Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಟಾಟಿಗೆ ಬಂದು ಅಮಾಲೇಕ್ಯರ ಸಮಸ್ತ ನಾಡನ್ನೂ ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಗೆದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅನಂತರ ಎನ್ಮಿಷ್ಪಾಟ್ ಎನ್ನಲ್ಪಟ್ಟ ಕಾದೇಶ್‍ಗೆ ಹಿಂದಿರುಗಿ ಬಂದು ಅಮಾಲೇಕ್ಯರ ಸಮಸ್ತ ನಾಡನ್ನು ಮತ್ತು ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನು ಜಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಪಾಟಿಗೆ ಬಂದು ಅಮಾಲೇಕ್ಯರ ಸಮಸ್ತದೇಶವನ್ನೂ ಹಚಚೋನ್‍ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಜಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಬಳಿಕ ರಾಜ ಕೆದೊರ್ಲಗೋಮರನು ಉತ್ತರದ ಕಡೆಗೆ ತಿರುಗಿ ಕಾದೇಶ್ ಎನ್ನುವ ಎನ್ಮಿಷ್ಪಾಟಿಗೆ ಬಂದು ಎಲ್ಲಾ ಅಮಾಲೇಕ್ಯರನ್ನು ಸೋಲಿಸಿದನು. ಇದಲ್ಲದೆ ಅವನು ಹಚಚೋನ್‌ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನು ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಹಿಂದಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು, ಅಮಾಲೇಕ್ಯರ ಎಲ್ಲಾ ಬಯಲನ್ನು ಹಜಜೋನ್ ತಾಮಾರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಜಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:7
19 ತಿಳಿವುಗಳ ಹೋಲಿಕೆ  

ದೂತರು ಬಂದು ಯೆಹೋಷಾಫಾಟನಿಗೆ, “ಮಹಾಸಮೂಹವು ನಿನಗೆ ವಿರುದ್ಧವಾಗಿ ಲವಣ ಸಮುದ್ರದ ಆಚೆಯಲ್ಲಿರುವ ಅರಾಮ್ ಪ್ರಾಂತ್ಯದ ಕಡೆಯಿಂದ ಬಂದು ಈಗ ‘ಏಂಗೆದಿ’ ಎನಿಸಿಕೊಳ್ಳುವ ಹಚಚೋನ್ ತಾಮಾರಿನಲ್ಲಿ ಬಂದು ತಂಗಿದ್ದಾರೆ” ಎಂದು ತಿಳಿಸಿದರು.


ಅಬ್ರಹಾಮನು ಅಲ್ಲಿಂದ ಕಾನಾನ್ ದೇಶದ ದಕ್ಷಿಣ ಸೀಮೆಗೆ ಪ್ರಯಾಣ ಮಾಡುತ್ತಾ ಕಾದೇಶಿಗೂ ಶೂರಿಗೂ ನಡುವೆ ವಾಸ ಮಾಡಿ ಕೆಲವು ಕಾಲ ಗೆರಾರಿನಲ್ಲೂ ವಾಸಮಾಡಿದನು.


ಈ ಸಂಗತಿಯಿಂದ ಅಲ್ಲಿರುವ ಬಾವಿಗೆ “ಬೆರ್ ಲಹೈರೋಯಿ” ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ.


ನಿಬ್ಷಾನ್, ಉಪ್ಪಿನ ಪಟ್ಟಣವು, ಏಂಗೆದೀ ಎಂಬ ಆರು ಪಟ್ಟಣಗಳು, ಅವುಗಳ ಗ್ರಾಮಗಳು.


ಆ ಮೇಲೆ ನೀವು ಕಾದೇಶಿನಲ್ಲಿ ಬಹುಕಾಲ ವಾಸವಾಗಿದ್ದಿರಿ ಎಂದು ಹೇಳಿದನು.


ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಅಮೋರಿಯರ ಬೆಟ್ಟದ ಸೀಮೆಯ ಮಾರ್ಗವನ್ನು ಹಿಡಿದು ನೀವು ನೋಡಿದ ಆ ಘೋರವಾದ ಮಹಾ ಅರಣ್ಯದಲ್ಲಿ ನಡೆದು ಕಾದೇಶ್‌ಬರ್ನೇಯಕ್ಕೆ ಸೇರಿದೆವು.


ತರುವಾಯ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ, “ಅಮಾಲೇಕ್ಯರು ಜನಾಂಗಗಳಲ್ಲಿ ಪ್ರಮುಖರಲ್ಲವೇ, ಆದರೂ ನಾಶನವೇ ಅವರ ಗತಿ.”


ಮೊದಲನೆಯ ತಿಂಗಳಿನಲ್ಲಿ ಇಸ್ರಾಯೇಲರ ಸರ್ವಸಮೂಹದವರು “ಚಿನ್” ಎಂಬ ಮರುಭೂಮಿಗೆ ಬಂದು, ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ತೀರಿಹೋದಳು. ಆಕೆಯ ಶವವನ್ನು ಅಲ್ಲಿಯೇ ಸಮಾಧಿಮಾಡಿದರು.


ಆಗ ಆ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಮತ್ತು ಕಾನಾನ್ಯರೂ ಇಳಿದು ಬಂದು ಇಸ್ರಾಯೇಲರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೂ ಬೆನ್ನಟ್ಟಿ ಸಂಹರಿಸಿದರು.


ಅಲ್ಲಿ ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿ ಇರುವುದರಿಂದ ನೀವು ಅವರ ಕತ್ತಿಯಿಂದ ಸತ್ತುಹೋಗುವಿರಿ. ನೀವು ಯೆಹೋವನ ಮಾತನ್ನು ಅನುಸರಿಸದೆ ತಿರುಗಿಬಿದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಹೇಳಿದನು.


ಆ ಮೇಲೆ ಪಾರಾನ್ ಅರಣ್ಯದಲ್ಲಿದ್ದ ಮೋಶೆ, ಆರೋನರು ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಕಾದೇಶಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ದೇಶದ ಹಣ್ಣುಗಳನ್ನು ತೋರಿಸಿದರು.


ಕೋರಹ, ಗತಾಮ್, ಅಮಾಲೇಕ್, ಇವರೇ, ಈ ಕುಲಪತಿಗಳು ಎದೋಮ್ಯರ ದೇಶದಲ್ಲಿದ್ದ ಎಲೀಫಜನಿಂದ ಬಂದವರು. ಇವರು ಆದಾಳ ಮೊಮ್ಮಕ್ಕಳು.


ತಿಮ್ನ ಎಂಬವಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿಯಾಗಿದ್ದು ಆಕೆಯು ಅವನಿಗೆ ಅಮಾಲೇಕನನ್ನು ಹೆತ್ತಳು. ಇವರೇ ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಕ್ಕಳು.


ಆಗ ಆ ಸಮುದ್ರದ ತೀರದಲ್ಲಿ ಬೆಸ್ತರು ನಿಂತಿರುವರು; ಏನ್ ಗೆದಿಯಿಂದ ಏನ್ ಎಗ್ಲಯಿಮಿನವರೆಗೆ ದಡವೆಲ್ಲಾ ಬಲೆ ಹಾಸುವ ಸ್ಥಳವಾಗುವುದು; ಬಗೆಬಗೆಯ ಮೀನುಗಳು ಮಹಾಸಾಗರದ ಮೀನುಗಳಂತೆ ಅವರಿಗೆ ರಾಶಿ ರಾಶಿಯಾಗಿ ಸಿಕ್ಕುವವು.


ಗಾದನ್ ಮೇರೆಯು ದಕ್ಷಿಣದ ಕಡೆಯಲ್ಲಿ, ದಕ್ಷಿಣದ ಮೇರೆಯು ತಾಮಾರಿನಿಂದ ಹೊರಟು ಮೇರೀಬತ್ ಕಾದೇಶಿನ ಹಳ್ಳವನ್ನು ದಾಟಿ, (ಐಗುಪ್ತದ ಮುಂದಣ) ನದಿಯ ಮಾರ್ಗವಾಗಿ ಮಹಾ ಸಮುದ್ರಕ್ಕೆ ಸೇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು