Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನಿಗೆ ಸೇರಿದ್ದ ರಾಜರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆಕಿರ್ಯಾತಯಿಮಿನಲ್ಲಿ ಏಮಿಯರನ್ನೂ ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಮತ್ತು ಅವನಿಗೆ ಸೇರಿದ ರಾಜರೂ ಬಂದು ಅಷ್ಟರೋತ್ ಕರ್ನಯಿಮ್ ಎಂಬಲ್ಲಿ ರೆಫಾಯರನ್ನೂ ಹಾಮ್ ಎಂಬಲ್ಲಿ ಏಮಿಯರನ್ನೂ ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹದಿನಾಲ್ಕನೆಯ ವರುಷದಲ್ಲಿ ಕೆದೊರ್ಲಗೋಮರನೂ ಅವನಿಗೆ ಸೇರಿದ್ದ ರಾಜರೂ ಬಂದು ಅಷ್ಟರೋತ್ ಕರ್ನಯಿವಿುನಲ್ಲಿ ರೆಫಾಯರನ್ನೂ ಹಾವಿುನಲ್ಲಿ ಜೂಜ್ಯರನ್ನೂ ಶಾವೆಕಿರ್ಯಾತಯಿವಿುನಲ್ಲಿ ಏವಿುಯರನ್ನೂ ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದ್ದರಿಂದ ಹದಿನಾಲ್ಕನೆಯ ವರ್ಷದಲ್ಲಿ, ರಾಜನಾದ ಕೆದೊರ್ಲಗೋಮರನು ಮತ್ತು ಅವನೊಡನಿದ್ದ ರಾಜರುಗಳು ಅವರ ವಿರೋಧವಾಗಿ ಯುದ್ಧಮಾಡಲು ಬಂದರು. ಕೆದೊರ್ಲಗೋಮರನು ಮತ್ತು ಅವನೊಡನಿದ್ದ ರಾಜರುಗಳು ಅಷ್ಟರೋತ್-ಕರ್ನಯಿಮಿನಲ್ಲಿದ್ದ ರೆಫಾಯರನ್ನೂ ಹಾಮಿನಲ್ಲಿದ್ದ ಜೂಜ್ಯರನ್ನೂ ಶಾವೆಕೆರ್ಯಾತಯಿಮಿನಲ್ಲಿದ್ದ ಏಮಿಯರನ್ನೂ ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನ ಸಂಗಡ ಇದ್ದ ಅರಸರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ, ಹಾಮಿನಲ್ಲಿ ಜೂಜ್ಯರನ್ನೂ, ಶಾವೆ ಕಿರ್ಯಾತಯಿಮಿನಲ್ಲಿ ಏಮಿಯರನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:5
28 ತಿಳಿವುಗಳ ಹೋಲಿಕೆ  

(ರೆಫಾಯರೊಳಗೆ ಬಾಷಾನಿನ ಅರಸನಾದ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈ ಅಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.)


ಯೆಹೋವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನನ್ನೂ, ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸನಾದ ಓಗನನ್ನೂ ಜಯಿಸಿದ ತರುವಾಯವೇ ಮೋಶೆಯು ಇದನ್ನೆಲ್ಲಾ ತಿಳಿಸಿದನು.


ಹಿತ್ತಿಯರೂ, ಪೆರಿಜೀಯರೂ, ರೆಫಾಯರೂ,


ನೀವು ಅವರಿಗೆ ಭಯಪಡಬೇಡಿರಿ; ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಪರವಾಗಿ ಯುದ್ಧಮಾಡುವನು” ಎಂದು ಆಜ್ಞಾಪಿಸಿದೆನು.


ಕಿರ್ಯಾತಯಿಮ್, ಬೇತ್ ಗಾಮೂಲ್ ಮತ್ತು ಬೇತ್ ಮೆಯೋನ್,


ಮೋವಾಬನನ್ನು ಕುರಿತು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಅಯ್ಯೋ ನೆಬೋ ಊರಿನ ಗತಿಯನ್ನು ಏನು ಹೇಳಲಿ! ಅದು ಹಾಳಾಯಿತು; ಕಿರ್ಯಾತಯಿಮು ಶತ್ರುವಿನ ಕೈಗೆ ಸಿಕ್ಕಿ ಮಾನಭಂಗ ಹೊಂದಿದೆ, ಮಿಸ್ಗಾಬ್ ಕೆಡವಲ್ಪಟ್ಟು ಅವಮಾನಕ್ಕೆ ಗುರಿಯಾಗಿದೆ.


ಹೊಲದಲ್ಲಿ ಬೆಳೆ ಕೊಯ್ಯುವವನು ಪೈರುಗಳನ್ನು ಒಟ್ಟುಗೂಡಿಸಿ ಕೈಯಿಂದ ತೆನೆಗಳನ್ನು ಕತ್ತರಿಸುವ ಹಾಗಿರುವುದು. ಹೌದು, ರೆಫಾಯೀಮ್ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆ ಇರುವುದು.


ಕೆಂಪು ಸಮುದ್ರದ ಬಳಿಯಲ್ಲಿ ಘೋರಕೃತ್ಯಗಳನ್ನೂ ನಡೆಸಿದ, ತಮ್ಮ ರಕ್ಷಕನಾದ ದೇವರನ್ನು ಮರೆತೇ ಬಿಟ್ಟರು.


ಅವರು ಹಾಮನ ದೇಶದವರ ಮಧ್ಯದಲ್ಲಿ, ಆತನು ಆಜ್ಞಾಪಿಸಿದ ವಿವಿಧ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿದರು.


ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪ್ರವಾಸಿಯಾದನು.


ಹಾಮನ ವಂಶದವರ ಪ್ರಥಮಫಲವಾಗಿರುವ ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದನು.


ಫಿಲಿಷ್ಟಿಯರು ದೇಶದೊಳಗೆ ನುಗ್ಗಿ, ರೆಫಾಯೀಮ್ ತಗ್ಗಿನಲ್ಲಿ ಸುಲಿಗೆಮಾಡುತ್ತಿದ್ದರು.


ದಾವೀದನು ಅದುಲ್ಲಾಮ್ ಗಿರಿಯ ಗವಿಯಲ್ಲಿದ್ದಾಗ ಅವನ ಮೂವತ್ತು ಜನ ಪ್ರಸಿದ್ಧಶೂರರಲ್ಲಿ ಮೂವರು ಅವನ ಬಳಿಗೆ ಬಂದರು. ಫಿಲಿಷ್ಟಿಯರು ದಂಡೆತ್ತಿ ಬಂದು ರೆಫಾಯೀಮ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡಿರುವುದನ್ನು ಕಂಡರು.


ದೇಶವು ಎಲ್ಲಾ ಕಡೆಗಳಲ್ಲಿ ವಿಸ್ತಾರವಾಗಿದ್ದು ಸುಖ ಸಮಾಧಾನಗಳಿಂದ ಕೂಡಿತ್ತು. ಅಲ್ಲಿ ಮೊದಲಿನಿಂದಲೂ ವಾಸವಾಗಿದ್ದವರು ಹಾಮ್ಯರೇ.


ಮೂವತ್ತು ಮಂದಿ ಪ್ರಸಿದ್ಧ ಶೂರರಲ್ಲಿ ದಾವೀದನು ಅದುಲ್ಲಾಮ್ ಗವಿಯಲ್ಲಿದ್ದಾಗ ಸುಗ್ಗಿಕಾಲದಲ್ಲಿ ಅವನ ಬಳಿಗೆ ಮೂವರು ಬಂದರು. ಫಿಲಿಷ್ಟಿಯರು ದಂಡೆತ್ತಿ ಬಂದು ರೆಫಾಯೀಮ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡಾಗ,


ಫಿಲಿಷ್ಟಿಯರು ಇನ್ನೊಮ್ಮೆ ಹೊರಟು ಬಂದು ರೆಫಾಯೀಮ್ ತಗ್ಗಿನಲ್ಲಿ ಇಳಿದುಕೊಂಡರು.


ಫಿಲಿಷ್ಟಿಯರು ದೇಶದೊಳಗೆ ನುಗ್ಗಿ ರೆಫಾಯೀಮ್ ತಗ್ಗಿಗೆ ಬಂದು ಅಲ್ಲಿ ಪಾಳೆಯಮಾಡಿಕೊಂಡಿದ್ದರು.


ಗಿಲ್ಯಾದಿನಲ್ಲಿ ಅರ್ಧ ಭಾಗವು ಓಗನ ರಾಜಧಾನಿಯಾಗಿದ್ದ, ಬಾಷಾನಿನ ಅಷ್ಟರೋತ್ ಹಾಗೂ ಎದ್ರೈ ಎಂಬ ಪಟ್ಟಣಗಳೂ ಮನಸ್ಸೆಯ ಮಗನಾದ ಮಾಕೀರನ ಗೋತ್ರದ ಅರ್ಧ ಜನರಿಗೆ ಸಿಕ್ಕಿದವು.


ಕಿರ್ಯಾತಯಿಮ್ ಸಿಬ್ಮಾ ಎಂಬ ಹೆಷ್ಬೋನಿನ ಉಪಗ್ರಾಮಗಳು, ಕಣಿವೆಯಲ್ಲಿರುವ ಬೆಟ್ಟದ ಮೇಲಿನ ಚೆರೆತ್ ಶಹರ್,


ಅಷ್ಟರೋತ್ ಎದ್ರೈ ಎಂಬ ಊರುಗಳಲ್ಲಿ ಆಳುತ್ತಿದ್ದ ರೆಫಾಯರ ವಂಶಸ್ಥನಾದ ಓಗನ ರಾಜ್ಯವಾಗಿದ್ದ ಸಲ್ಕಾ ಪಟ್ಟಣದ ವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳೂ. ಮೋಶೆ ಅವರನ್ನು ಗೆದ್ದು ಅವರ ದೇಶಗಳನ್ನು ಸ್ವಾಧೀನಮಾಡಿಕೊಂಡಿದ್ದನು.


ಅಷ್ಟರೋತ್ ಹಾಗೂ ಎದ್ರೈ ಎಂಬ ಊರುಗಳಲ್ಲಿ ವಾಸವಾಗಿದ್ದ ರೆಫಾಯರ ವಂಶಸ್ಥರು ಬಾಷಾನಿನ ಅರಸನೂ ಆದ ಓಗನು ಸಂಹರಿಸಲ್ಪಟ್ಟವರಲ್ಲಿ ಎರಡನೆಯವನು.


ಅನಂತರ ನಿಮ್ಮಂತೆ ನಿಮ್ಮ ಸಹೋದರರಿಗೂ ಯೆಹೋವನಿಂದ ವಿಶ್ರಾಂತಿ ದೊರಕಿದಾಗ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ಕೊಟ್ಟ ಸ್ವತ್ತಿಗೆ ಹಿಂತಿರುಗಿ ಬರಬಹುದು” ಎಂದು ಆಜ್ಞಾಪಿಸಿದೆನು.


ಬೆರಗ ಮೊದಲಾದ ಈ ಐದು ಅರಸರು ಹನ್ನೆರಡು ವರ್ಷ ಕೆದೊರ್ಲಗೋಮರನಿಗೆ ಅಧೀನರಾಗಿದ್ದು ಹದಿಮೂರನೆಯ ವರ್ಷದಲ್ಲಿ ತಿರುಗಿ ಬಿದ್ದರು.


ರೂಬೇನ್ಯರ ಮಕ್ಕಳು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್ ಊರುಗಳನ್ನು ಹೊಸದಾಗಿ ಕಟ್ಟಿಸಿದರು.


ಗಿಲ್ಯಾದಿನ ಮಿಕ್ಕ ಭಾಗವನ್ನೂ ಓಗನ ರಾಜ್ಯವಾಗಿದ್ದ ಅರ್ಗೋಬ್ ಎನಿಸಿಕೊಳ್ಳುವ ಸಮಸ್ತ ಬಾಷಾನ್ ದೇಶವನ್ನೂ ಮನಸ್ಸೆ ಕುಲದ ಅರ್ಧ ಜನರಿಗೆ ಕೊಟ್ಟೆನು.


ಹೆಷ್ಬೋನಿನ ಅರಸನಾದ ಸೀಹೋನ್, ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸನಾದ ಓಗ್ ಎಂಬ ಈ ಇಬ್ಬರು ಅಮೋರಿಯರ ಅರಸರಿಗೆ ಯೆಹೋವನು ಮಾಡಿದ್ದೆಲ್ಲವನ್ನೂ ಕೇಳಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು