Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಬಳಿಕ ದೇವರು, “ಆಕಾಶ ಮಂಡಲದಲ್ಲಿ ಬೆಳಕುಗಳು ಉಂಟಾಗಲಿ. ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ. ಅವು ಕಾಲಗಳನ್ನೂ, ದಿನಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದಾದನಂತರ ದೇವರು,“ಹಗಲು ಇರುಳುಗಳನ್ನು ಬೇರೆಬೇರೆ ಮಾಡಲು ಋತುಕಾಲಗಳನ್ನೂ ದಿನಸಂವತ್ಸರಗಳನ್ನೂ ಸೂಚಿಸಲು, ಹಾಗು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಬಳಿಕ ದೇವರು - ಆಕಾಶಮಂಡಲದಲ್ಲಿ ಬೆಳಕುಗಳು ಉಂಟಾಗಲಿ; ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ; ಇದಲ್ಲದೆ ಅವು ಗುರುತುಗಳಾಗಿದ್ದು ಸಮಯಗಳನ್ನೂ ದಿನಸಂವತ್ಸರಗಳನ್ನೂ ತೋರಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಬಳಿಕ ದೇವರು, “ಆಕಾಶದಲ್ಲಿ ಬೆಳಕುಗಳು ಉಂಟಾಗಲಿ. ಈ ಬೆಳಕುಗಳು ಹಗಲುರಾತ್ರಿಗಳನ್ನು ಬೇರ್ಪಡಿಸಲಿ. ಈ ಬೆಳಕುಗಳು ವಿಶೇಷವಾದ ಗುರುತುಗಳಾಗಿದ್ದು, ವಿಶೇಷವಾದ ಸಮಯಗಳನ್ನೂ ದಿನಗಳನ್ನೂ ವರ್ಷಗಳನ್ನೂ ತೋರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅನಂತರ ದೇವರು, “ಹಗಲನ್ನು ರಾತ್ರಿಯಿಂದ ಪ್ರತ್ಯೇಕಿಸುವುದಕ್ಕೆ ಆಕಾಶಮಂಡಲದಲ್ಲಿ ಬೆಳಕುಗಳಿರಲಿ; ಅವು ಕಾಲಗಳನ್ನೂ ದಿನ ಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:14
43 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯ, ಚಂದ್ರ ಅಥವಾ ನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂ ಬಾರದು ಮತ್ತು ನಮಸ್ಕರಿಸಲೂ ಬಾರದು.


ಹಗಲಿನಲ್ಲಿ ಸೂರ್ಯನನ್ನು, ರಾತ್ರಿಯಲ್ಲಿ ಚಂದ್ರ ಮತ್ತು ನಕ್ಷತ್ರಗಳ ಕಟ್ಟಳೆಗಳನ್ನು ಪ್ರಕಾಶಕ್ಕಾಗಿ ನೇಮಿಸುವಾತನೂ, ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವಾತನೂ, ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯದಿಂದ ಪ್ರಸಿದ್ಧನೂ ಆಗಿರುವ ಯೆಹೋವನು ಇಂತೆನ್ನುತ್ತಾನೆ,


ಸೂರ್ಯ ಮತ್ತು ಚಂದ್ರರೇ, ಆತನನ್ನು ಸ್ತುತಿಸಿರಿ, ಹೊಳೆಯುವ ಎಲ್ಲಾ ನಕ್ಷತ್ರಗಳೇ, ಆತನನ್ನು ಸ್ತುತಿಸಿರಿ.


ಆತನು ಅವುಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಾನೆ, ಆತನು ಎಂದಿಗೂ ಮೀರಲಾಗದಂಥ ಕಟ್ಟಳೆಯನ್ನು ವಿಧಿಸಿದ್ದಾನೆ.


ಕೃತ್ತಿಕಾ ಮತ್ತು ಒರಿಯನ್ ಎಂಬ ಪ್ರಕಾಶಮಾನವಾದ ನಕ್ಷತ್ರಗಳನ್ನು ಸೃಷ್ಟಿಸಿ, ಕಾರ್ಗತ್ತಲನ್ನು ಬೆಳಕನ್ನಾಗಿ ಮಾಡಿ, ಹಗಲನ್ನು ಇರುಳಾಗಿ ಮಾರ್ಪಡಿಸಿ, ಸಾಗರದ ಜಲವನ್ನು ಬರಮಾಡಿಕೊಂಡು, ಭೂಮಂಡಲದ ಮೇಲೆ ಸುರಿಯುವಾತನ ಕಡೆಗೆ ತಿರುಗಿಕೊಳ್ಳಿರಿ, ಯೆಹೋವನೆಂಬುದೇ ಆತನ ನಾಮಧೇಯ!


ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ನಕ್ಷತ್ರಗಳು ಕಾಂತಿಗುಂದುತ್ತವೆ.


ಯೆಹೋವನು, “ಜನಾಂಗಗಳ ಆಚರಣೆಯನ್ನು ಅಭ್ಯಾಸ ಮಾಡಿಕೊಳ್ಳಬೇಡಿರಿ, ಜನಾಂಗಗಳು ಹೆದರುವ ಆಕಾಶದ ಉತ್ಪಾತಗಳಿಗೆ ನೀವು ಹೆದರಬೇಡಿರಿ.


ಅಮಾವಾಸ್ಯೆಯಲ್ಲಿಯೂ, ನಮ್ಮ ಉತ್ಸವದಿನವಾಗಿರುವ ಹುಣ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.


ಭೂಮಿಯು ಇರುವವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ಚಳಿಯೂ, ಮಳೆಯೂ, ಬೇಸಿಗೆ ಕಾಲವೂ, ಹಿಮಕಾಲವೂ, ಹಗಲೂ, ಇರುಳೂ ಇವುಗಳ ಕ್ರಮ ನಿಂತುಹೋಗುವುದಿಲ್ಲ” ಎಂದನು.


ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ! ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಈ ಸೈನ್ಯವನ್ನು ಲೆಕ್ಕಕ್ಕೆ ಸರಿಯಾಗಿ ಮುಂದುವರಿಸುತ್ತಾನೆ. ಎಲ್ಲವನ್ನೂ ಹೆಸರೆತ್ತಿ ಕರೆಯುತ್ತಾನೆ; ಆತನು ಅತಿ ಬಲಾಢ್ಯನೂ, ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ಕಡಿಮೆಯಾಗದು.


“ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.


ಆ ದಿನದಲ್ಲಿ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂಮಿಯನ್ನು ಹಗಲಿನಲ್ಲೇ ಕತ್ತಲು ಮಾಡುವೆನು.


ಅವುಗಳ ಆಗಮನದಿಂದ ಭೂಮಿಯು ಕಂಪಿಸುತ್ತದೆ, ಆಕಾಶಮಂಡಲವು ನಡಗುತ್ತದೆ, ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ಮತ್ತು ನಕ್ಷತ್ರಗಳು ಕಾಂತಿಗುಂದುತ್ತವೆ.


“ಯೆಹೋವನು ಇಂತೆನ್ನುತ್ತಾನೆ, ನೀವು ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ ಹಗಲನ್ನು, ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಬಹುದಾದರೆ,


ಆತನು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾಭೂಕಂಪ ಉಂಟಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು ಮತ್ತು ಪೂರ್ಣಚಂದ್ರನು ರಕ್ತದಂತಾದನು.


“ಯೆಹೂದ್ಯರ ಅರಸನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಪೂರ್ವದಿಕ್ಕಿನಲ್ಲಿ ಕಂಡು ಆತನಿಗೆ ಅಡ್ಡಬಿದ್ದು ನಮಸ್ಕರಿಸುವುದಕ್ಕಾಗಿ ಬಂದೆವು” ಎಂದರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವಾರದೊಳಗೆ ಕೆಲಸ ಮಾಡುವ ಆರು ದಿನಗಳಲ್ಲಿ ಒಳಗಿನ ಅಂಗಳದ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ಮುಚ್ಚಿರಬೇಕು. ಅದನ್ನು ಸಬ್ಬತ್ ದಿನದಲ್ಲಿಯೂ, ಅಮಾವಾಸ್ಯೆಯಲ್ಲಿಯೂ ತೆರೆದಿರಬೇಕು.


ಯೆಹೋವನು ಇಂತೆನ್ನುತ್ತಾನೆ, ಹಗಲಿರುಳೆಂಬ ನನ್ನ ನಿಬಂಧನೆಯು ಸ್ಥಿರವಾಗಿ ನಿಲ್ಲದಿದ್ದರೆ, ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ವಿಧಿಸಿದವನಲ್ಲದಿದ್ದರೆ,


ನೋಡಿರಿ, ಆತನ ದೃಷ್ಟಿಯಲ್ಲಿ ಚಂದ್ರನಿಗಾದರೂ ಕಳೆಯಿಲ್ಲ, ನಕ್ಷತ್ರಗಳೂ ಶುದ್ಧವಲ್ಲ.


ನನಗೂ ಭೂಜೀವಿಗಳಿಗೂ ಮಾಡಿಕೊಂಡ ಒಡಂಬಡಿಕೆಗೆ ಇದೇ ಗುರುತಾಗಿರಲಿ.


ನಾಲ್ಕನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು, ಆಗ ಸೂರ್ಯನ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಯಿತು. ಅದೇ ಪ್ರಕಾರ ಚಂದ್ರನಲ್ಲಿ ಮತ್ತು ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಗಿ ಹೋಯಿತು. ಇದರಿಂದ ಹಗಲಿನಲ್ಲಿ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಕತ್ತಲಾಗಿ, ರಾತ್ರಿಯ ಹಾಗೆಯೇ ಆಯಿತು.


ಇದಲ್ಲದೆ ಆ ದಿನಗಳ ಸಂಕಟವು ತೀರಿದ ನಂತರ; “‘ಸೂರ್ಯನು ಕತ್ತಲಾಗಿ ಹೋಗುವನು.


ಅಮಾವಾಸ್ಯೆಯಲ್ಲಿ ಅವನು ಪೂರ್ಣಾಂಗವಾದ ಒಂದು ಹೋರಿಯನ್ನೂ, ಆರು ಕುರಿಗಳನ್ನೂ, ಒಂದು ಟಗರನ್ನೂ ಒಪ್ಪಿಸತಕ್ಕದ್ದು. ಅವು ಪೂರ್ಣಾಂಗವಾಗಿಯೇ ಇರಬೇಕು.


ನಿನ್ನ ವಿಧಿಗಳಿಗನುಸಾರವಾಗಿ ಅವು ಇಂದಿನವರೆಗೂ, ಸ್ಥಿರವಾಗಿ ನಿಂತಿರುತ್ತವೆ. ಏಕೆಂದರೆ ಸರ್ವವಸ್ತುಗಳೂ ನಿನ್ನ ಸೇವೆ ಮಾಡುತ್ತವೆ.


ಆತನ ಸೈನ್ಯಗಳಿಗೆ ಲೆಕ್ಕವಿದೆಯೋ? ಆತನ ತೇಜಸ್ಸು ಯಾರಲ್ಲಿಯೂ ಮೂಡುವುದಿಲ್ಲ?


ಆ ದಿನದಲ್ಲಿ ಮುಂಜಾನೆಯ ನಕ್ಷತ್ರಗಳೂ ಮಿಣುಕದೆ ಹೋಗಲಿ. ಅದು ಬೆಳಕನ್ನು ಎದುರುನೋಡಿದರೂ ಹೊಂದದಿರಲಿ. ಅರುಣೋದಯವೆಂಬ ರೆಪ್ಪೆ ತೆರೆಯುವುದನ್ನು ಅದು ಕಾಣದಿರಲಿ.


ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ ಹೊಗೆಯಂತೆ ಏರಿತು. ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾಗಿ ಹೋದವು.


ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೂರನೆಯ ದಿನವಾಯಿತು.


ಭೂಮಿಯ ಮೇಲೆ ಬೆಳಕು ಕೊಡುವುದಕ್ಕೆ ಅವು ಆಕಾಶಮಂಡಲದಲ್ಲಿ ದೀಪಗಳಂತಿರಲಿ” ಅಂದನು. ಹಾಗೆಯೇ ಆಯಿತು.


ಯೆಹೋವನಿಗೆ ಸ್ತೋತ್ರ! ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಶಕ್ತಿಪ್ರದರ್ಶಕವಾದ ಆಕಾಶಮಂಡಲದಲ್ಲಿ ಆತನನ್ನು ಸ್ತುತಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು