Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 15:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನ ವಾಕ್ಯವು ಅವನ ಸಂಗಡ ಮಾತನಾಡಿ, “ಈ ಮನುಷ್ಯನು ನಿನಗೆ ಬಾಧ್ಯಸ್ಥನಾಗುವುದಿಲ್ಲ; ಆದರೆ ನಿನ್ನ ಹೊಟ್ಟೆಯಲ್ಲಿ ಹುಟ್ಟುವವನೇ ನಿನಗೆ ಬಾಧ್ಯಸ್ಥನಾಗುವನು” ಎಂದು ಹೇಳಿ ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮತ್ತೆ ಸ್ವಾಮಿಯ ವಾಣಿ - “ಇಲ್ಲ, ಅವನು ಉತ್ತರಾಧಿಕಾರಿಯಾಗುವುದಿಲ್ಲ, ನಿನ್ನಿಂದ ಹುಟ್ಟಿದವನೇ ನಿನಗೆ ಉತ್ತರಾಧಿಕಾರಿ ಆಗುತ್ತಾನೆ” ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇವನು ನಿನಗೆ ಬಾಧ್ಯಸ್ಥನಾಗುವದಿಲ್ಲ; ನಿನ್ನ ಹೊಟ್ಟೆಯಲ್ಲೇ ಹುಟ್ಟುವವನು ನಿನಗೆ ಬಾಧ್ಯಸ್ಥನಾಗುವನು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಯೆಹೋವನು ಅಬ್ರಾಮನಿಗೆ, “ನಿನ್ನ ಆಸ್ತಿಯನ್ನೆಲ್ಲ ಪಡೆದುಕೊಳ್ಳುವವನು ನಿನ್ನ ಸೇವಕನಲ್ಲ. ನೀನೇ ಮಗನನ್ನು ಪಡೆಯುವೆ; ನಿನ್ನ ಮಗನೇ ನಿನ್ನ ಆಸ್ತಿಯನ್ನೆಲ್ಲಾ ಪಡೆಯುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಯೆಹೋವ ದೇವರ ವಾಕ್ಯವು, “ಈ ಮನುಷ್ಯನು ನಿನ್ನ ಉತ್ತರಾಧಿಕಾರಿಯಾಗುವುದಿಲ್ಲ. ನಿನ್ನಿಂದಲೇ ಹುಟ್ಟಿಬರುವ ನಿನ್ನ ಮಗನು ನಿನ್ನ ವಾರಸುದಾರನಾಗುವನು,” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 15:4
8 ತಿಳಿವುಗಳ ಹೋಲಿಕೆ  

ನಾನು ಆಕೆಯನ್ನು ಆಶೀರ್ವದಿಸಿ, ಆಕೆಯಿಂದ ನಿನಗೆ ಒಬ್ಬ ಮಗನನ್ನು ಕೊಡುವೆನು. ನಾನು ಆಕೆಯನ್ನು ಆಶೀರ್ವದಿಸಿದ್ದರಿಂದ ಆಕೆಯಿಂದ ಅನೇಕ ಜನಾಂಗಗಳೂ ಅರಸರೂ ಉತ್ಪತ್ತಿಯಾಗುವರು” ಎಂದು ಹೇಳಿದನು.


ಸಹೋದರರೇ, ನಾವು ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳಾಗಿದ್ದೇವೆ.


ನಿನ್ನ ಆಯುಷ್ಕಾಲವು ಮುಗಿದು, ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನಿಂದ ಹುಟ್ಟುವ ಮಕ್ಕಳಲ್ಲಿ ಒಬ್ಬನನ್ನು ಎಬ್ಬಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು.


ಆದರೆ ದೇವರು ಅವನಿಗೆ, “ಮಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು;


ನನಗೆ ಪ್ರಾಣ ಪ್ರಿಯನಂತಿರುವ ಅವನನ್ನು ನಿನ್ನ ಬಳಿಗೆ ಕಳುಹಿಸಿ ಕೊಡುತ್ತಿದ್ದೇನೆ.


ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, “ನೋಡಿರಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನನು ಹೀಗೆ ಮಾಡುವುದು ಯಾವ ದೊಡ್ಡ ಮಾತು? ಬಿಡಿರಿ, ಅವನು ಶಪಿಸಲಿ. ಹೀಗೆ ಮಾಡಬೇಕೆಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ್ದಾನೆ.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು