Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 12:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಅಲ್ಲಿಂದ ಹೊರಟು ಬೇತೇಲಿನ ಪೂರ್ವದಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿ ಇಳಿದುಕೊಂಡನು. ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರುಗಳಿದ್ದವು. ಅಲ್ಲಿಯೂ ಅಬ್ರಾಮನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರಿನಲ್ಲಿ ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಬಳಿಕ ಅವನು ಅಲ್ಲಿಂದ ದಕ್ಷಿಣಕ್ಕೆ ಹೊರಟು ಬೇತೇಲಿಗೆ ಪೂರ್ವಕ್ಕಿರುವ ಗುಡ್ಡಗಾಡಿಗೆ ಬಂದು ಗುಡಾರ ಹಾಕಿ ನೆಲಸಿದನು. ಪಶ್ಚಿಮಕ್ಕೆ ಬೇತೇಲೂ ಪೂರ್ವಕ್ಕೆ ಆಯಿ ಎಂಬ ಊರು ಇದ್ದವು. ಅಲ್ಲೂ ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಅವರ ನಾಮಸ್ಮರಣೆಮಾಡಿ ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ಅಲ್ಲಿಂದ ಹೊರಟು ಬೇತೇಲಿಗೆ ಮೂಡಲಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿಸಿ ಇಳುಕೊಂಡನು; ಪಶ್ಚಿಮಕ್ಕೆ ಬೇತೇಲೂ ಪೂರ್ವಕ್ಕೆ ಆಯಿ ಎಂಬ ಊರೂ ಇದ್ದವು. ಅಲ್ಲಿಯೂ ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಮೇಲೆ ಅಬ್ರಾಮನು ಆ ಸ್ಥಳದಿಂದ ಹೊರಟು ಬೇತೇಲಿಗೆ ಪೂರ್ವದಲ್ಲಿರುವ ಗುಡ್ಡಗಳ ಬಳಿಗೆ ಪ್ರಯಾಣ ಮಾಡಿದನು. ಅಲ್ಲಿ ಅಬ್ರಾಮನು ತನ್ನ ಗುಡಾರಗಳನ್ನು ಹಾಕಿದನು. ಪಶ್ಚಿಮಕ್ಕೆ ಬೇತೇಲ್ ಪಟ್ಟಣವಿತ್ತು, ಪೂರ್ವಕ್ಕೆ ಆಯಿ ಪಟ್ಟಣವಿತ್ತು. ಆ ಸ್ಥಳದಲ್ಲಿ ಅವನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಕೆಯನ್ನು ಕಟ್ಟಿ ಅಲ್ಲಿ ಅವನು ಯೆಹೋವನನ್ನು ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅಲ್ಲಿಂದ ಅವರು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ, ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರೂ ಇರುವ ಹಾಗೆ ತನ್ನ ಗುಡಾರವನ್ನು ಹಾಕಿಕೊಂಡನು. ಅಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಯೆಹೋವ ದೇವರ ಹೆಸರನ್ನು ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 12:8
33 ತಿಳಿವುಗಳ ಹೋಲಿಕೆ  

ಬೆನ್ಯಾಮೀನ್ ಕುಲದವರು ಗೆಬ ಊರಿನಿಂದ, ಮಿಕ್ಮಾಷ್, ಅಯ್ಯಾ ಹಾಗು ಬೇತೇಲ್ ಎಂಬ ಗ್ರಾಮಗಳವರೆಗೂ ವಾಸಮಾಡುತ್ತಿದ್ದರು.


ತರುವಾಯ ಸೇತನು ಮಗನನ್ನು ಪಡೆದು ಅವನಿಗೆ, “ಎನೋಷ್” ಎಂದು ಹೆಸರಿಟ್ಟನು. ಜನರು, “ಯೆಹೋವ” ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವುದಕ್ಕೆ ಅಂದಿನಿಂದ ಪ್ರಾರಂಭಿಸಿದರು.


ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು ಅಲ್ಲಿ ನಿತ್ಯದೇವರಾದ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.


ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರಾದವರಿಗೂ, ಪರಿಶುದ್ಧರಾಗಿರಲು ಕರೆಯಲ್ಪಟ್ಟವರಿಗೂ, ನಮ್ಮ ಮತ್ತು ಅವರ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲಿದ್ದರೂ ಅವರೆಲ್ಲರಿಗೂ ಬರೆಯುವುದು ಏನೆಂದರೆ,


ಇದಲ್ಲದೆ ಅವನು ಆ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು. ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ “ಲೂಜ್” ಎಂದು ಹೆಸರಿತ್ತು.


ನಡುವೆ ಪೂರ್ವದಲ್ಲಿ ಗುಡಾರ ಹಾಕಿಸಿ ಯಜ್ಞವೇದಿಯನ್ನು ಕಟ್ಟಿದ್ದ ಸ್ಥಳಕ್ಕೆ ಅಬ್ರಾಮನು ಹಿಂತಿರುಗಿ ಬಂದು ಅಲ್ಲಿ ಯೆಹೋವನ ಹೆಸರಿನಲ್ಲಿ ಆರಾಧಿಸಿದನು.


ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ” ಎಂಬುದೇ.


ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವುದು. ಯೆಹೋವನು ತಿಳಿಸಿದಂತೆ ಚೀಯೋನಿನ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಅನೇಕರು ಉಳಿಯುವರು. ಯೆಹೋವನು ಹೇಳಿದಂತೆಯೇ, ಉಳಿದವರಲ್ಲಿ ಯೆಹೋವನಿಂದ ಕರೆಯಲ್ಪಟ್ಟವರು ಬದುಕುವರು.”


ಶತ್ರುಗಳು ಅಯ್ಯಾಥಿನ ಮೇಲೆ ದಂಡೆತ್ತಿ ಬಂದಿದ್ದಾರೆ, ಮಿಗ್ರೋನನ್ನು ಹಾದುಹೋಗಿದ್ದಾರೆ; ಮಿಕ್ಮಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟುಬಿಟ್ಟಿದ್ದಾರೆ.


ಆಗ ಯೆಹೋವನ ಹೆಸರನ್ನು ಹೇಳಿ, “ಯೆಹೋವನೇ, ಕೃಪೆಮಾಡಿ ನನ್ನ ಪ್ರಾಣವನ್ನು ರಕ್ಷಿಸು” ಎಂದು ಪ್ರಾರ್ಥಿಸಿದೆನು.


ಬೇತ್ ಅರಾಬಾ, ಚೆಮಾರಯಿಮ್, ಬೇತೇಲ್,


ಆಯಿ ಎಂಬ ಊರಿನಲ್ಲಿಯೂ ಬೇತೇಲಿನಲ್ಲಿಯೂ ಒಬ್ಬ ಗಂಡಸಾದರೂ ಉಳಿಯಲಿಲ್ಲ. ಊರಬಾಗಿಲುಗಳನ್ನು ತೆರೆದು ಬಿಟ್ಟು ಎಲ್ಲರೂ ಇಸ್ರಾಯೇಲ್ಯರನ್ನು ಹಿಂದಟ್ಟುವುದಕ್ಕೋಸ್ಕರ ಹೊರಟರು.


ಅಂತೆಯೇ ಯೆಹೋಶುವನು ಎದ್ದು ಭಟರೆಲ್ಲರ ಸಹಿತವಾಗಿ ಆಯಿಗೆ ಹೋಗುವುದಕ್ಕೋಸ್ಕರ ಸಿದ್ಧನಾಗಿ ಮೂವತ್ತು ಸಾವಿರ ಯುದ್ಧವೀರರನ್ನು ಆರಿಸಿ ಅವರಿಗೆ


ಯೆಹೋಶುವನು ಕೆಲವು ಜನರನ್ನು ಕರೆದು “ನೀವು ಗಟ್ಟಾ ಹತ್ತಿ ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ‘ಆಯಿ’ ಎಂಬ ಪ್ರಾಂತ್ಯದಲ್ಲಿ ರಹಸ್ಯವಾಗಿ ಸಂಚರಿಸಿ ನೋಡಿರಿ” ಎಂದು ಹೇಳಿ ಅವರನ್ನು ಯೆರಿಕೋವಿನಿಂದ ಕಳುಹಿಸಿದನು. ಅವರು ಹೋಗಿ ಆಯಿ ಎಂಬ ಊರಲ್ಲಿ ಸಂಚರಿಸಿ ನೋಡಿ,


ನಾವು ಇಲ್ಲಿಂದ ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಲಾಲಿಸಿ ನಾನು ಹೋದ ಮಾರ್ಗದಲ್ಲೆಲ್ಲಾ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟಿಸುತ್ತೇನೆ” ಎಂದು ಹೇಳಿದನು.


ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗ, ಅಲ್ಲಿ ಅನ್ಯ ದೇಶದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಭಾಧ್ಯರಾಗಿದ್ದ ಇಸಾಕನೂ, ಯಾಕೋಬನೂ ಅವನಂತೆಯೇ ಗುಡಾರಗಳಲ್ಲಿ ವಾಸಿಸಿದರು.


ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿ, ಅದರ ಮೇಲೆ ಶುದ್ಧವಾದ ಪ್ರತಿ ಪಶು ಪಕ್ಷಿಗಳಿಂದ ಆಯ್ದುಕೊಂಡು ಸರ್ವಾಂಗಹೋಮ ಮಾಡಿದನು.


ಅವನು ದಕ್ಷಿಣ ದೇಶವನ್ನು ಬಿಟ್ಟು ಮುಂದೆ ಪ್ರಯಾಣ ಮಾಡುತ್ತಾ ಬೇತೇಲಿನವರೆಗೆ ಅಂದರೆ ಬೇತೇಲಿಗೂ ಆಯಿ ಎಂಬ ಊರಿಗೂ


ತರುವಾಯ ಅಬ್ರಾಮನು ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನಲ್ಲಿರುವ ಮಮ್ರೆ ಮೋರೆ ಎಂಬ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು, ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು.


ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ, ಕಟ್ಟಿಗೆಯನ್ನು ಜೋಡಿಸಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಅವನನ್ನು ಯಜ್ಞವೇದಿಯ ಮೇಲೆ ಇದ್ದ ಕಟ್ಟಿಗೆಯ ಮೇಲೆ ಮಲಗಿಸಿದನು.


ಇಸಾಕನು ಯಜ್ಞವೇದಿಯನ್ನು ಕಟ್ಟಿಸಿ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿ ಅಲ್ಲಿ ತನ್ನ ಗುಡಾರವನ್ನು ಹಾಕಿಸಿಕೊಂಡನು.


ಅವರು ಹೊಂಚುಹಾಕುವುದಕ್ಕೆ ಹೊರಟುಹೋಗಿ ಬೇತೇಲಿಗೂ ಆಯಿಗೂ ನಡುವೆ ಆಯಿ ಎಂಬ ಊರಿನ ಪಶ್ಚಿಮದಲ್ಲಿ ಅಡಗಿಕೊಂಡರು. ಯೆಹೋಶುವನು ಆ ರಾತ್ರಿಯನ್ನು ಜನರ ಮಧ್ಯದಲ್ಲಿ ಕಳೆದನು.


ಯೆಹೋಶುವನು ಹೆಚ್ಚುಕಡಿಮೆ ಐದು ಸಾವಿರ ಜನರನ್ನು ಆರಿಸಿಕೊಂಡು ಬೇತೇಲಿಗೂ ಆಯಿಗೂ ನಡುವೆ ಇರುವ ಪಟ್ಟಣದ ಪಶ್ಚಿಮದಲ್ಲಿ ಹೊಂಚಿನೋಡುವುದಕ್ಕೋಸ್ಕರ ಇರಿಸಿದನು.


ಬಹುಮಾನ ಹೊಂದಿದವರು ಯಾರೆಂದರೆ: ಬೇತೇಲಿನವರು, ದಕ್ಷಿಣ ಪ್ರಾಂತ್ಯದ ರಾಮೋತಿನವರು, ಯತ್ತೀರಿನವರು,


ತರುವಾಯ ಲಾಬಾನನೂ ಯಾಕೋಬನನ್ನು ಸಂಧಿಸಿದಾಗ ಯಾಕೋಬನು ಬೆಟ್ಟದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. ಲಾಬಾನನು ಸಹ ತನ್ನವರೊಡನೆ ಅದೇ ಗಿಲ್ಯಾದ್ ಬೆಟ್ಟದಲ್ಲಿ ಗುಡಾರವನ್ನು ಹಾಕಿಕೊಂಡನು.


ಅಲ್ಲಿ ಯಾಕೋಬನು ಯೆಹೋವನ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಏಲ್ ಎಲೋಹೆ ಇಸ್ರಾಯೇಲ್” ಎಂದು ಹೆಸರಿಟ್ಟನು.


ಅವನು ತನ್ನ ಅಣ್ಣನ ಬಳಿಯಿಂದ ಓಡಿಹೋದಾಗ ದೇವರು ಅವನಿಗೆ ಪ್ರತ್ಯಕ್ಷನಾದನು. ಅದುದರಿಂದ ಅವನು ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.


ಆ ಸ್ಥಳದಲ್ಲಿ ಮೋಶೆಯು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಯೆಹೋವ ನಿಸ್ಸಿ” ಎಂದು ಹೆಸರಿಟ್ಟನು.


ಯೆಹೋವನ ಸೇವಕನಾದ ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿದಂತೆ ಹಾಗೂ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಯೆಹೋಶುವನು ಇಸ್ರಾಯೇಲಿನ ದೇವರಾದ ಯೆಹೋವನಿಗೆ ಏಬಾಲ್ ಬೆಟ್ಟದಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು. ಉಳಿಯು ಮುಟ್ಟದ ಹುಟ್ಟುಕಲ್ಲುಗಳಿಂದಲೇ ಅದನ್ನು ಕಟ್ಟಿಸಿದನು


ರೂಬೇನ್ಯರೂ ಗಾದ್ಯರೂ ಹಾಗೂ ಮನಸ್ಸೆ ಕುಲದ ಅರ್ಧ ಜನರೂ ಕಾನಾನ್ ದೇಶದಲ್ಲಿರುವ ಯೊರ್ದನಿನ ತೀರಪ್ರದೇಶಕ್ಕೆ ಬಂದಾಗ ಅಲ್ಲಿ ಒಂದು ದೊಡ್ಡ ಯಜ್ಞವೇದಿಯನ್ನು ಕಟ್ಟಿದರು.


ಗಿದ್ಯೋನನು ಅಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ಷಾಲೋಮ್ ಎಂದು ಹೆಸರಿಟ್ಟನು; ಅದು ಈ ವರೆಗೂ ಅಬೀಯೆಜೆರನ ಗೋತ್ರದವರ ಒಫ್ರದಲ್ಲಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು