Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ಸಿದ್ದೀಮ್ ತಗ್ಗು ಪ್ರದೇಶ ಕಲ್ಲರಗಿನ ಕೆಸರುಗುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ರಾಜರ ಕಡೆಯವರು ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆ ಸಿದ್ದೀಮ್ ತಗ್ಗಿನಲ್ಲಿ ಕಲ್ಲರಗಿನ ಕೆಸರುಗುಣಿಗಳು ಬಹಳವಿದ್ದವು. ಸೊದೋಮ್ ಗೊಮೋರದ ರಾಜರಕಡೆಯವರು ಹಿಮ್ಮೆಟ್ಟಿ ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು. ಉಳಿದವರು ಬೆಟ್ಟಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೆ ಸಿದ್ದೀಮ್ ತಗ್ಗಿನಲ್ಲಿ ಕಲ್ಲರಗಿನ ಕೆಸರುಕುಣಿಗಳು ತುಂಬಾ ಇದ್ದವು. ಸೊದೋಮ್ ಗೊಮೋರಗಳ ರಾಜರ ಕಡೆಯವರು ಓಡಿಹೋಗುವಾಗ ಆ ಕುಣಿಗಳಲ್ಲಿ ಬಿದ್ದು ಸತ್ತರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸಿದ್ದೀಮ್ ಕಣಿವೆಯಲ್ಲಿ ಕಲ್ಲರಗಿನ ಕೆಸರುಕುಣಿಗಳು ಬಹಳಷ್ಟಿದ್ದವು. ಸೊದೋಮ್ ಮತ್ತು ಗೊಮೋರಗಳ ರಾಜರುಗಳು ಮತ್ತು ಅವರ ಸೈನ್ಯಗಳವರು ಓಡಿಹೋಗುವಾಗ ಈ ಕುಣಿಗಳಲ್ಲಿ ಬಿದ್ದುಹೋದರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಸಿದ್ದೀಮ್ ತಗ್ಗು ಕಲ್ಲರಗಿನ ಕೆಸರುಕುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ಅರಸರು ಓಡಿಹೋಗಿ ಅದರಲ್ಲಿ ಬಿದ್ದರು. ಉಳಿದವರು ಬೆಟ್ಟಕ್ಕೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:10
12 ತಿಳಿವುಗಳ ಹೋಲಿಕೆ  

ಅವರನ್ನು ಹೊರಗೆ ತಂದ ಮೇಲೆ ಅವರಲ್ಲಿ ಒಬ್ಬನು, “ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ತಿರುಗಿ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು” ಎಂದನು.


ಲೋಟನು ಚೋಗರಿನಲ್ಲಿರುವುದಕ್ಕೆ ಹೆದರಿ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಕರೆದುಕೊಂಡು ಬೆಟ್ಟವನ್ನು ಹತ್ತಿ ಅಲ್ಲಿ ವಾಸಮಾಡಿದನು. ಅವನೂ ಅವನ ಇಬ್ಬರು ಹೆಣ್ಣುಮಕ್ಕಳೂ ಒಂದು ಗವಿಯಲ್ಲಿ ವಾಸಮಾಡಿದರು.


ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು; ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು; ನಾನು ದಂಡನೆಯ ವರ್ಷವನ್ನು ಮೋವಾಬಿಗೆ ಬರಮಾಡುವೆನಷ್ಟೆ. ಇದು ಯೆಹೋವನ ನುಡಿ.”


ಭಯದ ಸಪ್ಪಳದಿಂದ ಓಡಿ ಹೋಗುವವನು ಗುಂಡಿಯಲ್ಲಿ ಬೀಳುವನು, ಗುಂಡಿಯನ್ನು ಹತ್ತಿ ಬರುವವನು ಬಲೆಗೆ ಸಿಕ್ಕುವನು. ನೋಡು, ಆಕಾಶದ ದ್ವಾರಗಳು ತೆರೆದಿವೆ, ಭೂಮಿಯ ಅಸ್ತಿವಾರಗಳು ಕಂಪಿಸುತ್ತಿವೆ.


“ಅವರೆಲ್ಲರೂ ಬನ್ನಿ, ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು.


ಅವರು ಎಂದೋರಿನಲ್ಲಿ ವಧಿಸಲ್ಪಟ್ಟು, ಹೊಲದ ಗೊಬ್ಬರವಾಗಿ ಹೋದರಲ್ಲಾ.


ಇಸ್ರಾಯೇಲ್ಯರು ತಮ್ಮನ್ನು ಅರಣ್ಯದವರೆಗೂ ಹಿಂದಟ್ಟಿ ಬಂದ ಆಯಿ ಎಂಬ ಊರಿನವರನ್ನು ಅಲ್ಲೇ ಕತ್ತಿಯಿಂದ ಸಂಹರಿಸಿದ ನಂತರ ಅವರೆಲ್ಲರೂ ಪಟ್ಟಣಕ್ಕೆ ಹೋಗಿ ಅಲ್ಲಿದ್ದವರನ್ನು ಕೊಂದರು.


ಈ ಐದು ಅರಸರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್, ತಗ್ಗಿನ ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದರು.


ಅಂದರೆ ಏಲಾಮಿನ ರಾಜನಾದ ಕೆದೊರ್ಲಗೋಮರ್, ಗೋಯಿಮದ ರಾಜನಾದ ತಿದ್ಗಾಲ, ಶಿನಾರ್ ಅರಸನಾದ ಅಮ್ರಾಫೆಲ್, ಎಲ್ಲಸಾರಿನ ರಾಜನಾದ ಅರಿಯೋಕ ಇವರಿಗೆ ವಿರೋಧವಾಗಿ ಸಿದ್ದೀಮ್ ಎಂಬ ತಗ್ಗಿನಲ್ಲಿ ತಮ್ಮ ದಂಡನ್ನು ನಿಲ್ಲಿಸಿದರು. ಹೀಗೆ ನಾಲ್ಕು ಮಂದಿ ರಾಜರು ಐದು ಮಂದಿ ರಾಜರನ್ನು ಎದುರಿಸಿದರು.


ಗೆದ್ದ ಆ ನಾಲ್ಕು ಅರಸರು ಸೊದೋಮ್ ಗೊಮೋರ ಪಟ್ಟಣಗಳನ್ನು ಸೂರೆಮಾಡಿ ಅವುಗಳಲ್ಲಿದ್ದ ಎಲ್ಲಾ ಸಂಪತ್ತನ್ನೂ ದವಸವನ್ನೂ ತೆಗೆದುಕೊಂಡು ಹೋದರು.


ಅವನು ಕೆದೊರ್ಲಗೋಮರನ್ನೂ ಅವನೊಂದಿಗೆ ಇದ್ದ ರಾಜರನ್ನೂ ಸೋಲಿಸಿ ಬಂದ ಮೇಲೆ ಸೊದೋಮಿನ ಅರಸನು ಅವನನ್ನು ಅರಸನ ತಗ್ಗು ಎನ್ನಿಸಿಕೊಳ್ಳುವ ಶಾವೆ ತಗ್ಗಿನಲ್ಲಿ ಅಬ್ರಾಮನನ್ನು ಎದುರುಗೊಂಡನು.


ಸೊದೋಮಿನ ಅರಸನು, ಅಬ್ರಾಮನಿಗೆ, “ನೀನು ಬಿಡಿಸಿ ತಂದ ಜನರನ್ನು ನನಗೆ ಒಪ್ಪಿಸು; ಆಸ್ತಿಯನ್ನು ನೀನೇ ತೆಗೆದುಕೋ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು