Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 15:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಂತರ ಆತನು ಅಬ್ರಾಮನಿಗೆ, “ಈ ದೇಶವನ್ನು ನಿನಗೆ ಬಾಧ್ಯಸ್ಥವಾಗಿ ಕೊಡುವುದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನು ನಾನೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸವೇಶ್ವರ ಬಳಿಕ ಅಬ್ರಾಮನಿಗೆ ಇಂತೆಂದರು: “ಈ ನಾಡನ್ನು ನಿನಗೆ ಸೊತ್ತಾಗಿ ಕೊಡಬೇಕೆಂದು ಬಾಬಿಲೋನಿನಲ್ಲಿರುವ ಊರ್ ಪಟ್ಟಣದಿಂದ ನಿನ್ನನ್ನು ಬರಮಾಡಿದ ಸರ್ವೇಶ್ವರ ನಾನೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಮೇಲೆ ಆತನು ಅವನಿಗೆ - ಈ ದೇಶದ ಬಾಧ್ಯತೆಯನ್ನು ನಿನಗೆ ಕೊಡುವದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನೇ ನಾನು ಎಂದು ಹೇಳಲು ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆತನು ಅಬ್ರಾಮನಿಗೆ, “ಯೆಹೋವನಾದ ನಾನು ನಿನ್ನನ್ನು ಕಲ್ದೀಯರ ಊರ್ ಪಟ್ಟಣದಿಂದ ಬರಮಾಡಿದೆನು. ನಿನಗೆ ಈ ದೇಶವನ್ನು ಕೊಡಬೇಕೆಂತಲೂ ನೀನು ಈ ದೇಶವನ್ನು ಹೊಂದಿಕೊಳ್ಳಬೇಕೆಂತಲೂ ನಾನು ನಿನ್ನನ್ನು ಬರಮಾಡಿದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರು ಅವನಿಗೆ, “ಈ ದೇಶವನ್ನು ಸೊತ್ತಾಗಿ ನಿನಗೆ ಕೊಡಲು, ಕಸ್ದೀಯರ ಊರ್ ಎಂಬ ಪ್ರದೇಶದಿಂದ ನಿನ್ನನ್ನು ಹೊರಗೆ ತಂದ ಯೆಹೋವ ದೇವರು ನಾನೇ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 15:7
16 ತಿಳಿವುಗಳ ಹೋಲಿಕೆ  

ಯೆಹೋವನು ಅಬ್ರಾಮನಿಗೆ, “ನೀನು, ನಿನ್ನ ಸ್ವದೇಶವನ್ನೂ, ಬಂಧುಬಳಗವನ್ನೂ, ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟು ಹೋಗು.


ನೀನು ಲೋಕಕ್ಕೆ ಬಾಧ್ಯನಾಗುವಿ ಎಂಬ ವಾಗ್ದಾನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿಗಾಗಲಿ ಧರ್ಮಶಾಸ್ತ್ರದಿಂದ ಆದದ್ದಲ್ಲ; ನಂಬಿಕೆಯಿಂದ ಬರುವ ನೀತಿಯಾಗಿದೆ.


ಆತನು ಅವರಿಗೆ ಪರಜನಾಂಗಗಳ ದೇಶವನ್ನು ಕೊಟ್ಟನು; ಅನ್ಯಜನಾಂಗಗಳ ಕಷ್ಟಾರ್ಜಿತವು ಅವರ ಕೈ ಸೇರಿತು.


ಹೀಗೆ ಆತನು ತನ್ನ ಪರಿಶುದ್ಧ ವಚನವನ್ನೂ, ತನ್ನ ಸೇವಕನಾದ ಅಬ್ರಹಾಮನನ್ನೂ ನೆನಪುಮಾಡಿಕೊಂಡು


ಅವರಲ್ಲಿ ಸ್ವಲ್ಪ ಜನರು ಕಾನಾನ್ ದೇಶದಲ್ಲಿ ಪ್ರವಾಸಿಗಳಾಗಿ ಇರುವಾಗಲೇ,


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ದೇವರು ಅಬ್ರಹಾಮನಿಗೆ ಕೊಟ್ಟಿರುವ ಆಶೀರ್ವಾದವನ್ನು ನಿನಗೂ, ನಿನ್ನ ಸಂತತಿಗೂ ಕೊಡಲಿ, ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಹಾಗೆ, ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಸ್ವತ್ತಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ” ಎಂದನು.


ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, “ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು” ಎಂದು ತಿಳಿದುಕೊಳ್ಳಿರಿ.


ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನಿಮ್ಮ ಸದಾಚಾರವಾಗಲಿ, ನಿಮ್ಮ ಒಳ್ಳೆಯ ಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.


ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಹಾಗು ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಈ ಪ್ರದೇಶವನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಇಸ್ರಾಯೇಲರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನ ಮಾಡಿಕೊಳ್ಳುವರೆಂದೂ ಮಾತುಕೊಡಲಿಲ್ಲವೇ’” ಅಂದನು.


ನಾನು ನಿಮಗೆ ಆ ದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟದರಿಂದ ನೀವು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಬೇಕು.


ಆ ಕಾಲದಲ್ಲಿ ನಾನು ನಿಮಗೆ, “ನಿಮ್ಮ ದೇವರಾದ ಯೆಹೋವನು ಈ ಪ್ರದೇಶವನ್ನೇ ನಿಮಗೆ ಸ್ವತ್ತಾಗಿ ಕೊಟ್ಟಿದ್ದಾನೆ. ಆದರೆ ನಿಮ್ಮ ಸೈನಿಕರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಾಯೇಲರ ಮುಂದೆ ಹೊರಟು ಹೊಳೆ ದಾಟಿ ಹೋಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು