Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 11:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ಅದೇ ಪ್ರಕಾರ ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿ ಬಿಟ್ಟನು. ಅವರು ಆ ಪಟ್ಟಣ ಕಟ್ಟುವುದನ್ನು ನಿಲ್ಲಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅಂತೆಯೇ ಮಾಡಿ ಅವರನ್ನು ಅಲ್ಲಿಂದ ಜಗದೆಲ್ಲೆಡೆಗೆ ಚದರಿಸಿಬಿಟ್ಟರು. ಜನರು ಆ ಪಟ್ಟಣ ಕಟ್ಟುವುದನ್ನು ನಿಲ್ಲಿಸಿಬಿಟ್ಟರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹಾಗೆಯೇ ಮಾಡಿ ಯೆಹೋವನು ಅವರನ್ನು ಅಲ್ಲಿಂದ ಭೂಲೋಕದಲ್ಲೆಲ್ಲಾ ಚದರಿಸಿದನು. ಅವರು ಆ ಪಟ್ಟಣ ಕಟ್ಟುವದನ್ನು ನಿಲ್ಲಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಂತೆಯೇ ಯೆಹೋವನು ಜನರನ್ನು ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು. ಆದ್ದರಿಂದ ಆ ಪಟ್ಟಣವನ್ನು ಕಟ್ಟಿ ಪೂರೈಸಲು ಅವರಿಗೆ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದ್ದರಿಂದ ಯೆಹೋವ ದೇವರು ಅವರನ್ನು ಅಲ್ಲಿಂದ ಭೂಮಿಯ ಮೇಲೆಲ್ಲಾ ಚದರಿಸಿದರು. ಆಗ ಅವರು ಆ ಪಟ್ಟಣ ಕಟ್ಟುವುದನ್ನು ನಿಲ್ಲಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 11:8
10 ತಿಳಿವುಗಳ ಹೋಲಿಕೆ  

ಆತನು ತನ್ನ ಭುಜಪರಾಕ್ರಮದಿಂದ ಸೊಕ್ಕಿದ ಮನಸ್ಸುಳ್ಳವರನ್ನು ಚದರಿಸಿಬಿಟ್ಟಿದ್ದಾನೆ.


ಹೇಗೆಂದರೆ, “ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇಮಿಸಿಕೊಟ್ಟಾಗ ಇಸ್ರಾಯೇಲರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದನು.


ಜನಾಂಗಗಳ ಸಂತತಿಯ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದ ನಂತರ ಭೂಮಿಯ ಮೇಲೆ ಹರಡಿಕೊಂಡ ಜನಾಂಗಗಳು ಇವರೇ.


ಎಬರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗೆಂಬ ಹೆಸರು; ಅವನ ಕಾಲದಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತ್ತು. ಅವನ ತಮ್ಮನ ಹೆಸರು ಯೊಕ್ತಾನ್.


ಸಮಸ್ತ ಲೋಕದ ಭಾಷೆಯನ್ನು ಯೆಹೋವನು ಅಲ್ಲಿ ಗಲಿಬಿಲಿ ಮಾಡಿ, ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ (ದೇವರ ಬಾಗಿಲು) ಎಂಬ ಹೆಸರಾಯಿತು.


ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದ್ದು ಅದು ಶಾಪಗ್ರಸ್ಥವಾದುದಾಗಿದೆ. ಯಾಕೋಬನ ಕುಲದವರಲ್ಲಿ ಅವರನ್ನು ವಿಭಾಗಿಸುವೆನು. ಇಸ್ರಾಯೇಲರಲ್ಲಿ ಅವರನ್ನು ಚದುರಿಸುವೆನು.


ಯೆಹೋವನೇ, ಇಗೋ ನಿನ್ನ ಶತ್ರುಗಳು! ಅವರೆಲ್ಲಾ ನಾಶವಾಗುತ್ತಿದ್ದಾರೆ. ಅಧರ್ಮಿಗಳೆಲ್ಲಾ ಚದರಿಹೋಗುವರು.


ದೇಶ, ಭಾಷೆ, ಕುಲ, ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು.


ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು