Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 10:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು ಆ ದೇಶದಿಂದ ಹೊರಟು ಅಶ್ಶೂರ್ ದೇಶಕ್ಕೆ ಬಂದು ನಿನೆವೆ, ರೆಹೋಬೋತೀರ್, ಕೆಲಹ ಎಂಬ ಪಟ್ಟಣಗಳನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವನು ಆ ನಾಡಿನಿಂದ ಹೊರಟು ಅಸ್ಸೀರಿಯಾ ನಾಡಿಗೆ ಬಂದು ನಿನೆವೆ, ರಹೋಬೋತೀರ್, ಕೆಲಹ ಎಂಬ ಪಟ್ಟಣಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನು ಆ ದೇಶದಿಂದ ಹೊರಟು ಅಶ್ಶೂರ್ ದೇಶಕ್ಕೆ ಬಂದು ನಿನೆವೆ, ರೆಹೋಬೋತೀರ್, ಕೆಲಹ ಎಂಬ ಪಟ್ಟಣಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11-12 ನಿಮ್ರೋದನು ಅಶ್ಶೂರಕ್ಕೂ ಹೋದನು. ಅಶ್ಶೂರದಲ್ಲಿ ನಿನೆವೆ, ರೆಹೋಬೋತೀರ್, ಕೆಲಹ ಮತ್ತು ರೆಸೆನ್ ಎಂಬ ಪಟ್ಟಣಗಳನ್ನು ಕಟ್ಟಿದನು. ರೆಸೆನ್ ಪಟ್ಟಣವು ನಿನೆವೆಗೂ ದೊಡ್ಡಪಟ್ಟಣವಾದ ಕೆಲಹಕ್ಕೂ ಮಧ್ಯದಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆ ದೇಶದಿಂದ ಅವನು ಅಸ್ಸೀರಿಯಕ್ಕೆ ಹೋಗಿ ನಿನೆವೆ, ರೆಹೋಬೋತೀರ್, ಕೆಲಹ ಪಟ್ಟಣಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 10:11
17 ತಿಳಿವುಗಳ ಹೋಲಿಕೆ  

ಅವರ ಶಸ್ತ್ರಾಸ್ತ್ರಗಳು ಅಶ್ಶೂರ ದೇಶವನ್ನು ಧ್ವಂಸಮಾಡುವುದು. ನಿಮ್ರೋದ್ ಸೀಮೆಯ ಪ್ರವೇಶಸ್ಥಾನಗಳು ಅವರ ಖಡ್ಗಕ್ಕೆ ತುತ್ತಾಗುವವು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಪ್ರಾಂತ್ಯವನ್ನು ತುಳಿದುಹಾಕುವಾಗ ಆ ಸಮಾಧಾನಪ್ರದನು ನಮ್ಮನ್ನು ಅವರ ಕೈಯೊಳಗಿಂದ ಉದ್ಧರಿಸುವನು.


ನಿನವೆ ಪಟ್ಟಣದ ಬಗ್ಗೆ ದೈವೋಕ್ತಿ. ಎಲ್ಕೋಷ್ ಊರಿನ ನಹೂಮ ಎಂಬ ಪ್ರವಾದಿಗೆ ಆದ ದೈವದರ್ಶನದ ಗ್ರಂಥ.


“ನೀನು ಇಲ್ಲಿಂದ ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದನ್ನು ಕಟುವಾಗಿ ಖಂಡಿಸಿ ಹೇಳು, ಏಕೆಂದರೆ ಅಲ್ಲಿರುವ ನಿವಾಸಿಗಳ ದುಷ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ” ಎಂದು ಅಪ್ಪಣೆಮಾಡಿದನು.


ಅಶ್ಯೂರ್ಯರೂ ಇವರೊಡನೆ ಕೂಡಿಕೊಂಡು, ಲೋಟನ ವಂಶದವರಿಗೆ ಭುಜಬಲವಾಗಿದ್ದಾರೆ. ಸೆಲಾ


ಯೆಹೋವನು ಉತ್ತರಕ್ಕೆ ಕೈಚಾಚಿ ಅಶ್ಶೂರವನ್ನು ಧ್ವಂಸ ಮಾಡುವನು; ನಿನವೆಯನ್ನು ಹಾಳುಮಾಡಿ ನೀರಿಲ್ಲದ ಮರುಭೂಮಿಯಂತೆ ಒಣಗಿಸಿಬಿಡುವನು.


ನಿನ್ನನ್ನು ನೋಡುವ ಪ್ರತಿಯೊಬ್ಬನು ನಿನ್ನ ಕಡೆಯಿಂದ ಓಡಿಹೋಗಿ, ‘ನಿನವೆಯೂ ಹಾಳಾಯಿತಲ್ಲಾ, ಅದಕ್ಕಾಗಿ ಯಾರು ಗೋಳಾಡುವರು?’ ನಿನ್ನನ್ನು ಸಂತೈಸುವವರು ನನಗೆ ಎಲ್ಲಿ ಸಿಕ್ಕಾರು?” ಅಂದುಕೊಳ್ಳುವನು.


ಪುರಾತನ ಕಾಲದಿಂದ ನಿನವೆ ಪಟ್ಟಣವೂ ಕಟ್ಟೆ ಒಡೆದು ನೀರು ತುಂಬಿದ ಕೆರೆಯಂತೆ ಇದೆ. ಆಹಾ! ಹರಿದು ಓಡುವ ನೀರಿನಂತೆ ಅದರ ನಿವಾಸಿಗಳು ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ ಎಂದು ಅಪ್ಪಣೆಯಾದರೂ ಯಾರೂ ಹಿಂದೆ ನೋಡರು.


ಅಶ್ಶೂರವು ನಮ್ಮನ್ನು ರಕ್ಷಿಸುವುದೆಂದು ನಂಬುವುದಿಲ್ಲ, ಐಗುಪ್ತದ ಕುದುರೆಗಳನ್ನು ಹತ್ತುವುದಿಲ್ಲ, ನಮ್ಮ ಕೈಕೆಲಸದ ಬೊಂಬೆಗಳಿಗೆ, ‘ನೀವು ನಮ್ಮ ದೇವರುಗಳು’ ಎಂದು ಇನ್ನು ಹೇಳುವುದಿಲ್ಲ; ನೀನೇ ದಿಕ್ಕಿಲ್ಲದ ಈ ಅನಾಥರನ್ನು ಕರುಣಿಸುವವನು” ಎಂಬುದಾಗಿ ಅರಿಕೆಮಾಡಿಕೊಳ್ಳಿರಿ.


ಅಶ್ಶೂರವೂ ಮತ್ತು ಅದರ ಎಲ್ಲಾ ಗುಂಪು ಅಲ್ಲಿರುತ್ತವೆ. ಆ ಜನರ ಗೋರಿಗಳು ಅದನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸಂಹೃತರು, ಖಡ್ಗದಿಂದ ಹತರಾದವರು.


ಹಾರಾನ್, ಕನ್ನೆ, ಎದೆನ್ ಸ್ಥಳಗಳವರೂ, ಶೆಬ, ಅಶ್ಶೂರ್ ಕಿಲ್ಮದ್ ಪ್ರಾಂತ್ಯಗಳವರೂ ನಿನ್ನ ವರ್ತಕರಾಗಿದ್ದರು.


ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.


ಆಗ ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು ಅವರಿಗೆ, “ನಿಮ್ಮೊಡನೆ ದೇವಾಲಯ ಕಟ್ಟುವುದಕ್ಕೆ ನಮಗೂ ಅಪ್ಪಣೆಯಾಗಲಿ, ಯಾಕೆಂದರೆ ನಿಮ್ಮಂತೆ ನಾವು ನಿಮ್ಮ ದೇವರ ಭಕ್ತರಾಗಿದ್ದೇವೆ. ನಮ್ಮನ್ನು ಇಲ್ಲಿ ತಂದಿರಿಸಿದ ಅಶ್ಶೂರದ ಅರಸನಾದ ಏಸರ್ಹದ್ದೋನನ ಕಾಲದಿಂದ ನಾವು ಆತನಿಗೇ ಯಜ್ಞಸಮರ್ಪಣೆಯನ್ನು ಮಾಡುತ್ತಾ ಬಂದಿದ್ದೇವೆ” ಎಂದು ಹೇಳಿದರು.


ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಮಾಡಿದನು.


ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದು ಅಶ್ಶೂರ್ಯರನ್ನೂ ಏಬೆರ್ ಜನರನ್ನೂ ಸೋಲಿಸುವರು; ಅವರಿಗೂ ನಾಶನವುಂಟಾಗುವುದು” ಎಂದನು.


ಆದರೂ ಕೇನ್ಯರೂ ನಾಶವಾಗುವರು. ಅದು ಎಷ್ಟು ದೂರ ಅನ್ನುತ್ತೀರೋ? ಅಶ್ಶೂರ್ಯರೇ ನಿಮ್ಮನ್ನು ಸೆರೆಹಿಡಿದುಕೊಂಡು ಹೋಗುವರು.”


ನಿನೆವೆಗೂ ಕೆಲಹಕ್ಕೂ ಮಧ್ಯದಲ್ಲಿ ಇರುವ ರೆಸೆನ್ ಪಟ್ಟಣವನ್ನೂ ಕಟ್ಟಿಸಿದನು. ರೆಸೆನ್ ಮಹಾಪಟ್ಟಣವೆಂದು ಪ್ರಸಿದ್ಧವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು