Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 10:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದ ವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಕಾನಾನ್ಯರ ನಾಡು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿ ಇರುವ ಗಾಜಾ ಪಟ್ಟಣದವರೆಗೂ ಮತ್ತು ಸೊದೋಮ್, ಗೊಮೋರ, ಆದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿದ್ದ ಲೆಷಾ ಊರಿನವರೆಗೂ ಹಬ್ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಕಾನಾನ್ಯರ ಸೀಮೆಯು ಸೀದೋನಿನ ಉತ್ತರದಿಂದಿಡಿದು ಗೆರಾರಿನ ದಕ್ಷಿಣದವರೆಗೂ, ಗಾಜಾದಿಂದ ಪೂರ್ವದ ಸೊದೋಮ್ ಗೊಮೋರ ಪಟ್ಟಣಗಳವರೆಗೂ, ಅದ್ಮಾ ಮತ್ತು ಚೆಬೋಯಿಮ್‌ಗಳಿಂದ ಲೆಷಾದವರೆಗೆ ವಿಸ್ತರಿಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಕಾನಾನ್ಯರ ಮೇರೆಯು ಸೀದೋನ್ ಪಟ್ಟಣದಿಂದ ಗೆರಾರಿನ ಮಾರ್ಗವಾಗಿ ಗಾಜಾ ಪಟ್ಟಣದವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಮಾರ್ಗವಾಗಿ ಲೆಷಾ ಊರಿನವರೆಗೂ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 10:19
29 ತಿಳಿವುಗಳ ಹೋಲಿಕೆ  

ತಗ್ಗು ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದ ಸೊದೋಮಿನ ಅರಸನಾದ ಬೆರಗನು, ಗೊಮೋರದ ಅರಸನಾದ ಬಿರ್ಶಗನು, ಅದ್ಮಾಹದ ಅರಸನಾದ ಶಿನಾಬನು, ಚೆಬೋಯಿಮನ ಅರಸನಾದ ಶೆಮೇಬರನ, ಬೇಲಗ (ಅಂದರೆ ಚೋಗರದ) ಎಂಬ ಐದು ಅರಸರ ವಿರುದ್ಧವಾಗಿ ಯುದ್ಧ ಮಾಡಿದರು.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು.


ಬಗೆಬಗೆಯ ಎಲ್ಲಾ ವಿದೇಶೀಯರು, ಊಚ್ ದೇಶದ ಎಲ್ಲಾ ಅರಸರು, ಫಿಲಿಷ್ಟಿಯ ದೇಶದ ಎಲ್ಲಾ ಅರಸರು, ಅಷ್ಕೆಲೋನ್, ಗಾಜಾ, ಎಕ್ರೋನ್, ಹಾಳಾಗದೆ ಉಳಿದ ಸ್ವಲ್ಪ ಅಷ್ಡೋದ್,


ತರುವಾಯ ಸಂಸೋನನು ಗಾಜಕ್ಕೆ ಹೋಗಿ ಅಲ್ಲಿ ಒಬ್ಬ ವೇಶ್ಯೆಯನ್ನು ಕಂಡು ಅವಳ ಬಳಿಗೆ ಹೋದನು.


ಹೇಗೆಂದರೆ, “ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇಮಿಸಿಕೊಟ್ಟಾಗ ಇಸ್ರಾಯೇಲರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದನು.


ಅಬ್ರಹಾಮನ ಕಾಲದಲ್ಲಿ ಬಂದ ಮೊದಲನೆಯ ಬರಗಾಲವಲ್ಲದೆ ಇನ್ನೊಂದು ಬರಗಾಲವು ಕಾನಾನ್ ದೇಶಕ್ಕೆ ಬಂದಿತು. ಆಗ ಇಸಾಕನು ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಗೆರಾರಿಗೆ ಹೋದನು.


ಅಬ್ರಹಾಮನು ಅಲ್ಲಿಂದ ಕಾನಾನ್ ದೇಶದ ದಕ್ಷಿಣ ಸೀಮೆಗೆ ಪ್ರಯಾಣ ಮಾಡುತ್ತಾ ಕಾದೇಶಿಗೂ ಶೂರಿಗೂ ನಡುವೆ ವಾಸ ಮಾಡಿ ಕೆಲವು ಕಾಲ ಗೆರಾರಿನಲ್ಲೂ ವಾಸಮಾಡಿದನು.


ಇದಲ್ಲದೆ ಯೆಹೋವನು, “ಸೊದೋಮ್ ಗೊಮೋರಗಳ ದೊಡ್ಡ ಮೊರೆ ನನಗೆ ಮುಟ್ಟಿತು; ಆ ಊರಿನವರ ಮೇಲೆ ಹೊರಿಸಿರುವ ಪಾಪವು ಎಷ್ಟೋ ಘೋರವಾದದ್ದು,


ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣದ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ” ಎಂದು ಹೇಳಿದನು.


ಕಾಲ ಕ್ರಮೇಣವಾಗಿ ಈ ಕಾನಾನ್ಯರ ವಂಶಸ್ಥರಾದ ಸೀನಿಯರು, ಅರ್ವಾದಿಯರು, ಚೆಮಾರಿಯರು, ಹದೋರಾಮರು, ಹಮಾತಿಯರು ಹರಡಿ ಕಾನಾನನಿಂದ ಹುಟ್ಟಿದರು.


ಕುಲ, ಭಾಷೆ, ದೇಶ, ಜನಾಂಗಗಳ ಪ್ರಕಾರ ಇವರೇ ಹಾಮನ ವಂಶದವರು.


ಈ ಐದು ಅರಸರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್, ತಗ್ಗಿನ ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದರು.


ಕಾಬೂಲ್, ಎಬ್ರೋನ್, ರೆಹೋಬ್, ಹಮ್ಮೋನ್, ಕಾನಾ ಇವುಗಳ ಮೇಲೆ ಚೀದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.


ಕೂಷ್ಯರು ಸೋತು ಓಡಿಹೋದಾಗ ಆಸನೂ ಅವನ ಜನರೂ ಗೆರಾರಿನವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದರು; ಅವರಲ್ಲಿ ಯಾರೂ ಜೀವದಿಂದುಳಿಯಲಿಲ್ಲ. ಯೆಹೋವನ ಮತ್ತು ಆತನ ಸೈನ್ಯದ ಮುಂದೆ ನುಚ್ಚು ನೂರಾಗಿ ಹೋದರು. ಇಸ್ರಾಯೇಲರಿಗೆ ಅಪರಿಮಿತವಾದ ಕೊಳ್ಳೆ ಸಿಕ್ಕಿತು.


ಚೀದೋನೇ, ನಾಚಿಕೆಪಡು. ಏಕೆಂದರೆ ಸಮುದ್ರವೂ, ಸಮುದ್ರದ ದುರ್ಗವೂ, “ನಾವು ವೇದನೆ ಪಡಲಿಲ್ಲ, ಪ್ರಸವಿಸಲಿಲ್ಲ, ಯುವತಿ ಯುವಕರನ್ನು ಸಾಕಿ ಸಲಹಲಿಲ್ಲ” ಎಂದು ನುಡಿದಿದೆಯಷ್ಟೆ.


ಫರೋಹನು ಗಾಜಾ ಊರನ್ನು ಹೊಡೆದದ್ದಕ್ಕೆ ಮುಂಚಿತವಾಗಿ ಯೆಹೋವನು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ.


“ನರಪುತ್ರನೇ, ನೀನು ಚೀದೋನಿಗೆ ಅಭಿಮುಖನಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು.


ಮತ್ತು ಹೇಗೆ ಕಫ್ತೋರಿಂದ ಬಂದ ಕಫ್ತೋರ್ಯರು ಗಾಜಾ ಪಟ್ಟಣದವರೆಗೂ ಹಳ್ಳಿಗಳಲ್ಲಿದ್ದ ಅವ್ವಿಯರನ್ನು ನಾಶಮಾಡಿ ಅವರ ಸ್ಥಳದಲ್ಲಿ ವಾಸಮಾಡಿದರೋ, ಹಾಗೆಯೇ ಯೆಹೋವನು ರೆಫಾಯರನ್ನು ಅಮ್ಮೋನಿಯರ ನಾಡಿನಿಂದ ಹೊರಗೆ ಹೋಗುವಂತೆ ಮಾಡಿದನು. ಅಮ್ಮೋನಿಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅವರಲ್ಲಿ ವಾಸಮಾಡ ತೊಡಗಿದರು.


ಅವರು ಗಾಜಾ ಪ್ರಾಂತ್ಯದವರೆಗಿದ್ದ ಎಲ್ಲಾ ಭೂಮಿಯ ಹುಟ್ಟುವಳಿಯನ್ನು ಹಾಳುಮಾಡಿಬಿಡುತ್ತಿದ್ದುದರಿಂದ ಇವರಿಗೆ ದವಸಧಾನ್ಯವಾಗಲಿ, ಕುರಿ, ದನ, ಕತ್ತೆಗಳಾಗಲಿ ಉಳಿಯಲೇ ಇಲ್ಲ.


ಇನ್ನೊಂದು ಗುಂಪು ಬೇತ್‌ಹೋರೋನಿನ ಕಡೆಗೂ, ಮತ್ತೊಂದು ಜೆಬೋಯೀಮಿನ ಕಣಿವೆಯ ಕೆಳಗಿರುವ ಅರಣ್ಯವನ್ನು ನೋಡಬಹುದಾದ ಸ್ಥಳಕ್ಕೂ ಹೋದವು.


ಯೆಹೋವನು ಕೂಷ್ಯರನ್ನು ಆಸನಿಂದಲೂ ಯೆಹೂದ್ಯರಿಂದಲೂ ಅಪಜಯ ಉಂಟಾಗುವಂತೆ ಮಾಡಿದನು.


ನೀನು ಆ ಒಂದೊಂದನ್ನೂ ಅದರದರ ಪ್ರಾಂತ್ಯಕ್ಕೆ ಕರೆದುಕೊಂಡು ಹೋಗಿ, ಅವುಗಳ ಮನೆಯ ಹಾದಿಗಳನ್ನು ಕಂಡುಕೊಳ್ಳಬಲ್ಲೆಯಾ?


ಯೆಹೋವನು ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅದರ ವಿಷಯವಾಗಿ ಯೆಹೋವನು ಅಪ್ಪಣೆಕೊಟ್ಟಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು