Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 15:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರನ್ನು ದಾಸರನ್ನಾಗಿ ಮಾಡಿಸಿಕೊಂಡ ಜನಾಂಗವನ್ನು ನಾನು ದಂಡಿಸಿದ ನಂತರ ಅವರು ಬಹಳ ಸಂಪತ್ತುಳ್ಳವರಾಗಿ ಆ ದೇಶದಿಂದ ಬಿಡುಗಡೆಯಾಗಿ ಹೊರಟು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದರೆ ಅವರನ್ನು ಗುಲಾಮರನ್ನಾಗಿಸಿಕೊಳ್ಳುವ ರಾಷ್ಟ್ರವನ್ನು ನಾನು ದಂಡಿಸುವೆನು. ಬಳಿಕ ಬಿಡುಗಡೆ ಹೊಂದಿ ಅಧಿಕ ಆಸ್ತಿವಂತರಾಗಿ ಹಿಂತಿರುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವರಿಂದ ಬಿಟ್ಟೀಕೆಲಸ ಮಾಡಿಸಿಕೊಂಡ ಜನಾಂಗವನ್ನು ನಾನು ಶಿಕ್ಷಿಸಿದ ನಂತರ ಅವರು ಬಹಳ ಆಸ್ತಿವಂತರಾಗಿ ಆ ದೇಶದಿಂದ ಬಿಡುಗಡೆಯಾಗಿ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ನಾನೂರು ವರ್ಷಗಳಾದ ಮೇಲೆ ಅವರ ಮೇಲೆ ದೊರೆತನ ಮಾಡಿದ ಆ ದೇಶವನ್ನು ನಾನು ದಂಡಿಸುವೆನು; ನಿನ್ನ ಜನರು ಆ ದೇಶವನ್ನು ಬಿಟ್ಟು ಹೊರಡುವರು. ನಿನ್ನ ಜನರು ಅದನ್ನು ಬಿಡುವಾಗ ತಮ್ಮೊಡನೆ ಸಂಪತ್ತುಗಳನ್ನು ತೆಗೆದುಕೊಂಡು ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಅವರು ಗುಲಾಮರಾಗಿ ಸೇವೆ ಸಲ್ಲಿಸುತ್ತಿದ್ದ ದೇಶಕ್ಕೆ ನಾನು ನ್ಯಾಯತೀರಿಸುವೆನು. ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 15:14
24 ತಿಳಿವುಗಳ ಹೋಲಿಕೆ  

ಐಗುಪ್ತಕ್ಕೆ ಬಂದ ಯಾಕೋಬನ ವಂಶದವರಾದ ನಿಮ್ಮ ಹಿರಿಯರು ಯೆಹೋವನಿಗೆ ಮೊರೆಯಿಟ್ಟಾಗ, ಆತನು ಮೋಶೆ ಆರೋನರ ಮುಖಾಂತರ ಅವರನ್ನು ಐಗುಪ್ತದಿಂದ ಬಿಡಿಸಿ ಈ ದೇಶದಲ್ಲಿ ನೆಲೆಗೊಳಿಸಿದನು.


ನಿಜವಾಗಿ ಯೆಹೋವನು ತನ್ನ ಪ್ರಜೆಯ ನ್ಯಾಯವನ್ನು ಸ್ಥಾಪಿಸುವನು, ತನ್ನ ಸೇವಕರನ್ನು ಕನಿಕರಿಸುವನು.


ನಾವು ದಾಸತ್ವದಲ್ಲಿದ್ದ ಐಗುಪ್ತದಿಂದ ನಮ್ಮನ್ನು ನಮ್ಮ ಪೂರ್ವಿಕರನ್ನೂ ಹೊರತಂದು ನಮ್ಮೆದುರಿನಲ್ಲಿಯೇ ಮಹತ್ಕಾರ್ಯಗಳನ್ನು ನಡಿಸಿ ನಮ್ಮ ಎಲ್ಲಾ ಪ್ರಯಾಣಗಳಲ್ಲಿಯೂ, ನಾವೂ ದಾಟಿ ಬಂದ ಅನ್ಯಜನಾಂಗಗಳ ಮಧ್ಯದಲ್ಲಿಯೂ ನಮ್ಮನ್ನು ಕಾಪಾಡಿದವನು ನಮ್ಮ ದೇವರಾದ ಯೆಹೋವನಲ್ಲವೇ.


ಆತನು ಐಗುಪ್ತ್ಯರನ್ನೂ, ಫರೋಹನನ್ನೂ ಮತ್ತು ಅವನ ಮನೆಯವರನ್ನೂ ಬಾಧಕವಾದ ದೊಡ್ಡ ಮಹತ್ಕಾರ್ಯಗಳಿಂದಲೂ, ಉತ್ಪಾತಗಳಿಂದಲೂ ನಮ್ಮ ಕಣ್ಣೆದುರಿನಲ್ಲಿ ಶಿಕ್ಷಿಸಿ,


ನಿಮ್ಮನ್ನಾದರೋ ಯೆಹೋವನು ತನಗೆ ಸ್ವಂತ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತು.


ಐಗುಪ್ತವೇ, ಆತನು ನಿನ್ನ ಮಧ್ಯದಲ್ಲಿ ಫರೋಹನಿಗೂ, ಅವನ ಸೇವಕರಿಗೂ ವಿರುದ್ಧವಾಗಿ ಅದ್ಭುತಗಳನ್ನು, ಮಹತ್ಕಾರ್ಯಗಳನ್ನು ನಡೆಸಿದನು.


ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.


ಆದುದರಿಂದ ಈಗ ಬಾ, ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡುವುದಕ್ಕೆ ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ” ಅಂದನು.


ಹೀಗೆ ಆತನು ತನ್ನ ಪರಿಶುದ್ಧ ವಚನವನ್ನೂ, ತನ್ನ ಸೇವಕನಾದ ಅಬ್ರಹಾಮನನ್ನೂ ನೆನಪುಮಾಡಿಕೊಂಡು


ಇಸ್ರಾಯೇಲನು ಯೋಸೇಫನಿಗೆ, “ನನಗೆ ಮರಣವು ಸಮೀಪಿಸಿದೆ, ಆದರೆ ದೇವರು ನಿಮ್ಮೊಂದಿಗಿದ್ದು, ನಿಮ್ಮನ್ನು ಪೂರ್ವಿಕರ ದೇಶಕ್ಕೆ ಪುನಃ ಬರಮಾಡುವನು.


ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, “ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು” ಎಂದು ತಿಳಿದುಕೊಳ್ಳಿರಿ.


ಮಧ್ಯರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಐಗುಪ್ತ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಸಂಹಾರ ಮಾಡಿದನು. ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರಮಾಡಿದನು.


ಮತ್ತು ‘ನಿನ್ನ ಸಂತಾನದವರು ದಾಸರಾಗಿ ಸೇವೆಸಲ್ಲಿಸುವ ಅನ್ಯಜನರಿಗೆ ನಾನೇ ನ್ಯಾಯತೀರಿಸುವೆನು. ಆ ಮೇಲೆ ಅವರು ಹೊರಟುಬಂದು ಈ ಸ್ಥಳದಲ್ಲಿ ನನ್ನನ್ನು ಆರಾಧಿಸುವರು’ ಎಂಬುದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು