Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 12:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ, ತನ್ನ ತಮ್ಮನ ಮಗನಾದ ಲೋಟನನ್ನೂ, ತಾನೂ ಲೋಟನೂ ಹಾರಾನಿನಲ್ಲಿ ಸಂಪಾದಿಸಿದ್ದ ಎಲ್ಲಾ ಸೊತ್ತನ್ನೂ, ದಾಸ ದಾಸಿಯರನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ತನ್ನ ಹೆಂಡತಿ ಸಾರಯಳನ್ನು, ತನ್ನ ತಮ್ಮನ ಮಗನಾದ ಲೋಟನನ್ನು, ತಾನು ಮತ್ತು ಲೋಟನು ಹಾರಾನಿನಲ್ಲಿ ಗಳಿಸಿದ ಆಸ್ತಿಪಾಸ್ತಿಯನ್ನು ಹಾಗು ದಾಸದಾಸಿಯರನ್ನು ತೆಗೆದುಕೊಂಡು ಹೋಗಿ ಕಾನಾನ್ ನಾಡನ್ನು ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ತಮ್ಮನ ಮಗನಾದ ಲೋಟನನ್ನೂ ತಾನೂ ಲೋಟನೂ ಖಾರಾನಿನಲ್ಲಿ ಸಂಪಾದಿಸಿದ್ದ ಎಲ್ಲಾ ಸೊತ್ತನ್ನೂ ದಾಸದಾಸಿಯರನ್ನೂ ತೆಗೆದುಕೊಂಡು ಹೋಗಿ ಕಾನಾನ್ ದೇಶಕ್ಕೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಒಬ್ಬಂಟಿಗನಾಗಿ ಹೋಗಲಿಲ್ಲ. ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ತಮ್ಮನ ಮಗನಾದ ಲೋಟನನ್ನೂ ತನ್ನೊಂದಿಗೆ ಕರೆದುಕೊಂಡು ಹೋದನು. ಹಾರಾನ್ ಪಟ್ಟಣದಲ್ಲಿ ತಮಗಿದ್ದ ಸ್ವತ್ತುಗಳನ್ನೆಲ್ಲ ಅವರು ತೆಗೆದುಕೊಂಡು ಹೋದರು. ಅಬ್ರಾಮನು ಹಾರಾನ್ ಪಟ್ಟಣದಲ್ಲಿ ಹೊಂದಿದ್ದ ಸೇವಕರು ಸಹ ಅವನೊಡನೆ ಹೋದರು. ಅಬ್ರಾಮನು ಮತ್ತು ಅವನ ಸಂಗಡಿಗರು ಹಾರಾನ್ ಪಟ್ಟಣವನ್ನು ಬಿಟ್ಟು ಕಾನಾನ್ ದೇಶಕ್ಕೆ ಪ್ರಯಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ, ತನ್ನ ಸಹೋದರನ ಮಗ ಲೋಟನನ್ನೂ, ತಾವು ಕೂಡಿಸಿಕೊಂಡಿದ್ದ ಎಲ್ಲಾ ಆಸ್ತಿಯನ್ನೂ, ಹಾರಾನಿನಲ್ಲಿ ಸಂಪಾದಿಸಿಕೊಂಡಿದ್ದ ಎಲ್ಲಾ ಜನರನ್ನೂ ತಮ್ಮ ಸಂಗಡ ಕರೆದುಕೊಂಡು ಕಾನಾನ್ ದೇಶಕ್ಕೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 12:5
13 ತಿಳಿವುಗಳ ಹೋಲಿಕೆ  

ಅಬ್ರಾಮನು ತನ್ನ ತಮ್ಮನ ಮಗನು ಸೆರೆಗೆ ಸಿಕ್ಕಿದ್ದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದ ಶಿಕ್ಷಿತರಾದ ಮುನ್ನೂರ ಹದಿನೆಂಟು ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟು ಆ ರಾಜರನ್ನು ದಾನೂರಿನವರೆಗೂ ಹಿಂದಟ್ಟಿದನು.


ತೆರಹನು ತನ್ನ ಮಗನಾದ ಅಬ್ರಾಮನನ್ನೂ, ತನಗೆ ಮೊಮ್ಮಗನೂ, ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ, ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗಬೇಕೆಂದು ಕಲ್ದೀಯರ ಊರ್ ಎಂಬ ಪಟ್ಟಣವನ್ನು ಬಿಟ್ಟು ಅವರು ಹಾರಾನ ಪಟ್ಟಣಕ್ಕೆ ಬಂದು ಅಲ್ಲೇ ವಾಸಮಾಡಿಕೊಂಡರು.


“ಆಗ ಅವನು ಕಲ್ದೀಯರ ದೇಶದಿಂದ ಹೊರಟುಹೋಗಿ, ಖಾರಾನಿನಲ್ಲಿ ವಾಸವಾಗಿದ್ದನು. ಅವನ ತಂದೆ ಸತ್ತಮೇಲೆ, ದೇವರು ಅವನನ್ನು ಅಲ್ಲಿಂದ ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬರಮಾಡಿದನು.


ಸೊದೋಮಿನ ಅರಸನು, ಅಬ್ರಾಮನಿಗೆ, “ನೀನು ಬಿಡಿಸಿ ತಂದ ಜನರನ್ನು ನನಗೆ ಒಪ್ಪಿಸು; ಆಸ್ತಿಯನ್ನು ನೀನೇ ತೆಗೆದುಕೋ” ಎಂದು ಹೇಳಿದನು.


ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದ ವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇರುತ್ತದೆ.


ಅಬ್ರಾಮನ ಜೊತೆಯಲ್ಲಿದ್ದ ಲೋಟನಿಗೂ ಕುರಿ, ಎತ್ತು, ಕುಟುಂಬಗಳು ಇದ್ದವು.


ಆ ಸ್ಥಳವು ಅವರಿಬ್ಬರ ಜೀವನಕ್ಕೆ ಸಾಲದೆ ಹೋಯಿತು.


ಆಗ ಯಾಕೋಬನು ಹಾರಾನಿಗೆ ಹೋಗಬೇಕೆಂದು ಬೇರ್ಷೆಬದಿಂದ ಹೊರಟನು.


ತರುವಾಯ ಏಸಾವನು ತನ್ನ ಹೆಂಡತಿಯರನ್ನೂ, ಗಂಡುಹೆಣ್ಣು ಮಕ್ಕಳನ್ನೂ, ತನ್ನ ಮನೆಗೆ ಸೇರಿದ ಸೇವಕರೆಲ್ಲರನ್ನೂ, ತನಗಿದ್ದ ಎಲ್ಲಾ ಪಶುಪ್ರಾಣಿಗಳ ಹಿಂಡುಗಳನ್ನೂ ಕಾನಾನ್ ದೇಶದಲ್ಲಿ ಸಂಪಾದಿಸಿದ್ದ ಆಸ್ತಿಯೆಲ್ಲವನ್ನೂ ತೆಗೆದುಕೊಂಡು ತನ್ನ ತಮ್ಮನಾದ ಯಾಕೋಬನ ಬಳಿಯಿಂದ ಬೇರೆ ದೇಶಕ್ಕೆ ಹೊರಟುಹೋದನು.


ಆದರೆ ಯಾಜಕನು ಕ್ರಯಕ್ಕೆ ತೆಗೆದುಕೊಂಡ ಗುಲಾಮರೂ ಮತ್ತು ಅವನ ಮನೆಯಲ್ಲಿ ಹುಟ್ಟಿದ ಗುಲಾಮರು ಅದನ್ನು ಊಟಮಾಡಬಹುದು.


ತೆರಹನ ವಂಶದವರ ಚರಿತ್ರೆಯು: ತೆರಹನು ಅಬ್ರಾಮ, ನಾಹೋರ್, ಹಾರಾನ್ ಎಂಬುವರನ್ನು ಪಡೆದನು. ಹಾರಾನನು ಲೋಟನನ್ನು ಪಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು