Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 11:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಅವರೆಲ್ಲರೂ ಬನ್ನಿ, ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಬನ್ನಿ, ಒಳ್ಳೊಳ್ಳೆ ಸುಟ್ಟ ಇಟ್ಟಿಗೆಗಳನ್ನು ಮಾಡೋಣ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬನ್ನಿ, ಒಳ್ಳೊಳ್ಳೇ ಸುಟ್ಟ ಇಟ್ಟಿಗೆಗಳನ್ನು ಮಾಡೋಣ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರು ಒಬ್ಬರಿಗೊಬ್ಬರು ಮಾತಾಡುತ್ತಾ, “ಬನ್ನಿ, ಒಳ್ಳೆಯ ಸುಟ್ಟ ಇಟ್ಟಿಗೆಗಳನ್ನು ಮಾಡೋಣ” ಎಂದು ನಿರ್ಧರಿಸಿದರು. ಅವರು ತಮ್ಮ ಮನೆಗಳನ್ನು ಕಟ್ಟಲು ಕಲ್ಲುಗಳ ಬದಲಾಗಿ ಇಟ್ಟಿಗೆಗಳನ್ನೂ ಗಾರೆಗೆ ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಲ್ಲಿ ಅವರು, “ಬನ್ನಿರಿ ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 11:3
19 ತಿಳಿವುಗಳ ಹೋಲಿಕೆ  

ಆದರೆ ಸಿದ್ದೀಮ್ ತಗ್ಗು ಪ್ರದೇಶ ಕಲ್ಲರಗಿನ ಕೆಸರುಗುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ರಾಜರ ಕಡೆಯವರು ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.


ಆಕೆ ಅದನ್ನು ಇನ್ನು ಹೆಚ್ಚುಕಾಲ ಮರೆಮಾಡಲಾಗದೆ, ಆಪಿನ ಪೆಟ್ಟಿಗೆಯನ್ನು ತೆಗೆದುಕೊಂಡು ಜೇಡಿಮಣ್ಣನ್ನೂ ರಾಳವನ್ನು ಹಚ್ಚಿ, ಕೂಸನ್ನು ಅದರಲ್ಲಿ ಮಲಗಿಸಿ, ನೈಲ್ ನದಿಯ ಅಂಚಿನಲ್ಲಿರುವ ಜಂಬುಹುಲ್ಲಿನಲ್ಲಿ ಇಟ್ಟಳು.


ಮಣ್ಣಿನ ಕೆಲಸದಲ್ಲಿಯೂ, ಇಟ್ಟಿಗೆಮಾಡುವ ಕೆಲಸದಲ್ಲಿಯೂ, ವ್ಯವಸಾಯದ ಎಲ್ಲಾ ವಿಧವಾದ ಕೆಲಸದಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಐಗುಪ್ತರು ಇಸ್ರಾಯೇಲರಿಂದ ಮಾಡಿಸಿದ ಎಲ್ಲಾ ಕೆಲಸಗಳು ಬಹಳ ಕಠಿಣವಾಗಿದ್ದವು.


ಐಶ್ವರ್ಯವಂತರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.


ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಹುರಿದುಂಬಿಸೋಣ.


ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.


“ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು. ಅತ್ತಿ ಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು” ಎಂಬುದೇ.


ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಮಾಡುವುದಕ್ಕೂ ಇಟ್ಟಿಗೆಗಳನ್ನು ಮಾಡುವುದಕ್ಕೂ ಹಚ್ಚಿದರು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ಹೋದನು.


“ಈಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರ್ಷವಿದ್ದು ವ್ಯಾಪಾರ ಮಾಡಿ ಲಾಭವನ್ನು ಸಂಪಾದಿಸುತ್ತೇವೆ” ಎನ್ನುವವರೇ ಕೇಳಿರಿ.


ಮುತ್ತಿಗೆಯ ಕಾಲಕ್ಕೆ ನೀರನ್ನು ಸೇದಿಟ್ಟುಕೋ, ನಿನ್ನ ಕೋಟೆಗಳನ್ನು ಬಲಪಡಿಸಿಕೋ; ಮಣ್ಣಿಗೆ ಇಳಿ, ಜೇಡಿಮಣ್ಣನ್ನು ತುಳಿ, ಇಟ್ಟಿಗೆಯ ಅಚ್ಚನ್ನು ಹಿಡಿ.


ಈ ಜನರು ವನಗಳಲ್ಲಿ ಯಜ್ಞ ಮಾಡುತ್ತಾ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪಹಾಕುತ್ತಾ ನನ್ನನ್ನು ಯಾವಾಗಲೂ ಕೆಣಕುತ್ತಾರೆ.


ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು.


ನಾನು ಮನಸ್ಸಿನಲ್ಲಿ, “ಈಗ ಬಾ, ನಾನು ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು. ಸುಖವನ್ನು ಅನುಭವಿಸು” ಅಂದುಕೊಂಡೆನು. ಆಹಾ! ಇದು ವ್ಯರ್ಥವೇ.


ಅವರು, “ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚುಹಾಕೋಣ, ನಿರಪರಾಧಿಯನ್ನು ಕಾರಣವಿಲ್ಲದೆಯೇ ಹಿಡಿಯುವುದಕ್ಕೆ ಕಾದಿರೋಣ.


ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ, “ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು?” ಅಂದುಕೊಳ್ಳುತ್ತಾರೆ.


ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿ ಮಾಡೋಣ ಬನ್ನಿ” ಎಂದನು.


ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು