Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಯೆಹೋವನು ಅವನಿಗೆ ದರ್ಶನಕೊಟ್ಟು - ನಾನು ಸರ್ವಶಕ್ತನಾದ ದೇವರು; ನನಗೆ ನಡಕೊಂಡು ದೋಷವಿಲ್ಲದವನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಬ್ರಾಮನಿಗೆ ತೊಂಭತ್ತೊಂಬತ್ತು ವರ್ಷವಾಗಿದ್ದಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾಗಿ, “ನಾನು ಸರ್ವಶಕ್ತನಾದ ದೇವರು. ನನಗೆ ವಿಧೇಯನಾಗಿದ್ದು ನಿರ್ದೋಷಿಯಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಬ್ರಾಮನು ತೊಂಬತ್ತೊಂಬತ್ತು ವರ್ಷದವನಾದಾಗ, ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನೇ ಸರ್ವಶಕ್ತ ದೇವರು. ನೀನು ನನ್ನ ಸನ್ನಿಧಿಯಲ್ಲಿಯೇ ನಡೆಯುತ್ತಾ ದೋಷವಿಲ್ಲದವನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:1
45 ತಿಳಿವುಗಳ ಹೋಲಿಕೆ  

ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ


ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.


ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.


ನೀನು ನನ್ನ ಪ್ರಾಣವನ್ನು ಮರಣದಿಂದ ತಪ್ಪಿಸಿ, ಕಣ್ಣೀರನ್ನು ನಿಲ್ಲಿಸಿ, ನನ್ನ ಪಾದಗಳನ್ನು ಎಡವದಂತೆ ಕಾದಿದ್ದೀ.


ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.


ಹಿಜ್ಕೀಯನು, “ಯೆಹೋವನೇ, ನಾನು ನಂಬಿಗಸ್ತನಾಗಿಯೂ, ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನ್ನು ನೆನಪುಮಾಡಿಕೋ” ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.


ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು” ಎಂದು ಹೇಳಿದನು.


ನೀವು ನಿಮ್ಮ ದೇವರಾದ ಯೆಹೋವನ ಮುಂದೆ ನಿರ್ದೊಷಿಗಳಾಗಿರಬೇಕು.


ಯೇಸು ಅವರನ್ನು ದೃಷ್ಟಿಸಿ ನೋಡಿ “ಇದು ಮನುಷ್ಯರಿಂದ ಅಸಾಧ್ಯ. ಆದರೆ ದೇವರಿಗೆ ಎಲ್ಲವು ಸಾಧ್ಯವೇ” ಅಂದನು.


“ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.


ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನಿನಗೆ ಬಹಳ ಸಂತತಿಯನ್ನು ಕೊಟ್ಟು ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ.


“ಯೆಹೋವನೇ, ದಯವಿಟ್ಟು ನಾನು ನಂಬಿಗಸ್ತನಾಗಿಯೂ ನಿನಗೆ, ಪ್ರಾಮಾಣಿಕನಾಗಿಯೂ ಶ್ರದ್ಧೆಯಿಂದಲೂ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪುಮಾಡಿಕೋ” ಎಂದು ಹೇಳಿ ಹಿಜ್ಕೀಯನು ಬಹಳವಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದನು.


“ನಿನಗೆ ನಂಬಿಗಸ್ತನಾಗಿಯೂ, ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನೀನು ಮಹಾ ಕೃಪೆಯನ್ನು ತೋರಿಸಿದ್ದೀ. ಅವನ ಮೇಲೆ ಬಹಳವಾಗಿ ಕೃಪೆಯಿಟ್ಟು ಈಹೊತ್ತು ಅವನ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿದ್ದರಲ್ಲಿ ಅದನ್ನು ಸಂಪೂರ್ಣಗೊಳಿಸಿರುವೆ.


ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ. ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?


ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು, ನೀನು ಬಹು ಸಂತಾನವುಳ್ಳವನಾಗಿ ಹೆಚ್ಚುವೆ, ನಿನ್ನಿಂದ ಜನಾಂಗವೂ, ಜನಾಂಗಗಳ ಗುಂಪು ಉಂಟಾಗುವುದು. ಅನೇಕ ಜನಾಂಗಗಳ ಅರಸರು ನಿನ್ನಿಂದ ಹುಟ್ಟುವರು.


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.


ಇದರ ದೆಸೆಯಿಂದ ದೇವರ ಮುಂದೆಯೂ, ಮನುಷ್ಯರ ಮುಂದೆಯೂ ನಿರ್ದೋಷವಾದ ಮನಸ್ಸಾಕ್ಷಿಯುಳ್ಳವನಾಗಿರಬೇಕೆಂದು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ.


ನಂತರ ಅವನು ಯೋಸೇಫನನ್ನು, ಆಶೀರ್ವದಿಸಿ, “ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರು ಸೇವಿಸಿದ ದೇವರೇ, ನನ್ನನ್ನು ಚಿಕ್ಕಂದಿನಿಂದ ಈ ದಿನದ ವರೆಗೂ ಪರಾಂಬರಿಸುತ್ತಾ ಬಂದ ದೇವರು,


ಯೆಹೋವನು ಅಬ್ರಾಮನಿಗೆ, “ನೀನು, ನಿನ್ನ ಸ್ವದೇಶವನ್ನೂ, ಬಂಧುಬಳಗವನ್ನೂ, ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟು ಹೋಗು.


ಹನೋಕನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇರುವಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾಗಿ ಕಾಣದೆ ಹೋದನು.


ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ; “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಅಂದನು.


ನಮ್ಮ ದೇವರು ಪರಲೋಕದಲ್ಲಿದ್ದಾನೆ; ಆತನು ತನಗೆ ಬೇಕಾದುದನ್ನೆಲ್ಲಾ ಮಾಡುತ್ತಾನೆ.


ದೇವರ ಅಗಾಧಗಳನ್ನು ಕಂಡುಕೊಳ್ಳಬಲ್ಲೆಯಾ? ಸರ್ವಶಕ್ತನಾದ ದೇವರನ್ನು ಸಂಪೂರ್ಣವಾಗಿ ಗ್ರಹಿಸಿಕೊಳ್ಳಬಹುದೋ?


ಮತ್ತು ಯೆಹೋವನು, ‘ನಿನ್ನ ಸಂತಾನದವರು ನಂಬಿಗಸ್ತರಾಗಿ, ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನನಗೆ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿರುವುದಾದರೆ, ಅವರು ತಪ್ಪದೆ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು’ ಎಂಬುದಾಗಿ ತಾನು ನನಗೆ ಮಾಡಿದ ವಾಗ್ದಾನವನ್ನು ಸ್ಥಿರಪಡಿಸುವನು,


ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ.


ಯೆಹೋವನು ಮೋಶೆಗೆ, “ನನ್ನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ, ಇಲ್ಲವೋ ಈಗ ನೀನು ನೋಡುವಿ” ಎಂದು ಹೇಳಿದನು.


ನಾನು ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ ಸರ್ವಶಕ್ತನಾದ ದೇವರಾಗಿ ಕಾಣಿಸಿಕೊಂಡಿದ್ದೆನು. ಆದರೆ ಯೆಹೋವನೆಂಬ ನನ್ನ ಹೆಸರಿನಲ್ಲಿ ಅವರಿಗೆ ಗೋಚರವಾಗಿರಲಿಲ್ಲ.


ಅಬ್ರಹಾಮನು ಬಿಸಿಲೇರಿದಾಗ ಮಮ್ರೆಯ ಮೋರೆ ತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿರುವಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾದನು.


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.


ಇಸ್ರಾಯೇಲ್ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಮಾರ್ಗದಲ್ಲೇ ನಡೆದುಕೊಳ್ಳುವುದಾದರೆ, ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು’ ಎಂಬುದಾಗಿ ವಾಗ್ದಾನ ಮಾಡಿದಿಯಲ್ಲಾ ಅದನ್ನು ನೆರವೇರಿಸು.


ಹಾಗರಳು ಇಷ್ಮಾಯೇಲನನ್ನು ಹೆತ್ತಾಗ ಅಬ್ರಾಮನು ಎಂಭತ್ತಾರು ವರ್ಷದವನಾಗಿದ್ದನು.


ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ದೇವರ ಅನ್ಯೋನ್ಯತೆಯಲ್ಲಿ ಮುನ್ನೂರು ವರ್ಷ ಬದುಕಿದನು.


ಅವನು ನನಗೆ, “ನಾನು ಆರಾಧನೆ ಮಾಡುತ್ತಾ ಬಂದಿರುವ ನನ್ನ ದೇವರಾದ ಆ ಯೆಹೋವನು ತನ್ನ ದೂತನನ್ನು ನಿನ್ನೊಂದಿಗೆ ಕಳುಹಿಸಿ ನೀನು ನನ್ನ ತಂದೆಯ ಮನೆತನಕ್ಕೆ ಸೇರಿರುವ ಬಂಧುಗಳಲ್ಲಿ ನನ್ನ ಮಗನಿಗೆ ಹೆಣ್ಣು ತೆಗೆದುಕೊಳ್ಳುವಂತೆ ಅನುಕೂಲ ಮಾಡುವನು.


ಅಲ್ಲಿ ಯೆಹೋವನು ಇಸಾಕನಿಗೆ ದರ್ಶನಕೊಟ್ಟು, “ನೀನು ಐಗುಪ್ತ ದೇಶಕ್ಕೆ ಇಳಿದು ಹೋಗಬೇಡ; ನಾನು ಹೇಳುವ ದೇಶದಲ್ಲಿ ನೀನು ವಾಸಮಾಡಬೇಕು.


ಸರ್ವಶಕ್ತನಾದ ದೇವರು ನಿಮ್ಮ ಇನ್ನೊಬ್ಬ ಅಣ್ಣನನ್ನೂ, ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಕೊಡುವಂತೆ ನಿಮ್ಮ ಮೇಲೆ ಕರುಣೆ ತೋರುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕು ಎಂದರೆ ಹಾಗೆಯೇ ಆಗಲಿ” ಎಂದು ಹೇಳಿದನು.


ಆತನು ಅವನಿಗೆ, “ನಾನೇ ದೇವರು, ನಿನ್ನ ತಂದೆಯ ದೇವರು ನಾನೇ; ನೀನು ಗಟ್ಟಾ ಇಳಿದು ಹೆದರದೆ ಐಗುಪ್ತ ದೇಶಕ್ಕೆ ಹೋಗು; ಅಲ್ಲಿ ನಿನ್ನಿಂದ ಮಹಾ ಜನಾಂಗವುಂಟಾಗುವಂತೆ ಮಾಡುವೆನು.


ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ಮಾತಿಗೆ ವಿಧೇಯರಾಗಿರಿ, ಆತನನ್ನು ಹೊಂದಿಕೊಂಡೇ ಇರಿ. ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವುದಕ್ಕೂ ಬಹುಕಾಲ ಇರುವುದಕ್ಕೂ ಆತನೇ ಆಧಾರ” ಎಂದು ಹೇಳಿದನು.


ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.


ಯಾಕೋಬನು, ಯೋಸೇಫನಿಗೆ, “ಸರ್ವಶಕ್ತನಾದ ದೇವರು ಕಾನಾನ್ ದೇಶದ ಲೂಜ್ ಎಂಬಲ್ಲಿ ನನಗೆ ದರ್ಶನ ಕೊಟ್ಟು ಆಶೀರ್ವದಿಸಿದನು.


ದೇವರ ಮಾತುಗಳನ್ನು ಕೇಳುವವನೂ, ಪರಾತ್ಪರನಾದ ದೇವರ ಜ್ಞಾನವನ್ನು ಪಡೆದವನೂ, ಪರವಶವಾಗಿ ಕಣ್ಣುತೆರೆದು, ಸರ್ವಶಕ್ತನ ದರ್ಶನವನ್ನು ಹೊಂದುವವನೂ ಆಗಿರುವ ಪುರುಷನು ನುಡಿದದ್ದು.


ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು, ವಕ್ರಮಾರ್ಗಿಯು ಬೈಲಿಗೆ ಬೀಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು