Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 13:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೀಗಿರಲು ಅಬ್ರಾಮನು ಲೋಟನಿಗೆ, “ನನಗೂ ನಿನಗೂ, ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಾಗಬಾರದು; ನಾವು ಸಹೋದರರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದುದರಿಂದ ಅಬ್ರಾಮನು ಲೋಟನಿಗೆ ಹೀಗೆಂದನು: “ನನಗೂ ನಿನಗೂ, ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು. ನಾವು ಬಳಗದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೀಗಿರಲು ಅಬ್ರಾಮನು ಲೋಟನಿಗೆ - ನನಗೂ ನಿನಗೂ, ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದ್ದರಿಂದ ಅಬ್ರಾಮನು ಲೋಟನಿಗೆ, “ನಿನಗೂ ನನಗೂ ಯಾವ ವಾಗ್ವಾದವೂ ಇರಬಾರದು. ನಿನ್ನ ಜನರೂ ನನ್ನ ಜನರೂ ವಾಗ್ವಾದ ಮಾಡಬಾರದು; ನಾವೆಲ್ಲರೂ ಸಹೋದರರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅಬ್ರಾಮನು ಲೋಟನಿಗೆ, “ನನಗೂ, ನಿನಗೂ; ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಿರಬಾರದು. ಏಕೆಂದರೆ ನಾವು ಬಳಗದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 13:8
30 ತಿಳಿವುಗಳ ಹೋಲಿಕೆ  

ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಅವರಿಗೆ ಎದುರಾಗಿ ಬಂದು, ‘ಜನರೇ, ನೀವು ಸಹೋದರರಲ್ಲವೇ, ನೀವೇಕೆ ಒಬ್ಬರಿಗೊಬ್ಬರು ಅನ್ಯಾಯ ಮಾಡುತ್ತೀರಿ?’ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಲು ಬಂದನು.


ಆಹಾ, ಸಹೋದರರು ಒಂದಾಗಿರುವುದು, ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು!


ತಾಳ್ಮೆಗೆ ಭಕ್ತಿಯನ್ನೂ, ಭಕ್ತಿಗೆ ಸಹೋದರ ಸ್ನೇಹವನ್ನೂ, ಸಹೋದರ ಸ್ನೇಹಕ್ಕೆ ಪ್ರೀತಿಯನ್ನೂ ಕೂಡಿಸಿರಿ.


ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ. ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.


ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ, ಪರಸ್ಪರ ಅನುಕಂಪವುಳ್ಳವರಾಗಿರಿ, ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, ಕರುಣೆಯೂ, ದೀನಭಾವವೂ ಉಳ್ಳವರಾಗಿರಿ.


ಕ್ರೈಸ್ತ ಸಹೋದರರು ಅಣ್ಣ ತಮ್ಮಂದಿರೆಂದು ತಿಳಿದು ಒಬ್ಬರನ್ನೊಬ್ಬರು ಪ್ರೀತಿಸಿರಿ. ಗೌರವಮರ್ಯಾದೆಗಳನ್ನು ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.


ವ್ಯಾಜ್ಯಕ್ಕೆ ದೂರವಿರುವವನು ಮಾನಕ್ಕೆ ಯೋಗ್ಯನು, ಜಗಳವು ಪ್ರತಿಯೊಬ್ಬ ಮೂರ್ಖನಿಗೂ ಸಹಜ.


ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.


ಆಗ ತನ್ನ ಅಣ್ಣತಮ್ಮಂದಿರಿಗೆ, “ನೀವು ದಾರಿಯಲ್ಲಿ ಜಗಳಮಾಡಬೇಡಿರಿ” ಎಂದು ಬುದ್ಧಿ ಹೇಳಿ ಅವರಿಗೆ ಹೋಗುವುದಕ್ಕೆ ಅಪ್ಪಣೆಕೊಟ್ಟನು. ಅವರು ಹೊರಟು ಹೋದರು.


ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದ ಬಂದದ್ದಾಗಿದೆ ಮತ್ತು ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.


ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಗೌರವಿಸಿರಿ.


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.


ಸಹೋದರ ಪ್ರೀತಿಯನ್ನು ಸತತವಾಗಿ ತೋರಿಸಿರಿ.


ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.


ಸಹೋದರ ಸ್ನೇಹದ ವಿಷಯದಲ್ಲಿ ನಿಮಗೆ ಬರೆಯುವ ಅವಶ್ಯಕತೆಯಿಲ್ಲ, ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.


ಗೊಣಗುಟ್ಟದೆಯೂ, ವಿವಾದಗಳಿಲ್ಲದೆಯೂ ಎಲ್ಲವನ್ನು ಮಾಡಿರಿ.


ಶಾಂತಿಗಾಗಿ ಶ್ರಮಿಸುವವರು ಧನ್ಯರು; ಅವರು ದೇವರ ಮಕ್ಕಳು ಎಂದೆನಿಸಿಕೊಳ್ಳುವರು.


ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು, ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.


ಮರುದಿನ ಅವನು ಮತ್ತೆ ಹೊರಗೆ ಹೋದಾಗ, ಇಬ್ರಿಯರಾದ ಇಬ್ಬರು ಜಗಳವಾಡುತ್ತಿದ್ದರು. ಅನ್ಯಾಯಮಾಡುತ್ತಿದ್ದವನಿಗೆ ಅವನು, “ಏನಯ್ಯಾ, ನೀನು ಯಾಕೆ ಸ್ವಕುಲದವರನ್ನು ಹೊಡೆಯುತ್ತೀ?” ಎಂದು ಕೇಳಿದನು.


ದೇಶವೆಲ್ಲಾ ನಿನ್ನ ಎದುರಿಗೆ ಇದೆ; ದಯವಿಟ್ಟು ನನ್ನನ್ನು ಬಿಟ್ಟು ಪ್ರತ್ಯೇಕವಾಗಿ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುವೆನು; ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುವೆನು” ಎಂದು ಹೇಳಿದನು.


“ನೀವು ಚಿಕ್ಕಂದಿನಿಂದ ಇದುವರೆಗೂ ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಪದ್ಧತಿಯ ಮೇರೆಗೆ ಪಶುಪಾಲಕರು ಎಂದು ಹೇಳಿರಿ. ಪಶುಪಾಲಕರು ಐಗುಪ್ತರಿಗೆ ಅಸಹ್ಯವಾಗಿರುವುದರಿಂದ, ಗೋಷೆನ್ ಸೀಮೆಯನ್ನು ನಿಮ್ಮ ನಿವಾಸಕ್ಕಾಗಿ ನೇಮಿಸುವನು” ಎಂದನು.


ಅಬ್ರಾಮನು ತನ್ನ ತಮ್ಮನ ಮಗನು ಸೆರೆಗೆ ಸಿಕ್ಕಿದ್ದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದ ಶಿಕ್ಷಿತರಾದ ಮುನ್ನೂರ ಹದಿನೆಂಟು ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟು ಆ ರಾಜರನ್ನು ದಾನೂರಿನವರೆಗೂ ಹಿಂದಟ್ಟಿದನು.


ಅದೇ ಸಮಯದಲ್ಲಿ ಎಬೆದನ ಮಗನಾದ ಗಾಳನೆಂಬುವನು ತನ್ನ ಬಂಧುಗಳೊಡನೆ ಶೆಕೆಮಿಗೆ ಬಂದನು. ಶೆಕೆಮಿನ ಹಿರಿಯರು ಅವನಲ್ಲಿ ಭರವಸವಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು