Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸುನ್ನತಿಮಾಡಿಸಿಕೊಳ್ಳದ ಪುರುಷನಿಗೆ ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದಂತೆ ಆಗುವ ಕಾರಣ ಅವನನ್ನು ಕುಲದಿಂದ ಬಹಿಷ್ಕರಿಸಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸುನ್ನತಿ ಮಾಡಿಸಿಕೊಳ್ಳದ ಗಂಡಸು ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದವನಾದ ಕಾರಣ, ಅವನು ಕುಲದಿಂದ ಬಹಿಷ್ಕೃತನಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸುನ್ನತಿ ಮಾಡಿಸಿಕೊಳ್ಳದ ಗಂಡಸು ನನ್ನ ಒಡಂಬಡಿಕೆಯನ್ನು ಮೀರಿದವನಾದ ಕಾರಣ ಅವನು ಕುಲದಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಸುನ್ನತಿ ಮಾಡಿಸಿಕೊಳ್ಳದವನು ನನ್ನ ಒಡಂಬಡಿಕೆಯನ್ನು ಮೀರಿದ ಕಾರಣ, ಅವನನ್ನು ಜನರೊಳಗಿಂದ ಬಹಿಷ್ಕರಿಸಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:14
24 ತಿಳಿವುಗಳ ಹೋಲಿಕೆ  

ಆ ಏಳು ದಿನಗಳವರೆಗೆ ನಿಮ್ಮ ಮನೆಗಳಲ್ಲಿ ಹುಳಿಹಿಟ್ಟು ಇರಬಾರದು. ಹುಳಿ ಬೆರಸಿದ್ದನ್ನು ಯಾರು ತಿನ್ನುವರೋ ಅವನು ಪರದೇಶದವನಾಗಲಿ, ಸ್ವದೇಶದವನಾಗಲಿ ಇಸ್ರಾಯೇಲ ಸಮೂಹದೊಳಗಿಂದ ತೆಗೆದುಹಾಕಲ್ಪಡಬೇಕು.


ಯಾಕೆಂದರೆ ಕರ್ತನ ದೇಹವೆಂದು ವಿವೇಚಿಸದೇ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವುದರಿಂದ ನ್ಯಾಯತೀರ್ಪಿಗೊಳಗಾಗುವನು.


ಹೀಗಿರುವುದರಿಂದ ಯಾವನಾದರೂ ಅಯೋಗ್ಯವಾಗಿ ಕರ್ತನ ರೊಟ್ಟಿಯನ್ನು ತಿಂದರೆ ಇಲ್ಲವೆ ಆತನ ಪಾನಪಾತ್ರೆಯಲ್ಲಿ ಪಾನ ಮಾಡಿದರೆ ಅವನು ಕರ್ತನ ದೇಹಕ್ಕೂ ಮತ್ತು ಕರ್ತನ ರಕ್ತಕ್ಕೂ ಸಂಬಂಧಿಸಿದಂತೆ ದ್ರೋಹಮಾಡಿದವನಾಗಿರುವನು.


ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.


ನನ್ನ ಮಾತುಗಳನ್ನು ಕೇಳದಿದ್ದ ತಮ್ಮ ಪೂರ್ವಿಕರ ದುಷ್ಕೃತ್ಯಗಳ ಕಡೆಗೆ ತಿರುಗಿಕೊಂಡು, ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸಿದ್ದಾರೆ. ಇಸ್ರಾಯೇಲ್ ವಂಶದವರೂ ಮತ್ತು ಯೆಹೂದ ವಂಶದವರೂ ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ.


ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ಇಲ್ಲವೇ ಇಲ್ಲ; ಶತ್ರುವು ಒಪ್ಪಂದವನ್ನು ಮೀರಿದ್ದಾನೆ, ಪಟ್ಟಣಗಳನ್ನು ತಿರಸ್ಕರಿಸಿದ್ದಾನೆ, ಯಾವ ಮನುಷ್ಯರನ್ನೂ ಗಣನೆಗೆ ತಾರನು.


ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ, ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.


ಆ ದ್ರೋಹಿಯಾದರೋ ತನ್ನೊಡನೆ ಸಮಾಧಾನದಿಂದಿದ್ದವರ ಮೇಲೆ ವಿರುದ್ಧವಾಗಿ ಕೈಯೆತ್ತಿ ತಾನು ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.


ಅದರಲ್ಲಿ ಏನಾದರೂ ತಿಂದವನು ಯೆಹೋವನ ಪವಿತ್ರ ದ್ರವ್ಯವನ್ನು ಹೊಲೆಮಾಡಿದವನಾದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು; ಅವನನ್ನು ಕುಲದಿಂದ ಹೊರಗೆ ಹಾಕಬೇಕು.


ಯಾವನಾದರೂ ಈ ಅಸಹ್ಯವಾದ ಕೆಲಸಗಳಲ್ಲಿ ಒಂದನ್ನಾದರೂ ಮಾಡಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು.


ರಕ್ತಭೋಜನವನ್ನು ಮಾಡಿದವನು ಕುಲದಿಂದ ಬಹಿಷ್ಕಾರಕ್ಕೆ ಒಳಗಾಗುವನು’” ಎಂದು ಹೇಳಿದನು.


ಮನುಷ್ಯರು ಯೆಹೋವನಿಗೆ ಹೋಮಮಾಡುವಂತಹ ಪಶು ಜಾತಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ಕುಲದಿಂದ ಬಹಿಷ್ಕಾರಕ್ಕೆ ಒಳಗಾಗುವನು.


ಸುವಾಸನೆಗೋಸ್ಕರ ಅಂಥದನ್ನು ಮಾಡಿಕೊಳ್ಳುವವನು ತನ್ನ ಕುಲದಿಂದ ಬಹಿಷ್ಕಾರಕ್ಕೆ ಗುರಿಯಾಗುವನು.”


ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ಬಹಿಷ್ಕೃತನಾಗುವನು.”


“‘ಏಳು ದಿನಗಳವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಬಿಡಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿಯನ್ನು ತಿನ್ನುವವನು ಇಸ್ರಾಯೇಲಿನೊಳಗಿಂದ ತೆಗೆದುಹಾಕಲ್ಪಡಬೇಕು.


ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳೆಂದು ಕರೆಯದೆ ‘ಸಾರಾ’ (ರಾಣಿ) ಎಂದು ಕರೆಯಬೇಕು.


ಯಾಕೋಬನ ಮಕ್ಕಳು ಅವರಿಗೆ, “ನಾವು ಈ ಕಾರ್ಯವನ್ನು ಮಾಡಲಾರೆವು. ಸುನ್ನತಿಯಿಲ್ಲದವನಿಗೆ ನಮ್ಮ ತಂಗಿಯನ್ನು ಕೊಡುವುದಕ್ಕಾಗುವುದಿಲ್ಲ, ಹಾಗೆ ಕೊಡುವುದು ನಮಗೆ ಅವಮಾನ.


ಯಾವನಾದರೂ ಆ ದಿನದಲ್ಲಿ ಉಪವಾಸ ಮಾಡದೆಹೋದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು.


ಆದರೆ ಯಾವನಾದರೂ ಶುದ್ಧನಾಗದೆ, ಪ್ರಯಾಣಮಾಡದೆ ಇದ್ದು ಪಸ್ಕಹಬ್ಬವನ್ನು ಆಚರಿಸಲು ತಪ್ಪಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು. ಅವನು ಯೆಹೋವನಿಂದ ನೇಮಿತವಾದ ಯಜ್ಞವನ್ನು ನೇಮಕವಾದ ಕಾಲದಲ್ಲಿ ಸಮರ್ಪಿಸದೆ ಹೋದುದರಿಂದ ತನ್ನ ದೋಷಫಲವನ್ನು ಅನುಭವಿಸಬೇಕು.


‘ಇಸ್ರಾಯೇಲ್ ವಂಶದವರೇ, ನೀವು ನನ್ನ ರೊಟ್ಟಿಯನ್ನೂ, ಕೊಬ್ಬನ್ನೂ, ರಕ್ತವನ್ನೂ ಅರ್ಪಿಸುವಾಗ, ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನರಾದ ಮ್ಲೇಚ್ಛರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ, ನನ್ನ ಮಂದಿರವನ್ನು ಅಪವಿತ್ರಗೊಳಿಸಿ, ನನ್ನ ಒಡಂಬಡಿಕೆಯನ್ನು ಭಂಗಪಡಿಸಿ, ನಿಮ್ಮ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು