Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆದಿಯಲ್ಲಿ ದೇವರು ಪರಲೋಕ - ಭೂಲೋಕವನ್ನು ಸೃಷ್ಟಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆದಿಯಲ್ಲಿ ದೇವರು ಆಕಾಶವನ್ನೂ ಭೂವಿುಯನ್ನೂ ಉಂಟುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:1
67 ತಿಳಿವುಗಳ ಹೋಲಿಕೆ  

ವಿಶ್ವವು ದೇವರ ಮಾತಿನಿಂದಲೇ ನಿರ್ಮಿತವಾಯಿತೆಂದು ನಾವು ನಂಬಿಕೆಯಿಂದಲೇ ತಿಳಿದುಕೊಂಡಿದ್ದೇವೆ. ಈ ಕಾರಣದಿಂದ ಕಾಣಿಸುವ ಈ ಜಗತ್ತು ದೃಶ್ಯವಸ್ತುಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.


ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ, ಆತನೇ ದೇವರು. ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು. ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗೆನ್ನುತ್ತಾನೆ, “ನಾನೇ ಯೆಹೋವನು, ಇನ್ನು ಯಾರೂ ಇಲ್ಲ.


“ಕರ್ತನೇ ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ. ಆಕಾಶವು ನಿನ್ನ ಕೈಕೆಲಸವಾಗಿದೆ,


ಆಕಾಶಮಂಡಲವನ್ನು ಉಂಟುಮಾಡಿ ಹರಡಿ ಭೂಮಂಡಲವನ್ನೂ, ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, ಭೂಜನರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗೆನ್ನುತ್ತಾನೆ,


ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದುದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.


ನಾನು ಲೋಕಕ್ಕೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿದ್ದಿ? ನೀನು ಜ್ಞಾನಿಯಾಗಿದ್ದರೆ ಹೇಳು.


“ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ, ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವುದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವವನಲ್ಲ;


ಆದರೆ ಪೂರ್ವಕಾಲದಲ್ಲಿ ಭೂಮ್ಯಾಕಾಶಗಳು ದೇವರ ವಾಕ್ಯದ ಮೂಲಕ ನೀರಿನೊಳಗಿನಿಂದ ಹಾಗೂ ನೀರಿನಿಂದ ರೂಪಿಸಲ್ಪಟ್ಟಿತೆಂಬುದನ್ನು ಅವರು ಉದ್ದೇಶರ್ಪೂವಕವಾಗಿಯೇ ಮರೆತುಬಿಡುತ್ತಾರೆ.


ಯೆಹೋವನೇ ನೀನೊಬ್ಬನೇ ದೇವರು; ನೀನು ಉನ್ನತೋನ್ನತವಾದ ಆಕಾಶವನ್ನೂ, ಅದರ ಸೈನ್ಯವನ್ನೂ, ಭೂಮಿಯನ್ನೂ ಅದರ ಮೇಲಿರುವುದನ್ನೂ, ಸಮುದ್ರಗಳನ್ನೂ ಎಲ್ಲಾ ಜಲಚರಗಳನ್ನೂ ಉಂಟುಮಾಡಿ, ಸಮಸ್ತ ಪ್ರಾಣಿಗಳಿಗೂ ಜೀವಕೊಡುವಾತನಾಗಿರುತ್ತೀ. ಆಕಾಶಸೈನ್ಯದವರು ನಿನ್ನನ್ನು ಆರಾಧಿಸುತ್ತಾರೆ.


ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ, “ಸರ್ವವನ್ನು ಉಂಟುಮಾಡಿದ ಕರ್ತನಾದ ಯೆಹೋವನು ನಾನೇ, ನಾನೊಬ್ಬನೇ ಗಗನಮಂಡಲವನ್ನು ಹರಡಿ, ಭೂಮಂಡಲವನ್ನು ವಿಸ್ತರಿಸಿದ್ದೇನೆ.


“ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.


ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶಮಂಡಲವನ್ನು ವಿಸ್ತರಿಸಿದ್ದಾನೆ.


ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.


ಯೆಹೋವನು ಜ್ಞಾನದ ಮೂಲಕ ಭೂಮಿಯನ್ನು ಸ್ಥಾಪಿಸಿ, ವಿವೇಕದ ಮುಖಾಂತರ ಆಕಾಶಮಂಡಲವನ್ನು ಸ್ಥಿರಪಡಿಸಿದನು.


ಆ ದೂತನು, “ನೀವೆಲ್ಲರೂ ದೇವರಿಗೆ ಭಯಪಟ್ಟು ಆತನಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಆತನು ನ್ಯಾಯತೀರ್ಪು ಮಾಡುವ ಸಮಯವು ಬಂದಿದೆ. ಭೂಲೋಕ ಪರಲೋಕಗಳನ್ನೂ, ಸಮುದ್ರವನ್ನೂ, ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನನ್ನು ಆರಾಧಿಸಿರಿ” ಎಂದು ಮಹಾಧ್ವನಿಯಿಂದ ಹೇಳಿದನು.


ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. ಆತನು ಭೂಪರಲೋಕಗಳನ್ನು ಉಂಟುಮಾಡಿದ್ದಾನೆ.


“ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.


ಆತನು ಆಕಾಶವನ್ನು ಜ್ಞಾನದಿಂದ ನಿರ್ಮಿಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು.


ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ.


“ನಮಗಾದರೋ ಒಬ್ಬನೇ ತಂದೆಯಾದ ದೇವರು; ಆತನೇ ಸಮಸ್ತಕ್ಕೂ ಮೂಲಕಾರಣನು; ನಾವು ಜೀವಿಸುವುದು ಆತನಿಗಾಗಿಯೇ, ಮತ್ತು ಒಬ್ಬನೇ ಕರ್ತನಾದ ಯೇಸು ಕ್ರಿಸ್ತನೆಂಬ ಏಕ ಕರ್ತನು ನಮಗಿದ್ದಾನೆ. ಆತನ ಮುಖಾಂತರವೇ ಸಮಸ್ತವೂ ಉಂಟಾಯಿತು. ನಾವೂ ಆತನ ಮುಖಾಂತರ ಉಂಟಾದೆವು.”


ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ, ನೀನು ಉಂಟುಮಾಡಿದ ಚಂದ್ರ ಮತ್ತು ನಕ್ಷತ್ರಗಳನ್ನೂ ನಾನು ನೋಡುವಾಗ,


ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದಿ; ಗಗನಮಂಡಲವು ನಿನ್ನ ಕೈಕೆಲಸವಾಗಿದೆ.


ಪ್ರತಿಯೊಂದು ಮನೆಯನ್ನು ಯಾರೊಬ್ಬನು ಕಟ್ಟಿರುವನು, ಆದರೆ ಸಮಸ್ತವನ್ನು ಕಟ್ಟಿದಾತನು ದೇವರೇ.


ಭೂಮಿ, ಆಕಾಶಗಳನ್ನು ಉಂಟುಮಾಡಿದ, ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು.


ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು.


ಯೆಹೋವನು ಒಂದೊಂದನ್ನೂ ತಕ್ಕ ಗುರಿಯಿಂದ ಸೃಷ್ಟಿಸಿದ್ದಾನೆ, ಹೌದು, ಕೇಡಿನ ದಿನಕ್ಕಾಗಿ ಕೆಡುಕರನ್ನು ಉಂಟುಮಾಡಿದ್ದಾನೆ.


ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; ಅದರಲ್ಲಿರುವುದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು.


ಭೂಮಿ, ಆಕಾಶಗಳನ್ನು ನಿರ್ಮಿಸಿದ ಯೆಹೋವನಿಂದಲೇ, ನನ್ನ ಸಹಾಯವು ಬರುತ್ತದೆ.


ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶ ಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ, ಮನುಷ್ಯರೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ,


ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ, ಭೂಮಿಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ. ಆತನು ದಣಿದು ಬಳಲುವುದಿಲ್ಲ, ಆತನ ವಿವೇಕವು ಪರಿಶೋಧನೆಗೆ ಅಗಮ್ಯ.


ಯೆಹೋವನೇ, ನಿನ್ನ ಕೈಕೆಲಸಗಳು ಬಗೆ ಬಗೆಯಾಗಿವೆ. ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿರುವೆ; ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ.


ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದನು.


ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ, ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ, ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ, ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ ಆಣೆಯಿಟ್ಟು, “ಇನ್ನು ತಡಮಾಡದೆ,


ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್.


ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು;, “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,


ಬೆಟ್ಟಗಳು ಉಂಟಾಗುವುದಕ್ಕಿಂತ ಮೊದಲೇ, ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲೇ, ಯುಗಯುಗಾಂತರಗಳಲ್ಲಿಯೂ ನೀನೇ ದೇವರು.


ಆಕಾಶವನ್ನು ನಿಲ್ಲಿಸಬೇಕೆಂತಲೂ, ಭೂಲೋಕವನ್ನು ಸ್ಥಾಪಿಸಬೇಕೆಂತಲೂ, ಚೀಯೋನಿಗೆ, “ನೀವು ನನ್ನ ಜನರು” ಎಂದು ಹೇಳಬೇಕೆಂದು ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟು, ನನ್ನ ಕೈಯ ನೆರಳಿನಲ್ಲಿ ನಿನ್ನನ್ನು ಹುದುಗಿಸಿದ್ದೇನೆ.


“ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್ ದೇವರೇ, ಸೇನಾಧೀಶ್ವರನಾದ ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕ ಭೂಲೋಕಗಳನ್ನು ಉಂಟುಮಾಡಿದವನು ನೀನೇ.


ಭೂಮಿ, ಆಕಾಶ, ಸಾಗರ, ಜಲಚರ ಇವುಗಳನ್ನು ನಿರ್ಮಿಸಿದವನೂ, ವಾಗ್ದಾನವನ್ನು ಯಾವಾಗಲೂ ನೆರವೇರಿಸುವವನೂ,


ಭೂಮ್ಯಾಕಾಶಗಳನ್ನು ಉಂಟುಮಾಡಿದ ಯೆಹೋವನು, ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.


ನಾನೇ ಆದಿಯೂ, ಅಂತ್ಯವೂ, ಮೊದಲನೆಯವನೂ, ಕಡೆಯವನೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ.


ನಾವು ನಿಮಗೆ ಪ್ರಚುರಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನಸ್ಸಿಟ್ಟು ಗ್ರಹಿಸಿ ಕೈಯಿಂದ ಮುಟ್ಟಿದ್ದೂ ಆಗಿರುವಂತದ್ದು.


ಅಂಥ ಸಂಕಟವು ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ಈ ದಿನದವರೆಗೂ ಆಗಲಿಲ್ಲ; ಇನ್ನು ಮುಂದೆ ಆಗುವುದೂ ಇಲ್ಲ.


ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ! ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಈ ಸೈನ್ಯವನ್ನು ಲೆಕ್ಕಕ್ಕೆ ಸರಿಯಾಗಿ ಮುಂದುವರಿಸುತ್ತಾನೆ. ಎಲ್ಲವನ್ನೂ ಹೆಸರೆತ್ತಿ ಕರೆಯುತ್ತಾನೆ; ಆತನು ಅತಿ ಬಲಾಢ್ಯನೂ, ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ಕಡಿಮೆಯಾಗದು.


ನೀನು ಜೀವಶ್ವಾಸವನ್ನು ಊದಲು ಅವು ಹೊಸದಾಗಿ ಹುಟ್ಟುತ್ತವೆ. ನೀನು ಭೂಮಿಯನ್ನು ನೂತನಪಡಿಸುತ್ತಿರುತ್ತಿ.


ಜನಾಂಗಗಳ ದೇವತೆಗಳೆಲ್ಲಾ ಬರೀ ಬೊಂಬೆಗಳೇ. ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದವನು.


ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು.


ಹಾಗೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಗುಪ್ತವಾಗಿದ ಮರ್ಮದ ಯೋಜನೆಯನ್ನು ಎಲ್ಲಾರಿಗೂ ತಿಳಿಸುವಂತಹ ಕೃಪೆಯು ದೇವಜನರೊಳಗೆ ಅತ್ಯಲ್ಪನಾದ ನನಗೆ ಕೊಡಲ್ಪಟ್ಟಿತು.


ಆಕಾಶಮಂಡಲವನ್ನು ಹರಡಿ, ಭೂಲೋಕವನ್ನು ಸ್ಥಾಪಿಸಿದ ನಿನ್ನ ಸೃಷ್ಟಿಕರ್ತನಾದ ಯೆಹೋವನನ್ನು ಮರೆತುಬಿಟ್ಟೆಯಾ? ನಾಶಮಾಡಬೇಕೆಂದು ಬಾಣವನ್ನು ಹೂಡುವ ಹಿಂಸಕನ ಕ್ರೋಧಕ್ಕೆ ದಿನವೆಲ್ಲಾ ಎಡೆಬಿಡದೆ ಅಂಜುತ್ತೀಯಾ? ಆ ಹಿಂಸಕನ ಕ್ರೋಧವು ಎಲ್ಲಿ ಇದೆ?


“ಇಗೋ, ನೂತನ ಆಕಾಶಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಸೃಷ್ಟಿಸುವೆನು; ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆ ಬಾರದು.


“ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ, ನಂಬಿಗಸ್ತನೂ, ಸತ್ಯ ಸಾಕ್ಷಿಯೂ, ದೇವರ ಸೃಷ್ಟಿಗೆ ಮೂಲನೂ ಆಗಿರುವ ‘ಆಮೆನ್’ ಎಂಬಾತನು ಹೇಳುವುದೇನಂದರೆ,


ಆತನ ಶ್ವಾಸವು ಆಕಾಶಮಂಡಲವನ್ನು ಶುಭ್ರಮಾಡುವುದು, ಆತನ ಹಸ್ತವು ವೇಗವಾಗಿ ಓಡುವ ಸರ್ಪವನ್ನು ಇರಿಯುವುದು.


ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ” ಎಂದು, ನೀನು ಹೇಳುವ ವರ್ಷಗಳು ಸಮೀಪಿಸುವುದರೊಳಗಾಗಿ, ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು.


ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.


ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡುವುದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಬರೆಯಲ್ಪಟ್ಟ ಶಿಲಾಶಾಸನಗಳಾಗಿವೆ.


ಆಕಾಶಮಂಡಲವನ್ನು ವಿಶಾಲಪಡಿಸಿದವನು ಆತನೊಬ್ಬನೇ. ಅಲ್ಲಕಲ್ಲೋಲವಾದ ಸಮುದ್ರದ ಮೇಲೆ ನಡೆಯುತ್ತಾನೆ.


ನಿಮಗೆ ತಿಳಿದಿಲ್ಲವೋ? ನೀವು ಕೇಳಲಿಲ್ಲವೋ? ಆದಿಯಿಂದಲೇ ನಿಮಗೆ ಉಪದೇಶವಾಗಿ ಬಂದಿಲ್ಲವೋ? ಭೂಮಿಯು ನಿರ್ಮಾಣವಾದ ದಿನದಿಂದ ನೀವು ಗ್ರಹಿಸುತ್ತಿಲ್ಲವೋ?


ಹಿಜ್ಕೀಯನು ಯೆಹೋವನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲರ ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕಭೂಲೋಕಗಳನ್ನು ಉಂಟುಮಾಡಿದವನು ನೀನೇ.


ತೂರಿನ ಅರಸನಾದ ಹೂರಾಮನು ಸೊಲೊಮೋನನಿಗೆ ಪತ್ರದ ಮೂಲಕ ತನ್ನ ಒಪ್ಪಿಗೆ ಸೂಚಿಸಿದನು. “ಯೆಹೋವನು ತನ್ನ ಪ್ರಜೆಗಳನ್ನು ಪ್ರೀತಿಸುವವನಾಗಿರುವುದರಿಂದ ನಿನ್ನನ್ನು ಅವರ ಅರಸನನ್ನಾಗಿ ನೇಮಿಸಿದ್ದಾನೆ.”


ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಏಕೆ ಸ್ಮರಿಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು