Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳನ್ನು ಗೊತ್ತುಮಾಡಿಕೊಂಡಿದ್ದ ಅಳಿಯಂದಿರಿಗೆ ಈ ಸಂಗತಿಯನ್ನು ತಿಳಿಸಿ, “ನೀವೆದ್ದು, ಈ ಸ್ಥಳವನ್ನು ಬಿಟ್ಟು ಹೋಗಿರಿ ಯೆಹೋವನು ಈ ಊರನ್ನು ನಾಶಮಾಡುತ್ತಾನೆ” ಎಂದು ಹೇಳಿದನು. ಆದರೆ ಅವರು ಲೋಟನು ಅಪಹಾಸ್ಯ ಮಾಡುತ್ತಿದ್ದಾನೆ ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳಿಗೆ ಗೊತ್ತುಮಾಡಿದ್ದ ಅಳಿಯಂದಿರಿಗೆ ಸಂಗತಿಯನ್ನು ಹೇಳಿ, “ನೀವೆದ್ದು ಈ ಸ್ಥಳವನ್ನು ಬಿಟ್ಟ ಹೊರಡಿರಿ; ಈ ಊರನ್ನು ಸರ್ವೇಶ್ವರ ಸ್ವಾಮಿ ನಾಶ ಮಾಡಲಿದ್ದಾರೆ” ಎಂದು ಹೇಳಿದನು. ಆ ಅಳಿಯಂದಿರಿಗೆ ಇದೊಂದು ಪರಿಹಾಸ್ಯವಾಗಿ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣು ಮಕ್ಕಳನ್ನು ಗೊತ್ತುಮಾಡಿಕೊಂಡಿದ್ದ ಅಳಿಯಂದಿರಿಗೆ ಈ ಸಂಗತಿಯನ್ನು ತಿಳಿಸಿ - ನೀವೆದ್ದು ಈ ಸ್ಥಳವನ್ನು ಬಿಟ್ಟು ಹೋಗಿರಿ, ಯೆಹೋವನು ಈ ಊರನ್ನು ನಾಶಮಾಡುತ್ತಾನೆ ಎಂದು ಹೇಳಿದನು. ಆದರೆ ಅವನು ಅವರಿಗೆ ಗೇಲಿಮಾಡುವವನಾಗಿ ಕಾಣಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ ಲೋಟನು ಹೊರಗೆ ಹೋಗಿ, ತನ್ನ ಹೆಣ್ಣುಮಕ್ಕಳೊಡನೆ ನಿಶ್ಚಿತಾರ್ಥವಾಗಿದ್ದ ಅಳಿಯಂದಿರೊಡನೆ ಮಾತಾಡಿ, “ಬೇಗನೆ ಈ ಪಟ್ಟಣವನ್ನು ಬಿಟ್ಟು ಹೊರಡಿರಿ; ಯೆಹೋವನು ಈ ಪಟ್ಟಣವನ್ನು ನಾಶಮಾಡುವನು” ಎಂದು ಹೇಳಿದನು. ಲೋಟನ ಈ ಮಾತು ಅವರಿಗೆ ತಮಾಷೆಯಂತೆ ಕಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಲೋಟನು ಹೊರಟುಹೋಗಿ, ತನ್ನ ಪುತ್ರಿಯರನ್ನು ಗೊತ್ತುಮಾಡಿದ್ದ ಅಳಿಯಂದಿರ ಸಂಗಡ ಮಾತನಾಡಿ, “ಎದ್ದು ಈ ಸ್ಥಳದಿಂದ ಹೊರಡಿರಿ. ಏಕೆಂದರೆ ಯೆಹೋವ ದೇವರು ಈ ಪಟ್ಟಣವನ್ನು ನಾಶಮಾಡುವುದಕ್ಕಿದ್ದಾರೆ,” ಎಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಪರಿಹಾಸ್ಯಮಾಡುವಂತೆ ಕಾಣಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:14
26 ತಿಳಿವುಗಳ ಹೋಲಿಕೆ  

“ನೀವು ಈ ಸರ್ವಸಮೂಹದವರಿಂದ ಪ್ರತ್ಯೇಕವಾಗಿ ನಿಲ್ಲಿರಿ; ನಾನು ಇವರನ್ನು ಒಂದು ಕ್ಷಣದಲ್ಲಿ ದಹಿಸಿಬಿಡುತ್ತೇನೆ” ಎಂದು ಆಜ್ಞಾಪಿಸಿದನು.


“ನೀವಿಬ್ಬರೂ ಸಮೂಹದವರಲ್ಲಿ ಇರದೆ ಬೇರೆ ನಿಲ್ಲಬೇಕು. ನಾನು ಒಂದು ಕ್ಷಣಮಾತ್ರದಲ್ಲಿ ಅವರನ್ನು ದಹಿಸಿಬಿಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಮತ್ತು ಆರೋನರು ಬೋರಲುಬಿದ್ದರು.


ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ. ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬಿಲೋನಿಗೆ ಪ್ರತಿಕಾರ ಮಾಡುವನು.


ಅವನು ಇಸ್ರಾಯೇಲರ ಸಮೂಹದವರಿಗೆ, “ನೀವು ಈ ದುಷ್ಟರ ಡೇರೆಗಳ ಬಳಿಯಲ್ಲಿ ಇರದೆ ದೂರ ಹೋಗಬೇಕು; ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬಾರದು; ಇವರ ದೋಷಗಳಿಗಾಗಿ ಉಂಟಾಗುವ ಶಿಕ್ಷೆ ನಿಮ್ಮನ್ನೂ ಕೊಚ್ಚಿಕೊಂಡು ಹೋದೀತು” ಎಂದು ಹೇಳಿದನು.


ದೂತರು ಎಫ್ರಾಯೀಮ್, ಮನಸ್ಸೆ, ಜೆಬುಲೂನ್ ಪ್ರಾಂತ್ಯಗಳಲ್ಲಿ, ಪಟ್ಟಣದಿಂದ ಪಟ್ಟಣಕ್ಕೆ ಹೋದರು. ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು.


ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಪೌಲನನ್ನು ಅಪಹಾಸ್ಯಮಾಡಿದರು, ಬೇರೆ ಕೆಲವರು; “ನೀನು ಈ ವಿಷಯದಲ್ಲಿ ಹೇಳುವುದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ” ಅಂದರು.


ಅವರು ನಂಬಲಿಲ್ಲ ಏಕೆಂದರೆ ಆ ಮಾತುಗಳು ಅವರಿಗೆ ಬರೀ ಹರಟೆಯಾಗಿ ತೋರಿದವು.


“ಹೊರಗೆ ಹೋಗಿರಿ; ಹುಡುಗಿ ಸತ್ತಿಲ್ಲ ನಿದ್ರಿಸುತ್ತಿದ್ದಾಳೆ” ಅಂದನು. ಅದಕ್ಕೆ ಅವರು ಆತನನ್ನು ಪರಿಹಾಸ್ಯ ಮಾಡಿದರು.


“ಆಗ ನಾನು, ‘ಅಯ್ಯೋ, ಕರ್ತನಾದ ಯೆಹೋವನೇ, ಇವನು ಒಗಟುಗಾರನಲ್ಲವೇ?’ ಎಂದು ಈ ಜನರು ನನ್ನ ವಿಷಯವಾಗಿ ಅಂದುಕೊಳ್ಳುತ್ತಾರೆ” ಎಂಬುದಾಗಿ ಅರಿಕೆಮಾಡಿದೆನು.


ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ, ನಾನು ಮರುಳಾದೆನು; ನೀನು ನನಗಿಂತ ಬಲಿಷ್ಠನಾಗಿ ಗೆದ್ದುಕೊಂಡಿ; ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ.


ಆದುದರಿಂದ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ; ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಳಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ನುಡಿಯುವುದನ್ನು ಕೇಳಿದ್ದೇನೆ.


ಬಹಳವಾಗಿ ಗದರಿಸಿದರೂ ತಗ್ಗದವನು, ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.


“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಆ ಹುಡುಗನು ಇನ್ನೂ ಬರುತ್ತಿರುವಾಗಲೇ ಆ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ಬಹಳವಾಗಿ ಒದ್ದಾಡಿಸಿತು. ಆದರೆ ಯೇಸು ಆ ದೆವ್ವವನ್ನು ಗದರಿಸಿ ಆ ಹುಡುಗನಿಗೆ ವಾಸಿಮಾಡಿ ಅವನ ತಂದೆಗೆ ಒಪ್ಪಿಸಿದನು.


ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ, ಆತನ ತಾಯಿಯಾದ ಮರಿಯಳಿಗೂ ಯೋಸೇಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಮದುವೆಯಾಗಿ ಕೂಡಿಬಾಳುವುದಕ್ಕಿಂತ ಮೊದಲೇ ಮರಿಯಳು ಪವಿತ್ರಾತ್ಮನ ಶಕ್ತಿಯಿಂದ ಗರ್ಭಧರಿಸಿದ್ದು ತಿಳಿದುಬಂತು.


ಫರೋಹನು ಆ ರಾತ್ರಿಯಲ್ಲೇ ಮೋಶೆ ಮತ್ತು ಆರೋನರನ್ನು ಕರೆಯಿಸಿ ಅವರಿಗೆ, “ನೀವು ಎದ್ದು ನನ್ನ ಜನರ ಮಧ್ಯದಿಂದ ಹೊರಟುಹೋಗಿರಿ. ನೀವು ಕೇಳಿಕೊಂಡ ಮೇರೆಗೆ ಯೆಹೋವನನ್ನು ಆರಾಧಿಸುವುದಕ್ಕೆ ನೀವು ಮತ್ತು ಇಸ್ರಾಯೇಲರು ಹೊರಟುಹೋಗಿರಿ.


ಯಾರು ಯೆಹೋವನ ಮಾತನ್ನು ಮನಸ್ಸಿಗೆ ತೆಗೆದುಕೊಳ್ಳಲಿಲ್ಲವೋ, ಅವರು ತಮ್ಮ ಆಳುಗಳನ್ನೂ, ಪಶುಗಳನ್ನೂ ಹೊಲದಲ್ಲಿಯೇ ಬಿಟ್ಟರು.


ಬೇಗ ಅಲ್ಲಿಗೆ ಹೋಗಿ ತಪ್ಪಿಸಿಕೋ; ನೀನು ಆ ಪಟ್ಟಣವನ್ನು ಮುಟ್ಟುವ ತನಕ ನಾನೇನೂ ಮಾಡುವುದಕ್ಕಾಗುವುದಿಲ್ಲ” ಎಂದನು. ಇದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು.


ಅವರನ್ನು ಹೊರಗೆ ತಂದ ಮೇಲೆ ಅವರಲ್ಲಿ ಒಬ್ಬನು, “ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ತಿರುಗಿ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು” ಎಂದನು.


ಹೊತ್ತು ಮೂಡುವುದಕ್ಕೆ ಮುಂಚೆ ಆ ದೂತರು ಲೋಟನಿಗೆ, “ನೀನೆದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಬೇಗ ಕರೆದುಕೊಂಡು ಹೋಗು; ಊರಿಗೆ ಉಂಟಾಗುವ ದಂಡನೆಯಿಂದ ನಿನಗೂ ನಾಶವುಂಟಾದೀತು” ಎಂದು ಹೇಳಿ ತ್ವರೆಪಡಿಸಿದರು.


ಯೆರೆಮೀಯನು ಸಮಸ್ತ ಜನರನ್ನು ಸಂಬೋಧಿಸಿ ಅವರ ದೇವರಾದ ಯೆಹೋವನು ತನ್ನ ಮೂಲಕ ಅವರಿಗೆ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ತಿಳಿಸಿದನು.


ಆಮೇಲೆ ಹೋಷಾಯನ ಮಗನಾದ ಅಜರ್ಯನೂ, ಕಾರೇಹನ ಮಗನಾದ ಯೋಹಾನಾನನೂ, ಸೊಕ್ಕೇರಿದವರೆಲ್ಲರೂ ಅವನಿಗೆ, “ನಿನ್ನ ಮಾತು ಸುಳ್ಳು, ‘ಐಗುಪ್ತಕ್ಕೆ ಹೋಗಿ ವಾಸಮಾಡಬಾರದು’ ಎಂದು ತಿಳಿಸುವಂತೆ ನಮ್ಮ ದೇವರಾದ ಯೆಹೋವನು ನಿನ್ನನ್ನು ಕಳುಹಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು