Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗೋ, ಅಲ್ಲಿ ಒಂದು ಪಟ್ಟಣ ಹತ್ತಿರವಾಗಿದೆ; ಅದು ಸಣ್ಣದು; ಅಲ್ಲಿಗಾದರೂ ಹೋಗುವುದಕ್ಕೆ ಅಪ್ಪಣೆಯಾದರೆ ನನ್ನ ಪ್ರಾಣ ಉಳಿಯುವುದು; ಆ ಊರು ಸಣ್ಣದಲ್ಲವೇ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆದುದರಿಂದ ಅಗೋ, ಅಲ್ಲಿ ಊರೊಂದು ಕಾಣಿಸುತ್ತಿದೆ; ಅದು ಅಷ್ಟೇನು ದೂರವಲ್ಲ, ಚಿಕ್ಕ ಊರು, ಹೌದಲ್ಲವೆ? ಅಲ್ಲಿಗಾದರೂ ಹೋಗಲು ಅಪ್ಪಣೆಯಾದರೆ ಪ್ರಾಣ ಉಳಿಯುತ್ತದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅಗೋ, ಅಲ್ಲಿ ಒಂದು ಊರು ಹತ್ತಿರವಾಗಿದೆ; ಅದು ಸಣ್ಣದು; ಅಲ್ಲಿಗಾದರೂ ಹೋಗುವದಕ್ಕೆ ಅಪ್ಪಣೆಯಾದರೆ ನನ್ನ ಪ್ರಾಣ ಉಳಿಯುವದು; ಆ ಊರು ಸಣ್ಣದಲ್ಲವೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅಗೋ, ಅಲ್ಲಿ ಒಂದು ಚಿಕ್ಕ ಊರಿದೆ. ಆ ಊರಿಗೆ ಓಡಿಹೋಗಲು ನನಗೆ ಅಪ್ಪಣೆಕೊಡಿ. ನಾನು ಅಲ್ಲಿಗೆ ಓಡಿಹೋಗಿ ಸುರಕ್ಷಿತವಾಗಿರುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆ ಪಟ್ಟಣವನ್ನು ನೋಡಿರಿ. ನಾನು ಅಲ್ಲಿಗೆ ಓಡಿಹೋಗಲು ಸಮೀಪವಾಗಿದೆ ಮತ್ತು ಅದು ಸಣ್ಣದು. ನಾನು ತಪ್ಪಿಸಿಕೊಂಡು ಅಲ್ಲಿಗೆ ಹೋಗುತ್ತೇನೆ. ಇದರಿಂದ ನನ್ನ ಪ್ರಾಣವು ಉಳಿಯುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:20
9 ತಿಳಿವುಗಳ ಹೋಲಿಕೆ  

ನನ್ನ ಪ್ರಾಣವನ್ನು ಉಳಿಸು, ಅದು ನಿನ್ನನ್ನು ಕೊಂಡಾಡಲಿ. ನಿನ್ನ ನಿಯಮಗಳಿಂದ ನನಗೆ ಸಹಾಯವಾಗಲಿ.


ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವುದಿಲ್ಲವೋ? ಯೆಹೋವನಿಂದಲ್ಲದೆ ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ?


ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಲೋಟನು ಚೋಗರಿನಲ್ಲಿರುವುದಕ್ಕೆ ಹೆದರಿ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಕರೆದುಕೊಂಡು ಬೆಟ್ಟವನ್ನು ಹತ್ತಿ ಅಲ್ಲಿ ವಾಸಮಾಡಿದನು. ಅವನೂ ಅವನ ಇಬ್ಬರು ಹೆಣ್ಣುಮಕ್ಕಳೂ ಒಂದು ಗವಿಯಲ್ಲಿ ವಾಸಮಾಡಿದರು.


ಆದಕಾರಣ ನೀನು ನನಗೆ ತಂಗಿಯಾಗಬೇಕೆಂದು ಅವರಿಗೆ ಹೇಳು; ಹೀಗೆ ಹೇಳಿದರೆ ನಿನ್ನ ನಿಮಿತ್ತ ನನಗೆ ಹಿತವಾಗುವುದು, ನಾನು ನಿನ್ನ ದೆಸೆಯಿಂದ ಸಾಯದೆ ಬದುಕುವೆನು” ಎಂದು ಹೇಳಿದನು.


ನೀನು ನಿನ್ನ ದಾಸನ ಮೇಲೆ ದಯೆ ಇಟ್ಟು ನನ್ನ ಪ್ರಾಣವನ್ನು ಉಳಿಸಿದ್ದು ಬಹು ವಿಶೇಷವಾದ ಉಪಕಾರವೇ; ಆದರೆ ಬೆಟ್ಟಕ್ಕೆ ಓಡಿ ಹೋಗಲಾರೆನು; ನಾನು ಹೋಗುತ್ತಿರುವಾಗ ಆ ವಿಪತ್ತು ನನಗೂ ಉಂಟಾಗಿ ಸತ್ತೇನು.


ಅದಕ್ಕಾತನು, “ಈ ವಿಷಯದಲ್ಲಿಯೂ ನಿನ್ನ ಬೇಡಿಕೆಯನ್ನು ಅನುಗ್ರಹಿಸಿದ್ದೇನೆ, ನೋಡು; ನೀನು ಹೇಳಿದ ಊರನ್ನು ನಾನು ಕೆಡವಿ ಹಾಕುವುದಿಲ್ಲ.


ಅದಕ್ಕೆ ಯೆರೆಮೀಯನು, “ನಿನ್ನನ್ನು ಒಪ್ಪಿಸರು; ಪ್ರಭುವೇ, ನಾನು ನಿನಗೆ ಹೇಳಿರುವ ಯೆಹೋವನ ಮಾತನ್ನು ಕೈಗೊಳ್ಳು; ಕೈಗೊಂಡರೆ ಪ್ರಾಣ ಉಳಿಯುವುದು, ಸುಖವೂ ಆಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು