Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕೇಳಿರಿ, ನನಗೆ ಪುರುಷನನ್ನು ಅರಿಯದ ಇಬ್ಬರು ಹೆಣ್ಣುಮಕ್ಕಳು ಇದ್ದಾರೆ; ಅವರನ್ನಾದರೂ ನಿಮಗೆ ತಂದು ಒಪ್ಪಿಸುತ್ತೇನೆ; ಅವರನ್ನು ಮನಸ್ಸು ಬಂದಂತೆ ಮಾಡಬಹುದು; ಆದರೆ ಆ ಮನುಷ್ಯರು ನನ್ನ ಆಶ್ರಯಕ್ಕೆ ಬಂದವರು; ಅವರಿಗೆ ಏನೂ ಮಾಡಕೂಡದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕೇಳಿ, ಕನ್ಯೆಯರಾದ ಇಬ್ಬರು ಹೆಣ್ಣುಮಕ್ಕಳು ನನಗಿದ್ದಾರೆ; ಅವರನ್ನು ಬೇಕಾದರೆ ಹೊರಗೆ ಕರೆಯಿಸುತ್ತೇನೆ; ನಿಮಗೆ ಇಷ್ಟಬಂದಂತೆ ಮಾಡಬಹುದು. ಆದರೆ ಆ ಮನುಷ್ಯರು ನನ್ನ ಆಶ್ರಯಕ್ಕಾಗಿ ಬಂದವರು; ಅವರಿಗೆ ಏನೂ ಮಾಡಬೇಡಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನಗೆ ಪುರುಷರನ್ನರಿಯದ ಇಬ್ಬರು ಹೆಣ್ಣುಮಕ್ಕಳು ಇದ್ದಾರೆ; ಅವರನ್ನಾದರೂ ನಿಮಗೆ ತಂದು ಒಪ್ಪಿಸೇನು; ಮನಸ್ಸು ಬಂದಂತೆ ಮಾಡಬಹುದು; ಆದರೆ ಆ ಮನುಷ್ಯರು ನನ್ನ ಆಶ್ರಯಕ್ಕೆ ಬಂದವರು; ಅವರಿಗೆ ಏನೂ ಮಾಡಕೂಡದು ಎಂದು ಹೇಳಲು ಅವರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೋಡಿ! ನನಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಅವರು ಹಿಂದೆಂದೂ ಗಂಡಸರೊಡನೆ ಮಲಗಿದವರಲ್ಲ. ನೀವು ಅವರಿಗೆ ಏನುಬೇಕಾದರೂ ಮಾಡಿ, ಆದರೆ ದಯವಿಟ್ಟು ಈ ಪುರುಷರಿಗೆ ಏನನ್ನೂ ಮಾಡಬೇಡಿ. ಇವರು ನನ್ನ ಮನೆಗೆ ಬಂದಿದ್ದಾರೆ; ಇವರನ್ನು ಕಾಪಾಡುವುದು ನನ್ನ ಕರ್ತವ್ಯ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಗಂಡಸರನ್ನು ಅರಿಯದ ಇಬ್ಬರು ಪುತ್ರಿಯರು ನನಗೆ ಇದ್ದಾರೆ. ಅವರನ್ನು ನಿಮ್ಮ ಬಳಿಗೆ ಕರೆ ತರುವೆನು. ನಿಮ್ಮ ದೃಷ್ಟಿಗೆ ಒಳ್ಳೆಯದೆಂದು ಕಾಣುವ ಹಾಗೆ ನೀವು ಅವರಿಗೆ ಮಾಡಿರಿ. ಆ ಮನುಷ್ಯರಿಗೆ ಮಾತ್ರ ಏನೂ ಮಾಡಬೇಡಿರಿ. ಏಕೆಂದರೆ ಅವರು ನನ್ನ ಮನೆಯ ಆಶ್ರಯಕ್ಕೆ ಬಂದಿದ್ದಾರೆ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:8
12 ತಿಳಿವುಗಳ ಹೋಲಿಕೆ  

ಇನ್ನೂ ಮದುವೆಯಾಗದೆ ಇರುವ ನನ್ನ ಮಗಳನ್ನೂ, ಅವನ ಉಪಪತ್ನಿಯನ್ನೂ ಹೊರಗೆ ತರುತ್ತೇನೆ; ಅವರನ್ನು ಭಂಗಪಡಿಸಿರಿ; ನಿಮ್ಮ ಮನಸ್ಸಿಗೆ ಬಂದ ಹಾಗೆ ಅವರಿಗೆ ಮಾಡಿರಿ. ಈ ಮನುಷ್ಯನಿಗೆ ಮಾತ್ರ ಅಂಥ ದುಷ್ಕೃತ್ಯವನ್ನು ಮಾಡಬೇಡಿರಿ” ಅಂದನು.


“ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.


ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂಬುದೇ ತಿಳಿಯಲಿಲ್ಲ. ಅವರು ಬಹಳವಾಗಿ ಹೆದರಿಕೊಂಡಿದ್ದರು.


ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.


ಅದು, ‘ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡುವುದು’ ಎಂದಿತು.


ಆರೋನನು, “ಸ್ವಾಮಿಯವರು, ರೋಷಗೊಳ್ಳಬಾರದು ಈ ಜನರು ದುಷ್ಟಸ್ವಭಾದವರು, ಹಠಮಾರಿಗಳು ಎಂಬುದು ನಿನಗೆ ಗೊತ್ತಿಲ್ಲವೇ?


ರೂಬೇನನು ತನ್ನ ತಂದೆಗೆ, “ನಾನು ಈ ಹುಡುಗನನ್ನು ತಿರುಗಿ ತಂದು ಒಪ್ಪಿಸದೆ ಹೋದರೆ ನನ್ನ ಇಬ್ಬರು ಗಂಡುಮಕ್ಕಳನ್ನು ಕೊಂದು ಹಾಕಬಹುದು. ಇವನನ್ನು ನನ್ನ ವಶಕ್ಕೆ ಕೊಟ್ಟರೆ ನಾನು ತಪ್ಪದೆ ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುತ್ತೇನೆ” ಎಂದು ಹೇಳಿದನು.


ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು” ಎನ್ನಲು ಅವರು, “ನೀನು ಹೇಳಿದಂತೆ ಮಾಡಬಹುದು” ಅಂದರು.


“ಅಣ್ಣಂದಿರೇ, ಈ ದುಷ್ಟತನವನ್ನು ಮಾಡಬೇಡಿರಿ.


ಆಗ ಆ ಮುದುಕನು ಹೊರಗೆ ಹೋಗಿ ಅವರಿಗೆ, “ಸಹೋದರರೇ, ಇಂಥ ದುಷ್ಟತನವನ್ನು ನಡೆಸಬೇಡಿರಿ; ಅವನು ಆಶ್ರಯಕ್ಕಾಗಿ ನನ್ನ ಮನೆಗೆ ಬಂದಿದ್ದಾನೆ; ನೀವು ಇಂಥ ಹುಚ್ಚುತನವನ್ನು ಮಾಡಬೇಡಿರಿ.


ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೇ ಕಳಂಕವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು