Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 15:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅಮೋರಿಯರೂ, ಕಾನಾನ್ಯರೂ, ಗಿರ್ಗಾಷಿಯರೂ, ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ,” ಎಂದು ವಾಗ್ದಾನ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಮೋರಿಯರು, ಕಾನಾನ್ಯರು, ಗಿರ್ಗಾಷಿಯರು ಹಾಗು ಯೆಬೂಸಿಯರು ವಾಸವಾಗಿರುವ ಪ್ರಾಂತಗಳಿಂದ ಕೂಡಿರುವ ಈ ನಾಡನ್ನು ಕೊಡುವೆನು,” ಎಂದು ವಾಗ್ದಾನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ಕೊಡುವೆನೆಂದು ವಾಗ್ದಾನ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅಮೋರಿಯರ, ಕಾನಾನ್ಯರ, ಗಿರ್ಗಾಷಿಯರ ಮತ್ತು ಯೆಬೂಸಿಯರ ನಾಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 15:21
17 ತಿಳಿವುಗಳ ಹೋಲಿಕೆ  

ಆಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಬಂದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು. ಅವರು ಮಹಾಕ್ರೂರಿಗಳಾಗಿದ್ದುದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡುತ್ತಿರಲಿಲ್ಲ.


ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಅಧಿಕ ಸಂಖ್ಯೆಯಲ್ಲಿಯೂ ಮತ್ತು ಅಧಿಕ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವನು.


ನಾನು ಈ ದಿನ ನಿಮಗೆ ಆಜ್ಞಾಪಿಸುವುದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುವೆನು.


ನಾನು, ನಿನಗಿಂತ ಮುಂದಾಗಿ ಒಬ್ಬ ದೂತನನ್ನು ಕಳುಹಿಸಿ ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ಹೊರದೂಡುವೆನು.


ಅವರಿಬ್ಬರ ಆಸ್ತಿ ಬಹಳವಾಗಿದ್ದುದರಿಂದ ಅವರು ಒಟ್ಟಿಗೆ ವಾಸವಾಗಿರುವುದು ಅಸಾಧ್ಯವಾಯಿತು. ಇದರಿಂದ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಗುತ್ತಿತ್ತು. ಇದಲ್ಲದೆ ಕಾನಾನ್ಯರೂ ಪೆರಿಜೀಯರೂ ಆ ಕಾಲದಲ್ಲಿ ದೇಶದೊಳಗೆ ವಾಸವಾಗಿದ್ದರು.


ಹಿತ್ತಿಯರೂ, ಪೆರಿಜೀಯರೂ, ರೆಫಾಯರೂ,


ಅಬ್ರಾಮನ ಹೆಂಡತಿಯಾದ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಐಗುಪ್ತ ದೇಶದವಳಾದ ಹಾಗರಳೆಂಬ ದಾಸಿಯಿದ್ದಳು.


ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


ಐಗುಪ್ತ ದೇಶದಲ್ಲಿ ನಿಮಗುಂಟಾದ ದುರವಸ್ಥೆಯಿಂದ ನಿಮ್ಮನ್ನು ಬಿಡಿಸಿ, ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಹಿವ್ವಿಯರೂ, ಯೆಬೂಸಿಯರೂ, ವಾಸವಾಗಿರುವ ದೇಶಕ್ಕೆ ಬರಮಾಡಬೇಕೆಂದು ನಿರ್ಣಯಿಸಿದ್ದೇನೆ” ಎಂಬುದಾಗಿ ಅವರಿಗೆ ಹೇಳು.


ದಕ್ಷಿಣ ಸೀಮೆಯಲ್ಲಿ ಅಮಾಲೇಕ್ಯರು, ಬೆಟ್ಟದ ಸೀಮೆಯಲ್ಲಿ ಹಿತ್ತಿಯರು, ಯೆಬೂಸಿಯರು, ಅಮೋರಿಯರು ಸಮುದ್ರತೀರದಲ್ಲಿ ಮತ್ತು ಯೊರ್ದನ್ ಹೊಳೆಯ ಬಳಿಯಲ್ಲಿ ಕಾನಾನ್ಯರೂ ವಾಸವಾಗಿದ್ದಾರೆ” ಎಂದು ತಿಳಿಸಿದರು.


ಹೀಗೆ ಇಸ್ರಾಯೇಲರು ಅಮ್ಮೋರಿಯರ ದೇಶದಲ್ಲಿ ವಾಸಮಾಡುವಂತಾಯಿತು.


ಅದಲ್ಲದೆ ಮೋಶೆ ಗೂಢಚಾರರ ಮೂಲಕ ಯಗ್ಜೇರನ್ನು ಪರೀಕ್ಷಿಸಿದ ಮೇಲೆ ಇಸ್ರಾಯೇಲರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.


ನಿಮ್ಮ ದೇವರಾದ ಯೆಹೋವನು ನಿಮಗೆ ಅಪ್ಪಣೆಕೊಟ್ಟಂತೆ ಇವರನ್ನು ಅಂದರೆ ಹಿತ್ತಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು, ಇವರೆಲ್ಲರನ್ನೂ ನಾಶಮಾಡಿಬಿಡಬೇಕು.


“ಜೀವಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿ ಇದ್ದಾನೆಂದು ಆತನು ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು, ಯೆಬೂಸಿಯರನ್ನು ನಿಮ್ಮ ಮುಂದೆ ಓಡಿಸಿಬಿಡುವನೆಂದು ನಿಮಗೆ ಗೊತ್ತಾಗುವುದು.


ಇದಲ್ಲದೆ ಯೆಬೂಸಿಯರೂ, ಅಮೋರಿಯರೂ, ಗಿರ್ಗಾಷಿಯರೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು