Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಮೇಲೆ ಅವನು ದನಗಳ ಕಡೆಗೆ ಓಡಿಹೋಗಿ ಕೊಬ್ಬಿದ ಎಳೇ ಕರುವನ್ನು ತೆಗೆದು ಆಳಿನ ಕೈಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅನಂತರ ದನಗಳ ಹಟ್ಟಿಗೆ ಓಡಿಹೋಗಿ ಕೊಬ್ಬಿದ ಎಳೇ ಕರುವನ್ನು ತೆಗೆದು ಆಳಿನ ಕೈಗೆ ಕೊಟ್ಟನು. ಆಳು ಬೇಗನೆ ಅಡಿಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಮೇಲೆ ಅವನು ದನಗಳ ಕಡೆಗೆ ಓಡಿಹೋಗಿ ಕೊಬ್ಬಿದ ಎಳೇ ಕರುವನ್ನು ತೆಗೆದು ಆಳಿನ ಕೈಗೆ ಕೊಟ್ಟನು. ಆಳು ಬೇಗನೆ ಅಡಿಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಬಳಿಕ ಅವನು ತನ್ನ ಪಶುಗಳಿದ್ದಲ್ಲಿಗೆ ಓಡಿಹೋಗಿ ಉತ್ತಮವಾದ ಎಳೆಕರುವನ್ನು ತೆಗೆದು ಸೇವಕನಿಗೆ ಕೊಟ್ಟು, “ಬೇಗನೇ ಕರುವನ್ನು ಕೊಯ್ದು, ಊಟಕ್ಕೆ ಸಿದ್ಧಮಾಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅಬ್ರಹಾಮನು ದನದ ಮಂದೆಯ ಬಳಿಗೆ ಓಡಿಹೋಗಿ, ಒಳ್ಳೆಯ ಕರುವನ್ನು ತೆಗೆದುಕೊಂಡು ಒಬ್ಬ ಸೇವಕನಿಗೆ ಕೊಟ್ಟನು. ಆ ಸೇವಕನು ಬೇಗನೆ ಅಡಿಗೆಯನ್ನು ಸಿದ್ಧಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:7
11 ತಿಳಿವುಗಳ ಹೋಲಿಕೆ  

ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ಹಾಳುಮಾಡಿದ ಈ ನಿನ್ನ ಮಗನು ಬಂದಾಗ ಕೊಬ್ಬಿದ ಕರುವನ್ನು ಇವನಿಗೆ ಕೊಯ್ಸಿದಿಯಲ್ಲಾ’ ಎಂದು ಉತ್ತರಕೊಟ್ಟನು.


ಆಳು ಅವನಿಗೆ, ‘ನಿನ್ನ ತಮ್ಮ ಬಂದಿದ್ದಾನೆ. ಇವನು ಸುರಕ್ಷಿತನಾಗಿ ಬಂದದ್ದರಿಂದ ನಿನ್ನ ತಂದೆಯು ಆ ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ’ ಎಂದು ಹೇಳಿದನು.


ಕೊಬ್ಬಿಸಿದ ಆ ಕರುವನ್ನು ತಂದು ಕೊಯ್ಯಿರಿ, ಹಬ್ಬಮಾಡೋಣ, ಉಲ್ಲಾಸಪಡೋಣ.


ಅರಸನು ತಿರುಗಿ ಬೇರೆ ಆಳುಗಳನ್ನು ಕರೆದು, ‘ನೀವು ಊಟಕ್ಕೆ ಆಹ್ವಾನಿತರ ಬಳಿಗೆ ಹೋಗಿ ಇಗೋ, ಔತಣ ಸಿದ್ಧವಾಗಿದೆ; ನನ್ನ ಎತ್ತುಗಳನ್ನೂ, ಕೊಬ್ಬಿದ ಹೋರಿಗಳನ್ನೂ ವಧಿಸಿದ್ದೇನೆ; ಎಲ್ಲಾ ಸಿದ್ಧವಾಗಿದೆ; ಮದುವೆಯ ಔತಣಕ್ಕೆ ಬನ್ನಿರಿ’ ಎಂಬುದಾಗಿ ಅವರಿಗೆ ಹೇಳಿರೆಂದು ಅಪ್ಪಣೆ ಕೊಟ್ಟು ಕಳುಹಿಸಿದನು.


“ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿರುವ ಗಂಡುಪಶು ಹಾಗೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಟ್ಟಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಪಾತ್ರವಾಗಿದೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ದಂತದ ಮಂಚಗಳ ಮೇಲೆ ಮಲಗುತ್ತಾರೆ ಮತ್ತು ತಮ್ಮ ಗದ್ದುಗೆಗಳಲ್ಲಿ ಹಾಯಾಗಿ ಒರಗಿಕೊಳ್ಳುತ್ತಾರೆ. ಹಿಂಡಿನ ಕುರಿಮರಿಗಳನ್ನು, ಕೊಟ್ಟಿಗೆಯ ಕರುಗಳನ್ನು ತಿನ್ನುತ್ತಾರೆ.


ಅವನು ಅವರನ್ನು ಬಹಳ ಬಲವಂತ ಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳಿದುಕೊಳ್ಳುವುದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು.


ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ, “ಹಸನಾದ ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು” ಎಂದು ಹೇಳಿದನು.


ಆಳು ಬೇಗನೆ ಕೊಬ್ಬಿದ ಕರುವನ್ನು ಕಡಿದು, ಅಡಿಗೆ ಮಾಡಿದನು. ತರುವಾಯ ಅಬ್ರಹಾಮನು ಹಾಲು ಮೊಸರನ್ನೂ ಅಡಿಗೆ ಮಾಡಿದ ಮಾಂಸವನ್ನೂ ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಕುಳಿತು ಊಟ ಮಾಡುವವರೆಗೂ ಅವನು ಹತ್ತಿರ ನಿಂತು ಅವರಿಗೆ ಉಪಚಾರ ಮಾಡಿದನು.


ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರುವಿತ್ತು. ಆಕೆಯು ಶೀಘ್ರವಾಗಿ ಅದನ್ನು ಕೊಯ್ದು, ಸಿದ್ಧಮಾಡಿ, ಹಿಟ್ಟನ್ನು ತೆಗೆದುಕೊಂಡು ನಾದಿ, ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು ಸೌಲನಿಗೂ ಅವನ ಸೇವಕರಿಗೂ ಬಡಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು