ ಇರಲಿಲ್ಲವಾದ ಕಾರಣ ಅವರು ಅವನನ್ನು ಕಾವಲಲ್ಲಿಟ್ಟರು.


ಅವನ ವಿಷಯವಾಗಿ ಯೆಹೋವನ ತೀರ್ಪನ್ನು ತಿಳುಕೊಳ್ಳುವ ತನಕ ಅವನನ್ನು ಕಾವಲಲ್ಲಿರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು