Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅಬ್ರಹಾಮನು, “ಕರ್ತನೇ, ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತನಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುವೆನು, ನಾಶ ಮಾಡುವುದಿಲ್ಲ.” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅಬ್ರಹಾಮನು, “ಸ್ವಾಮೀ, ಸಿಟ್ಟುಗೊಳ್ಳಬೇಡಿ; ಇನ್ನು ಒಂದೇ ಒಂದು ಸಾರಿ ಮಾತಾಡುತ್ತೇನೆ; ಒಂದು ವೇಳೆ ಹತ್ತೇ ಮಂದಿ ಸಿಕ್ಕಾರು” ಎನ್ನಲು, ಸರ್ವೇಶ್ವರ, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುತ್ತೇನೆ, ನಾಶಮಾಡುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅಬ್ರಹಾಮನು - ಸ್ವಾಮೀ, ನಿನಗೆ ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು ಎನ್ನಲು ಆತನು - ಹತ್ತು ಮಂದಿಯ ನಿವಿುತ್ತವೂ ಅದನ್ನು ಉಳಿಸುವೆನು, ನಾಶಮಾಡುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆಮೇಲೆ ಅಬ್ರಹಾಮನು, “ಯೆಹೋವನೇ, ದಯಮಾಡಿ ನನ್ನ ಮೇಲೆ ಸಿಟ್ಟುಗೊಳ್ಳಬೇಡ. ಇದೊಂದು ಸಲ ಮಾತ್ರ ಪ್ರಶ್ನೆ ಕೇಳುವೆ. ಹತ್ತು ಮಂದಿ ನೀತಿವಂತರನ್ನು ಕಂಡರೆ ಏನು ಮಾಡುವೆ?” ಎಂದು ಕೇಳಿದನು. ಯೆಹೋವನು ಅವನಿಗೆ, “ನಾನು ಆ ಪಟ್ಟಣದಲ್ಲಿ ಹತ್ತು ಮಂದಿ ನೀತಿವಂತರನ್ನು ಕಂಡರೂ, ಅದನ್ನು ನಾಶಮಾಡುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆಗ ಅವನು, “ಯೆಹೋವ ದೇವರೇ, ನಿಮಗೆ ಕೋಪಬಾರದೆ ಇರಲಿ. ಇನ್ನು ಒಂದೇ ಸಾರಿ ಮಾತನಾಡುತ್ತೇನೆ. ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಿದರೆ,” ಎಂದಾಗ, ದೇವರು, “ಹತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:32
21 ತಿಳಿವುಗಳ ಹೋಲಿಕೆ  

ಅವನು ತಿರುಗಿ ದೇವರಿಗೆ, “ಸ್ವಾಮೀ, ಸಿಟ್ಟಾಗಬಾರದು; ಇನ್ನೊಂದು ಸಾರಿ ಮಾತನಾಡುತ್ತೇನೆ. ಇನ್ನು ಒಂದೇ ಸಾರಿ ಈ ಉಣ್ಣೆಯಿಂದ ನಿನ್ನನ್ನು ಪರೀಕ್ಷಿಸುವುದಕ್ಕೆ ಅಪ್ಪಣೆಯಾಗಲಿ; ಈ ಉಣ್ಣೆ ಮಾತ್ರವೇ ಒಣಗಿದ್ದು ನೆಲದ ಮೇಲೆಲ್ಲಾ ಹನಿ ಬಿದ್ದಿರಲಿ” ಅಂದನು.


“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;


ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.


ಯೆಹೋವನು ಹೀಗನ್ನುತ್ತಾನೆ, “ರಸ ದೊರೆಯಬಹುದಾದ ದ್ರಾಕ್ಷಿಯ ಗೊಂಚಲನ್ನು ಒಬ್ಬನು ನೋಡಿ, ‘ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ’ ಎನ್ನುವಂತೆ, ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು, ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು,


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ, ಶಿಷ್ಟರ ಬಿನ್ನಹ ಆತನಿಗೆ ಇಷ್ಟ.


ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ, ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ.


ಮನುಷ್ಯನ ಕರ್ತವ್ಯವನ್ನು ತೋರಿಸತಕ್ಕ ಸಹಸ್ರ ದೇವದೂತರಲ್ಲಿ ಒಬ್ಬನು ಅವನಿಗೆ ಮಧ್ಯಸ್ಥನಾಗಿ ಬೇಡುವುದರಿಂದ,


ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿಕೊಂಡನು.


ಅಬ್ರಹಾಮನು, “ಕರ್ತನೇ, ಕೋಪಮಾಡಬಾರದು; ಇನ್ನೂ ಮಾತನಾಡುತ್ತೇನೆ; ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು.


ಅವನು, “ಇಗೋ, ಸ್ವಾಮಿಯ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಇಪ್ಪತ್ತು ಮಂದಿಯಿದ್ದರೆ ಅವರ ನಿಮಿತ್ತ ಆ ಪಟ್ಟಣವನ್ನು ಉಳಿಸುವೆನು, ನಾಶ ಮಾಡುವುದಿಲ್ಲ” ಅಂದನು.


ಯೆಹೂದನು ಹತ್ತಿರಕ್ಕೆ ಬಂದು, “ನನ್ನ ಒಡೆಯನೇ, ನಿನ್ನ ಸೇವಕನಾದ ನಾನು ಒಂದು ಮಾತನ್ನು ನನ್ನ ಒಡೆಯನಿಗೆ ಬಿಡಿಸಿ ಹೇಳುವುದಕ್ಕೆ ಅಪ್ಪಣೆಯಾಗಬೇಕು. ನಿನ್ನ ದಾಸನ ಮೇಲೆ ಕೋಪಗೊಳ್ಳಬಾರದು. ಏಕೆಂದರೆ ನೀನು ಫರೋಹನಿಗೆ ಸಮಾನನು ಎಂದು ನಾನು ಬಲ್ಲೇ.


ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನು ಅನುಸರಿಸುವ ಒಬ್ಬನಾದರೂ ಇದ್ದಾನೋ? ಇಂತಹ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬುದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷಮಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು