Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 11:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿ ಮಾಡೋಣ ಬನ್ನಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾವು ಹೋಗಿ ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿಗೊಳಿಸೋಣ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾವು ಇಳಿದು ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ತಾರುಮಾರುಮಾಡೋಣ ಬನ್ನಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ನಾವು ಕೆಳಗೆ ಹೋಗಿ ಅವರ ಭಾಷೆಯನ್ನು ತಾರುಮಾರು ಮಾಡೋಣ; ಆಗ ಅವರು ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾವು ಇಳಿದು ಹೋಗಿ, ಇವರು ಒಬ್ಬರ ಮಾತನ್ನು ಒಬ್ಬರು ತಿಳಿಯದಂತೆ, ಇವರ ಭಾಷೆಯನ್ನು ಗಲಿಬಿಲಿ ಮಾಡೋಣ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 11:7
20 ತಿಳಿವುಗಳ ಹೋಲಿಕೆ  

ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.


ಕರ್ತನೇ, ಅವರ ಭಾಷೆಯನ್ನು ತಾರುಮಾರುಮಾಡಿ ಅವರನ್ನು ಭ್ರಾಂತಿಗೊಳಿಸು. ಪಟ್ಟಣದಲ್ಲಿ ಕಲಹ, ಬಲಾತ್ಕಾರಗಳು ಕಾಣಬರುತ್ತವೆ.


ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು.


ಹೀಗಿರುವಲ್ಲಿ ಸಭೆಯೆಲ್ಲಾ ಒಂದೇ ಸ್ಥಳದಲ್ಲಿ ಸೇರಿಬಂದಾಗ ಎಲ್ಲರೂ ಅನ್ಯಭಾಷೆಗಳನ್ನಾಡಿದರೆ ಈ ಭಾಷೆಯನ್ನು ತಿಳಿಯದ ಬೇರೆಯವರು ಅಥವಾ ಕ್ರಿಸ್ತ ನಂಬಿಕೆಯಿಲ್ಲದವರು ಒಳಗೆ ಬಂದು ನೋಡಿ, ನಿಮಗೆ ಹುಚ್ಚು ಹಿಡಿದಿದೆ ಎಂದು ಹೇಳುವುದಿಲ್ಲವೋ?


ಇಗೋ, ಇಸ್ರಾಯೇಲ್ ವಂಶವೇ, ಯೆಹೋವನ ಮಾತನ್ನು ಕೇಳು, ನಾನು ಒಂದು ಜನಾಂಗವನ್ನು ದೂರದಿಂದ ನಿಮ್ಮ ಮೇಲೆ ಬರಮಾಡುವೆನು. ಅದು ತಲತಲಾಂತರಗಳಿಂದ ಸ್ಥಿರವಾದ ಜನಾಂಗ, ಅದರ ಭಾಷೆಯು ನಿನಗೆ ತಿಳಿಯದು, ಅದು ಆಡುವ ಮಾತುಗಳನ್ನು ನೀನು ಗ್ರಹಿಸಲಾರೆ.


ಪರಲೋಕದಲ್ಲಿ ಆಸೀನನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು.


ಆಲೋಚನಾಕರ್ತರ ವಾಕ್ಚಾತುರ್ಯವನ್ನು ಕುಗ್ಗಿಸುತ್ತಾನೆ, ಹಿರಿಯರ ವಿವೇಕವನ್ನು ತೆಗೆದುಹಾಕುವನು.


ರಣಹದ್ದು ಹೇಗೆ ದೂರದಿಂದ ಹಾರಿಬರುವುದೋ ಹಾಗೆಯೇ ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.


ಆಗ, “ಯಾರನ್ನು ಕಳುಹಿಸಲಿ? ಯಾರು ನಮಗೋಸ್ಕರ ಹೋಗುವನು?” ಎಂಬ ಕರ್ತನ ನುಡಿಯನ್ನು ಕೇಳಿ, “ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದೆನು.


ಯೋಸೇಫನು ದ್ವಿಭಾಷೆಯಲ್ಲಿ ಮಾತನಾಡಬಲ್ಲ ಅನುವಾದಕರೊಂದಿಗೆ ಮಾತನಾಡಿದ್ದರಿಂದ ಅವರು ತಮ್ಮ ಮಾತು ಅವನಿಗೆ ಗೊತ್ತಾಗುತ್ತದೆಂದು ತಿಳಿಯಲಿಲ್ಲ.


ಮನುಷ್ಯರು ಕಟ್ಟುತ್ತಿದ್ದ ಆ ಪಟ್ಟಣವನ್ನೂ, ಗೋಪುರವನ್ನೂ ನೋಡುವುದಕ್ಕೆ ಯೆಹೋವನು ಇಳಿದು ಬಂದನು.


ಕುಲ, ಭಾಷೆ, ದೇಶ, ಜನಾಂಗಗಳ ಪ್ರಕಾರ ಇವರೇ ಹಾಮನ ವಂಶದವರು.


ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು.


ಜನಾಂಗಗಳ ಸಂತತಿಯ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದ ನಂತರ ಭೂಮಿಯ ಮೇಲೆ ಹರಡಿಕೊಂಡ ಜನಾಂಗಗಳು ಇವರೇ.


ದೇಶ, ಭಾಷೆ, ಕುಲ, ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು.


ಅದಕ್ಕೆ ಯೆಹೋವನು ಅವನಿಗೆ, “ಮನುಷ್ಯರಿಗೆ ಬಾಯಿಕೊಟ್ಟವನು ಯಾರು? ಒಬ್ಬನನ್ನು ಮೂಕನಾಗಿ, ಕಿವುಡನಾಗಿ, ದೃಷ್ಠಿಯುಳ್ಳವನಾಗಿ ಹಾಗೂ ಕುರುಡನಾಗಿ ಉಂಟುಮಾಡಿದವನಾರು? ಯೆಹೋವನಾದ ನಾನೇ ಅಲ್ಲವೇ?


ನಿಮಗೆ ತಿಳಿಯದ ಅನ್ಯಭಾಷೆಯನ್ನೂ, ನೀವು ಗ್ರಹಿಸಲಾರದ ತೊದಲು ಮಾತುಗಳನ್ನೂ ಆಡುವ ಆ ಕ್ರೂರ ಜನರನ್ನು ಇನ್ನು ಮುಂದೆ ನೋಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು