Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು ಕೆದೊರ್ಲಗೋಮರನ್ನೂ ಅವನೊಂದಿಗೆ ಇದ್ದ ರಾಜರನ್ನೂ ಸೋಲಿಸಿ ಬಂದ ಮೇಲೆ ಸೊದೋಮಿನ ಅರಸನು ಅವನನ್ನು ಅರಸನ ತಗ್ಗು ಎನ್ನಿಸಿಕೊಳ್ಳುವ ಶಾವೆ ತಗ್ಗಿನಲ್ಲಿ ಅಬ್ರಾಮನನ್ನು ಎದುರುಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅಬ್ರಾಮನು ಕೆದೊರ್ಲಗೋಮರನನ್ನೂ ಅವನೊಂದಿಗಿದ್ದ ರಾಜರನ್ನೂ ಸೋಲಿಸಿ ಬಂದಾಗ ಸೊದೋಮಿನ ಅರಸನು ಅವನನ್ನು ಶಾವೆ ತಗ್ಗಿನಲ್ಲಿ (ಅದಕ್ಕೆ ಅರಸನ ತಗ್ಗು ಎಂಬ ಹೆಸರೂ ಉಂಟು) ಭೇಟಿಯಾಗಲು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನು ಕೆದೊರ್ಲಗೋಮರನನ್ನೂ ಅವನೊಂದಿಗೆ ಇದ್ದ ರಾಜರನ್ನೂ ಹೊಡೆದು ಬಂದಮೇಲೆ ಸೊದೋವಿುನ ಅರಸನು ಅವನನ್ನು ಅರಸನ ತಗ್ಗು ಎನ್ನಿಸಿಕೊಳ್ಳುವ ಶಾವೆ ತಗ್ಗಿನಲ್ಲಿ ಎದುರುಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅಬ್ರಾಮನು ಕೆದೊರ್ಲಗೋಮರನನ್ನೂ ಮತ್ತು ಅವನೊಡನಿದ್ದ ರಾಜರುಗಳನ್ನೂ ಸೋಲಿಸಿದ ಮೇಲೆ ತನ್ನ ಮನೆಗೆ ಹಿಂತಿರುಗಿದನು. ಆಗ ಸೊದೋಮಿನ ರಾಜನು ಅಬ್ರಾಮನನ್ನು ಭೇಟಿಯಾಗಲು ಶಾವೆ ಕಣಿವೆಗೆ ಹೋದನು. (ಈಗ ಇದಕ್ಕೆ ರಾಜನ ಕಣಿವೆ ಎಂದು ಕರೆಯುತ್ತಾರೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನು ಕೆದೊರ್ಲಗೋಮರನನ್ನೂ, ಅವನ ಸಂಗಡ ಇದ್ದ ರಾಜರನ್ನೂ ಸೋಲಿಸಿ, ಹಿಂದಿರುಗಿ ಬಂದಾಗ, ಸೊದೋಮಿನ ಅರಸನು ಹೊರಟು ಶಾವೆ ತಗ್ಗು ಎಂಬ ಅರಸನ ತಗ್ಗಿನಲ್ಲಿ ಅಬ್ರಾಮನನ್ನು ಎದುರುಗೊಳ್ಳುವುದಕ್ಕಾಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:17
9 ತಿಳಿವುಗಳ ಹೋಲಿಕೆ  

ಅಬ್ಷಾಲೋಮನು ಜೀವದಿಂದ ಇದ್ದಾಗ ತನ್ನ ಹೆಸರನ್ನುಳಿಸಲು ಮಗನಿಲ್ಲದೆ ಇದ್ದುದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ, ಅದನ್ನು ಅರಸನ ತಗ್ಗಿನಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಅದಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದು ಇಂದಿನ ವರೆಗೂ ಅಬ್ಷಾಲೋಮನ ಜ್ಞಾಪಕಸ್ತಂಭ ಎಂದು ಕರೆಯಲಾಗುತ್ತಿದೆ.


ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದನು. ಈತನು ರಾಜರನ್ನು ಸಂಹಾರ ಮಾಡಿ ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು.


ಭಾಗ್ಯವಂತನಿಗೆ ಬಹು ಮಂದಿ ಸ್ನೇಹಿತರು, ಬಡವನಿಗೆ ಇದ್ದ ಸ್ನೇಹಿತನೂ ದೂರವಾಗುವನು.


ಬಡವನು ನೆರೆಯವನಿಗೂ ಅಸಹ್ಯ, ಧನವಂತನಿಗೆ ಬಹು ಜನ ಮಿತ್ರರು.


ದಾವೀದನು ಫಿಲಿಷ್ಟಿಯನನ್ನು ಸಂಹರಿಸಿ, ಸರ್ವಜನರೊಡನೆ ಹಿಂದಿರುಗಿ ಬರುವಾಗ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳಿಂದ ಸ್ತ್ರೀಯರೂ ಹೊರಗೆ ಬಂದು ದಮ್ಮಡಿತಾಳಗಳನ್ನು ಹಿಡಿದು, ಸಂತೋಷದಿಂದ ಹಾಡುತ್ತಾ, ಕುಣಿಯುತ್ತಾ, ಅರಸನಾದ ಸೌಲನನ್ನು ಎದುರುಗೊಂಡರು.


ಯೆಪ್ತಾಹನು ಮಿಚ್ಪೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ದಮ್ಮಡಿಬಡಿಯುತ್ತಾ, ನೃತ್ಯಮಾಡುತ್ತಾ ಅವನನ್ನು ಎದುರುಗೊಳ್ಳುವುದಕ್ಕಾಗಿ ಬಂದಳು. ಆಕೆಯು ಅವನಿಗೆ ಒಬ್ಬಳೇ ಮಗಳಾಗಿದ್ದಳು. ಆಕೆಯ ಹೊರತು ಅವನಿಗೆ ಬೇರೆ ಗಂಡು ಹೆಣ್ಣು ಮಕ್ಕಳೇ ಇರಲಿಲ್ಲ.


ಆ ದಿನಗಳಲ್ಲಿ ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಜಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಗೋಯಿಮದ ಅರಸನಾದ ತಿದ್ಗಾಲನು ಈ ನಾಲ್ವರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್,


ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನಿಗೆ ಸೇರಿದ್ದ ರಾಜರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆಕಿರ್ಯಾತಯಿಮಿನಲ್ಲಿ ಏಮಿಯರನ್ನೂ ಸೋಲಿಸಿದರು.


ಆದರೆ ಸಿದ್ದೀಮ್ ತಗ್ಗು ಪ್ರದೇಶ ಕಲ್ಲರಗಿನ ಕೆಸರುಗುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ರಾಜರ ಕಡೆಯವರು ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು