Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 15:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೊತ್ತು ಮುಳುಗಿ ಕಾರ್ಗತ್ತಲಾದಾಗ, ಇಗೋ, ಹೊಗೆ ಹಾಯುವ ಒಲೆಯೂ ಉರಿಯುವ ದೀಪವೂ ಕಾಣಿಸಿ ಆ ತುಂಡುಗಳ ಮಧ್ಯದಲ್ಲಿ ಹಾದು ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹೊತ್ತು ಮುಳುಗಿ ಕಾರ್ಗತ್ತಲಾದಾಗ ಇಗೋ, ಹೊಗೆಯಾಡುವ ಒಲೆಯೊಂದು ಹಾಗು ಉರಿಯುವ ದೀವಿಟಿಗೆಯೊಂದು ಕಾಣಿಸಿಕೊಂಡು ಆ ತುಂಡುಗಳ ನಡುವೆ ಹಾದುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹೊತ್ತು ಮುಣುಗಿ ಕಾರ್ಗತ್ತಲಾದಾಗ ಇಗೋ ಹೊಗೆಹಾಯುವ ಒಲೆಯೂ ಉರಿಯುವ ದೀವಟಿಗೆಯೂ ಕಾಣಿಸಿ ಆ ತುಂಡುಗಳ ನಡುವೆ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸೂರ್ಯನು ಮುಳುಗಿದ ಮೇಲೆ ತುಂಬ ಕತ್ತಲಾಯಿತು. ಕಡಿದುಹಾಕಿದ್ದ ಪ್ರತಿಯೊಂದು ಪ್ರಾಣಿಗಳ ದೇಹದ ಎರಡೆರಡು ಹೋಳುಗಳು ಇನ್ನೂ ನೆಲದ ಮೇಲೆ ಇದ್ದವು. ಆ ಸಮಯದಲ್ಲಿ ಇದ್ದಕ್ಕಿದ್ದಂತೆ ಹೊಗೆ ಮತ್ತು ಬೆಂಕಿಗಳಿಂದ ಕೂಡಿದ ದೀವಿಟಿಗೆಯು ಈ ತುಂಡುಗಳ ನಡುವೆ ಹಾದುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಇದಾದ ಮೇಲೆ ಹೊತ್ತು ಮುಳುಗಿ ಕತ್ತಲಾಗುತ್ತಿರಲು, ಹೊಗೆ ಹಾಯುವ ಒಲೆಯೂ ಉರಿಯುವ ದೀಪವೂ ಆ ತುಂಡುಗಳ ಮಧ್ಯದಲ್ಲಿ ಹಾದು ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 15:17
13 ತಿಳಿವುಗಳ ಹೋಲಿಕೆ  

ಅನಂತರ ಯೆಹೋವನ ದೂತನು ತನ್ನ ಕೈಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ, ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು; ಯೆಹೋವನ ದೂತನು ಅದೃಶ್ಯನಾದನು.


ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನಿಮ್ಮ ಪೂರ್ವಿಕರನ್ನು ಬರಮಾಡಿದಾಗ ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ಈ ವಿಧಿಗಳನ್ನೆಲ್ಲಾ ಕೈಕೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ, ನಾನು ನಿಮ್ಮ ದೇವರಾಗಿರುವೆನು.


ಅಲ್ಲಿ ದಾವೀದನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿ, ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ, ಆಕಾಶದಿಂದ ಯಜ್ಞವೇದಿಯ ಮೇಲೆ ಬೆಂಕಿಯನ್ನು ಸುರಿಸಿ,


ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇಮಿನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ, ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಮೌನವಾಗಿರದೆ ಯೆರೂಸಲೇಮಿನ ಕ್ಷೇಮವನ್ನು ಚಿಂತಿಸುತ್ತಿರುವೆನು.


ಆತನ ಮೂಗಿನಿಂದ ಹೊಗೆಯು ಬಂದಿತು. ಆತನ ಬಾಯಿಂದ ಅಗ್ನಿಜ್ವಾಲೆಯು ಹೊರಟು ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು.


ಏನೆಂದರೆ ಅವನು ಯಜ್ಞವೇದಿಯಿಂದ ಆಕಾಶಕ್ಕೆ ಹೋಗುತ್ತಿರುವ ಅಗ್ನಿಜ್ವಾಲೆಯೊಳಗೆ ಮೇಲಕ್ಕೇರಿ ಹೋದನು. ಅವರು ಇದನ್ನು ನೋಡುತ್ತಲೆ ನೆಲದ ಮೇಲೆ ಬೋರಲುಬಿದ್ದರು.


ನಿಮ್ಮನ್ನಾದರೋ ಯೆಹೋವನು ತನಗೆ ಸ್ವಂತ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತು.


ಅವನು ಇವುಗಳನ್ನೆಲ್ಲಾ ತೆಗೆದುಕೊಂಡು ಬಂದು ಮೃಗಗಳನ್ನು ಎರಡಾಗಿ ಸೀಳಿ, ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು; ಪಕ್ಷಿಗಳನ್ನು ಮಾತ್ರ ಸೀಳಲಿಲ್ಲ.


ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದನು. ಆದುದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.


ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಮಾಂಸವನ್ನೂ, ಕಟ್ಟಿಗೆ, ಕಲ್ಲು ಮಣ್ಣುಗಳನ್ನೂ ದಹಿಸಿಬಿಟ್ಟು ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.


ಆ ಗುಡುಗು, ಮಿಂಚು, ತುತ್ತೂರಿಯ ಧ್ವನಿ, ಹಾಗೂ ಬೆಟ್ಟದಿಂದ ಹೊರಬರುತ್ತಿದ್ದ ಹೊಗೆಯನ್ನು ಜನರೆಲ್ಲರೂ ನೋಡಿ, ನಡುಗುತ್ತಾ ದೂರದಲ್ಲಿ ನಿಂತುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು