Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅನಂತರ ದೇವರು “ಬೆಳಕಾಗಲಿ” ಎಂದು ಆಜ್ಞಾಪಿಸಲು ಬೆಳಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ದೇವರು, “ಬೆಳಕಾಗಲಿ” ಎನ್ನಲು ಬೆಳಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ದೇವರು - ಬೆಳಕಾಗಲಿ ಅನ್ನಲು ಬೆಳಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ದೇವರು, “ಬೆಳಕಾಗಲಿ” ಅನ್ನಲು ಬೆಳಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ದೇವರು, “ಬೆಳಕಾಗಲಿ” ಎನ್ನಲು, ಬೆಳಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:3
22 ತಿಳಿವುಗಳ ಹೋಲಿಕೆ  

ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.


ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲು ಆ ಬೆಳಕನ್ನು ಮುಸುಕಲಿಲ್ಲ.


ನಾನು ಬೆಳಕನ್ನು, ಕತ್ತಲನ್ನು ನಿರ್ಮಿಸಿದವನು, ಮೇಲನ್ನೂ, ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.


ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗುಂದುವುದಿಲ್ಲ; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.


ನಾವು ಆತನಿಂದ ಕೇಳಿ ನಿಮಗೆ ತಿಳಿಸುತ್ತಿರುವ ಸಂದೇಶ ಯಾವುದೆಂದರೆ; ದೇವರು ಬೆಳಕಾಗಿದ್ದಾನೆ; ಮತ್ತು ಆತನಲ್ಲಿ ಸ್ವಲ್ಪವೂ ಕತ್ತಲೆಯಿಲ್ಲ ಎಂಬುದೇ.


ಏಕೆಂದರೆ ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ಬೆಳಕಿನವರಂತೆ ನಡೆದುಕೊಳ್ಳಿರಿ.


ನಿಜವಾದ ಬೆಳಕು ಲೋಕಕ್ಕೆ ಬರುವುದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.


ಆ ತೀರ್ಪು ಏನೆಂದರೆ ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.


ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; ಅದರಲ್ಲಿರುವುದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು.


ಅವು ಯೆಹೋವನ ನಾಮವನ್ನು ಸ್ತುತಿಸಲಿ, ಆತನು ಅಪ್ಪಣೆಕೊಡಲು ಅವು ಉಂಟಾದವು.


ನೀತಿವಂತರಿಗೋಸ್ಕರ ಬೆಳಕು ಪ್ರಕಾಶಿಸುವುದು, ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಕೊಡಲ್ಪಟ್ಟಿವೆ.


ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.


ಆದರೂ ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಂತೆಯೇ ಇರುವುದು. ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ. ಏಕೆಂದರೆ ಕತ್ತಲೆಯು ಕಳೆದುಹೋಗುತ್ತದೆ. ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.


ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ.


ಬೆಳಕನ್ನು ವಸ್ತ್ರದಂತೆ ಹೊದ್ದುಕೊಂಡಿರುವೆ; ಆಕಾಶವನ್ನು ಗುಡಾರದಂತೆ ಎತ್ತಿ ಹರಡಿರುವೆ.


ಬೆಳಕಿನ ನಿವಾಸಕ್ಕೆ ಹೋಗುವ ದಾರಿ ಎಲ್ಲಿ? ಕತ್ತಲಿನ ಸ್ವಸ್ಥಳವು ಎಲ್ಲಿ?


ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ. ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು. ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಎಂದೆಂದಿಗೂ ಇರಲಿ. ಆಮೆನ್.


ಯೆಹೋವನೇ ದೇವರು; ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ. ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ.


ಇಗೋ, ತನ್ನ ಪ್ರಕಾಶವನ್ನು ಸುತ್ತಲು ಹರಡಿಕೊಂಡು, ಅದನ್ನು ಜಲಸಮೂಹಗಳಿಂದ ಮುಚ್ಚಿಕೊಳ್ಳುವನು.


ಆತನು ಹೀಗೆ ಹೇಳಿದ ಮೇಲೆ, “ಲಾಜರನೇ, ಹೊರಗೆ ಬಾ!” ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.


ಆತನು ಕೈಚಾಚಿ ಆತನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು. ಕೂಡಲೆ ಅವನು ಕುಷ್ಠದಿಂದ ಶುದ್ಧನಾದನು.


ಯೆಹೋವನಾದ ದೇವರು ಭೂಮಿಯು ಆಕಾಶಗಳನ್ನು ನಿರ್ಮಾಣ ಮಾಡಿದ ಚರಿತ್ರೆ ಇದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು