Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದಕ್ಕೆ ಆತನು, “ಬರುವ ವರ್ಷ ಇದೇ ವೇಳೆಗೆ ನಾನು ತಪ್ಪದೆ ತಿರುಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು” ಎಂದನು. ಆ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ಸರ್ವೇಶ್ವರ ಸ್ವಾಮಿ, “ಬರುವ ವರ್ಷ ಇದೇ ಕಾಲದಲ್ಲಿ ನಾನು ತಪ್ಪದೆ ಮರಳಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಹೆಂಡತಿ ಸಾರಳಿಗೆ ಮಗನಿರುತ್ತಾನೆ,” ಎಂದರು. ಈ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದಕ್ಕಾತನು - ಬರುವ ವರುಷದ ಇದೇ ಕಾಲದಲ್ಲಿ ನಾನು ತಪ್ಪದೆ ತಿರಿಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು ಅಂದನು. ಆ ಮಾತು ಹಿಂದೆ ಗುಡಾರದ ಬಾಗಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ಯೆಹೋವನು ಅವನಿಗೆ, “ನಾನು ಮತ್ತೆ ವಸಂತಕಾಲದಲ್ಲಿ ಬರುತ್ತೇನೆ. ಆ ಸಮಯದಲ್ಲಿ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿರುವನು” ಎಂದು ಹೇಳಿದನು. ಸಾರಳು ಗುಡಾರದಲ್ಲಿದ್ದುಕೊಂಡು ಇದನ್ನೆಲ್ಲಾ ಕೇಳಿಸಿಕೊಳ್ಳುತ್ತಿದ್ದಳು. ಅವಳಿಗೆ ಈ ಸಂಗತಿಯೂ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಆ ಮೂವರಲ್ಲಿ ಒಬ್ಬರು, “ಬರುವ ವರ್ಷ ಇದೇ ಸಮಯದಲ್ಲಿ ನಾನು ನಿಶ್ಚಯವಾಗಿ ತಿರುಗಿ ನಿನ್ನ ಬಳಿಗೆ ಬರುವೆನು. ಆಗ ನಿನ್ನ ಹೆಂಡತಿ ಸಾರಳಿಗೆ ಒಬ್ಬ ಮಗನಿರುವನು,” ಎಂದನು. ಸಾರಳು ಅವರ ಹಿಂದೆ ಇದ್ದ ಡೇರೆಯ ಬಾಗಿಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:10
15 ತಿಳಿವುಗಳ ಹೋಲಿಕೆ  

ಅದರಂತೆ ಸಾರಳು ಬಸುರಾಗಿ, ದೇವರು ಮೊದಲು ಸೂಚಿಸಿದ ಕಾಲದಲ್ಲಿ ಅಬ್ರಹಾಮನಿಂದ ಅವನ ಮುಪ್ಪಿನಲ್ಲೇ ಅವನಿಗೆ ಒಬ್ಬ ಮಗನನ್ನು ಹೆತ್ತಳು.


ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನೊಂದಿಗೆ ಸ್ಥಾಪಿಸಿಕೊಳ್ಳುತ್ತೇನೆ; ಬರುವ ವರ್ಷ ಇದೇ ವೇಳೆಗೆ ಸಾರಳು ಅವನನ್ನು ಹೆರುವಳು” ಅಂದನು.


ದೇವರು, “ಹಾಗಲ್ಲ ನಿನ್ನ ಹೆಂಡತಿಯಾದ ಸಾರಳಲ್ಲಿಯೇ ನಿನಗೆ ಮಗನು ಹುಟ್ಟುವನು. ಅವನಿಗೆ ‘ಇಸಾಕ’ ಎಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು.


ನಾನು ಆಕೆಯನ್ನು ಆಶೀರ್ವದಿಸಿ, ಆಕೆಯಿಂದ ನಿನಗೆ ಒಬ್ಬ ಮಗನನ್ನು ಕೊಡುವೆನು. ನಾನು ಆಕೆಯನ್ನು ಆಶೀರ್ವದಿಸಿದ್ದರಿಂದ ಆಕೆಯಿಂದ ಅನೇಕ ಜನಾಂಗಗಳೂ ಅರಸರೂ ಉತ್ಪತ್ತಿಯಾಗುವರು” ಎಂದು ಹೇಳಿದನು.


ಸಹೋದರರೇ, ನಾವು ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳಾಗಿದ್ದೇವೆ.


ದಾಸಿಯ ಮಗನು ಶರೀರಕ್ಕನುಸಾರವಾಗಿ ಹುಟ್ಟಿದವನು, ಸ್ವತಂತ್ರಳಾದವಳ ಮಗನಾದರೋ ವಾಗ್ದಾನದ ಮೂಲಕ ಹುಟ್ಟಿದವನು.


ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು.


ಅದಲ್ಲದೆ ಯೆಹೋವನ ದೂತನು ಅವಳಿಗೆ, “ನಿನಗೆ ಬಹುಸಂತಾನವಾಗುವಂತೆ ಮಾಡುವೆನು; ನಿನ್ನ ಸಂತತಿಯು ಲೆಕ್ಕಿಸಲಾಗದಷ್ಟು ಹೆಚ್ಚಾಗುವುದು” ಎಂದು ಹೇಳಿದನು.


ಬಳಿಕ ಅವರು ಅವನಿಗೆ, “ನಿನ್ನ ಪತ್ನಿಯಾದ ಸಾರಳು ಎಲ್ಲಿದ್ದಾಳೆ” ಎಂದು ಕೇಳಲು ಅವನು “ಅಗೋ, ಗುಡಾರದಲ್ಲಿದ್ದಾಳೆ” ಎಂದನು.


ಯೆಹೋವನು ತಾನು ವಾಗ್ದಾನ ಮಾಡಿದಂತೆಯೇ ಸಾರಳ ಮೇಲೆ ದಯವಿಟ್ಟು ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು