Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 12:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದಕಾರಣ ನೀನು ನನಗೆ ತಂಗಿಯಾಗಬೇಕೆಂದು ಅವರಿಗೆ ಹೇಳು; ಹೀಗೆ ಹೇಳಿದರೆ ನಿನ್ನ ನಿಮಿತ್ತ ನನಗೆ ಹಿತವಾಗುವುದು, ನಾನು ನಿನ್ನ ದೆಸೆಯಿಂದ ಸಾಯದೆ ಬದುಕುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದಕಾರಣ ನೀನು ನನಗೆ ತಂಗಿಯೆಂದೇ ಅವರಿಗೆ ಹೇಳು. ಆಗ ನಿನ್ನ ನಿಮಿತ್ತ ನನಗೆ ಸತ್ಕಾರ ದೊರಕುವುದು; ನಿನ್ನ ದೆಸೆಯಿಂದ ನನ್ನ ಪ್ರಾಣ ಉಳಿಯುವುದು,” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದಕಾರಣ ನೀನು ನನಗೆ ತಂಗಿಯಾಗಬೇಕೆಂದು ಅವರಿಗೆ ಹೇಳು; ಹೀಗೆ ಹೇಳಿದರೆ ನಿನ್ನ ನಿವಿುತ್ತ ನನಗೆ ಹಿತವಾಗುವದು, ನಾನು ನಿನ್ನ ದೆಸೆಯಿಂದ ಸಾಯದೆ ಬದುಕುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದ್ದರಿಂದ ನೀನು ನನಗೆ ತಂಗಿಯಾಗಬೇಕೆಂದು ಜನರಿಗೆ ಹೇಳು. ಆಗ ಅವರು ನನ್ನನ್ನು ನಿನ್ನ ಸಹೋದರನೆಂದು ಭಾವಿಸಿ ನನ್ನನ್ನು ಕೊಲ್ಲದೆ ನನಗೆ ದಯೆತೋರುವರು. ಹೀಗೆ ನೀನು ನನ್ನ ಪ್ರಾಣ ಉಳಿಸುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿನ್ನ ದೆಸೆಯಿಂದ ನನಗೆ ಒಳ್ಳೆಯದಾಗಿ, ನನ್ನ ಪ್ರಾಣವು ಉಳಿಯುವಂತೆ ನೀನು ನನ್ನ ಸಹೋದರಿ ಎಂದು ದಯಮಾಡಿ ಹೇಳಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 12:13
18 ತಿಳಿವುಗಳ ಹೋಲಿಕೆ  

ಆ ಸ್ಥಳದ ಜನರು ಅವನ ಹೆಂಡತಿಯನ್ನು ನೋಡಿ ಆಕೆಯನ್ನು ಕುರಿತು ವಿಚಾರಿಸಿದಾಗ ಅವನು ರೆಬೆಕ್ಕಳು ಸುಂದರಿಯಾಗಿರುವುದರಿಂದ ಈ ಸ್ಥಳದ ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರು ಅಂದುಕೊಂಡು ಆಕೆಯನ್ನು ತನ್ನ ಹೆಂಡತಿ ಎಂದು ಹೇಳುವುದಕ್ಕೆ ಭಯಪಟ್ಟು ತಂಗಿಯಾಗಬೇಕು ಎಂದು ಹೇಳಿದನು.


ಅವನು ತನ್ನ ಹೆಂಡತಿಯಾದ ಸಾರಳನ್ನು ತಂಗಿಯೆಂದು ಹೇಳಿಕೊಂಡದ್ದರಿಂದ, ಗೆರಾರಿನ ಅರಸನಾದ ಅಬೀಮೆಲೆಕನು ಆಕೆಯನ್ನು ಕರೆಸಿ ತನ್ನ ಮನೆಯಲ್ಲಿ ಇರಿಸಿಕೊಂಡನು.


ಆ ಮನುಷ್ಯನು ಈಕೆ ತನಗೆ ತಂಗಿಯಾಗಬೇಕೆಂದು ಹೇಳಿದನು. ಈಕೆಯೂ ಅವನು ತನಗೆ ಅಣ್ಣನಾಗಬೇಕೆಂದು ಹೇಳಿದಳು. ನಾನು ಯಥಾರ್ಥ ಮನಸ್ಸಿನಿಂದಲೂ, ಶುದ್ಧ ಹಸ್ತದಿಂದಲೂ ಇದನ್ನು ಮಾಡಿದೆನು” ಎಂದನು.


ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನ ಅಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.


ನೀನು ಯಾರಿಗೆ ಹೆದರಿ ನನ್ನನ್ನು ಮರೆತು ನನಗೆ ಮೋಸಮಾಡಿದಿ? ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವುದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೇ?.


ಅಬ್ರಾಮನೂ ನಾಹೋರನೂ ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ. ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ.


ಇವುಗಳ ನಿಮಿತ್ತ ಅವಿಧೇಯರಾಗುವವರ ಮೇಲೆ ದೇವರ ಕೋಪವು ಉಂಟಾಗುತ್ತದೆ.


ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.


ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.


ಅಬ್ರಾಮನು ಐಗುಪ್ತ ದೇಶಕ್ಕೆ ಬಂದಾಗ ಐಗುಪ್ತರು ಅವನ ಸಂಗಡ ಇದ್ದ ಸ್ತ್ರೀಯನ್ನು ನೋಡಿ ಬಹು ಸುಂದರಿ ಎಂದು ಅಂದುಕೊಂಡರು.


ಆಗ ಯೆರೆಮೀಯನು ಚಿದ್ಕೀಯನಿಗೆ, “ಸೇನಾಧೀಶ್ವರ ಸ್ವಾಮಿಯೂ ಇಸ್ರಾಯೇಲರ ದೇವರೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಬಾಬೆಲಿನ ಅರಸನ ಸರದಾರರನ್ನು ಮೊರೆಹೊಕ್ಕರೆ ನಿನ್ನ ಪ್ರಾಣ ಉಳಿಯುವುದು, ಈ ಪಟ್ಟಣವೂ ಬೆಂಕಿಯಿಂದ ಸುಟ್ಟು ಹೋಗದು, ನೀನೂ ನಿನ್ನ ಮನೆತನದವರೂ ಬದುಕುವಿರಿ.


ಅದಕ್ಕೆ ಯೆರೆಮೀಯನು, “ನಿನ್ನನ್ನು ಒಪ್ಪಿಸರು; ಪ್ರಭುವೇ, ನಾನು ನಿನಗೆ ಹೇಳಿರುವ ಯೆಹೋವನ ಮಾತನ್ನು ಕೈಗೊಳ್ಳು; ಕೈಗೊಂಡರೆ ಪ್ರಾಣ ಉಳಿಯುವುದು, ಸುಖವೂ ಆಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು