Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ದಾರಿ ಬಿಡು ಎಂದು ಹೇಳಿ, “ಇವನು ಯಾರೋ ಒಬ್ಬ ಪರದೇಶಿಯಾಗಿ ಬಂದು ಈಗ ನ್ಯಾಯಾಧಿಪತಿಯಾಗಬೇಕೆಂದಿದ್ದಾನೆ; ಆ ಮನುಷ್ಯರಿಗೆ ಕೇಡು ಮಾಡುವುದಕ್ಕಿಂತ ಹೆಚ್ಚಾಗಿ ನಿನಗೇ ಕೇಡು ಮಾಡುತ್ತೇವೆ” ಎಂದು ಹೇಳಿ ಲೋಟನ ಮೇಲೆ ಬಿದ್ದು ಬಹಳವಾಗಿ ತುಳಿದು ಬಾಗಿಲನ್ನು ಮುರಿಯಲು ಸಮೀಪಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರಾದರೋ, “ಬಿಡು ದಾರಿ, ಪ್ರವಾಸಿಯಾಗಿ ಬಂದ ಇವನು ನಮಗೆ ನ್ಯಾಯಹೇಳುವವನಾಗಿಬಿಟ್ಟ! ದಾರಿ ಬಿಡದಿದ್ದರೆ ಆ ಮನುಷ್ಯರಿಗಿಂತ ನಿನಗೇ ಹೆಚ್ಚು ಕೇಡಾದೀತು,” ಎಂದು ಹೇಳಿ ಲೋಟನ ಮೇಲೆ ಬಿದ್ದು ತುಳಿದು ಬಾಗಿಲನ್ನು ಒಡೆದುಹಾಕುವುದರಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದಾರಿ ಬಿಡು ಎಂದು ಹೇಳಿ - ಇವನು ಯಾರೋ ಒಬ್ಬ ಪರದೇಶಿಯಾಗಿ ಬಂದು ಈಗ ನ್ಯಾಯ ಹೇಳುವವನಾಗಬೇಕೋ; ಆ ಮನುಷ್ಯರಿಗೆ ಕೇಡು ಮಾಡುವದಕ್ಕಿಂತ ಹೆಚ್ಚಾಗಿ ನಿನಗೇ ಕೇಡು ಮಾಡುತ್ತೇವೆ ಎಂದು ಹೇಳಿ ಲೋಟನ ಮೇಲೆ ಬಿದ್ದು ಬಹಳವಾಗಿ ಇರುಕಿಸಿ ಕದವನ್ನು ಒಡೆದು ಬಿಡಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮನೆಯ ಸುತ್ತಲೂ ನಿಂತುಕೊಂಡಿದ್ದ ಗಂಡಸರು ಅವನಿಗೆ, “ದಾರಿಬಿಡು” ಎಂದು ಕೂಗಿದರು. ಆಮೇಲೆ ಅವರು ತಮ್ಮೊಳಗೆ, “ಈ ಲೋಟನು ನಮ್ಮ ನಗರಕ್ಕೆ ಪ್ರವಾಸಿಗನಂತೆ ಬಂದು ಈಗ ನಮಗೇ ನ್ಯಾಯವನ್ನು ಹೇಳಿಕೊಡುತ್ತಿದ್ದಾನೆ” ಎಂದು ಮಾತಾಡಿಕೊಂಡರು. ಆಮೇಲೆ ಅವರು ಲೋಟನಿಗೆ, “ನಾವು ಆ ಪುರುಷರಿಗೆ ಮಾಡುವುದಕ್ಕಿಂತ ನಿನಗೇ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ” ಎಂದು ಕೂಗಿಹೇಳಿ ಲೋಟನ ಸಮೀಪಕ್ಕೆ ಬಂದು ಬಾಗಿಲನ್ನು ಮುರಿದುಹಾಕಲು ಸಿದ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ಅವರು, “ಹಿಂದಕ್ಕೆ ಸರಿ,” ಎಂದು ಹೇಳಿ, “ಇವನು ಪ್ರವಾಸಿಯಾಗಿ ಬಂದು ನ್ಯಾಯಾಧಿಪತಿಯಾಗಲು ಯತ್ನಿಸುತ್ತಿದ್ದಾನೆ. ಈಗ ನಿನಗೆ ಅವರಿಗಿಂತ ಹೆಚ್ಚು ಕೇಡು ಮಾಡುತ್ತೇವೆ,” ಎಂದರು. ಅವರು ಲೋಟನನ್ನು ಬಲವಾಗಿ ತುಳಿದು, ಬಾಗಿಲನ್ನು ಮುರಿಯಲು ಸಮೀಪಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:9
21 ತಿಳಿವುಗಳ ಹೋಲಿಕೆ  

ಆ ಮನುಷ್ಯನು ಅವನಿಗೆ, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ, ಇಟ್ಟವರು ಯಾರು? ಆ ಐಗುಪ್ತ್ಯನನ್ನು ಕೊಂದು ಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದಿಯೋ?” ಅಂದನು. ಈ ಮಾತನ್ನು ಕೇಳಿ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ಬಯಲಿಗೆ ಬಂತಲ್ಲಾ” ಅಂದುಕೊಂಡನು.


ಹೀಗೆ ಅವರಿಬ್ಬರೂ ಪ್ರತ್ಯೇಕವಾದರು. ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನು ಯೊರ್ದನ್ ಹೊಳೆಯ ಸುತ್ತಣ ಊರುಗಳಲ್ಲಿ ವಾಸ ಮಾಡುತ್ತಾ ಸೊದೋಮಿನ ಸಮೀಪದಲ್ಲಿ ಗುಡಾರ ಹಾಕಿದನು.


“ಪವಿತ್ರವಾದುದನ್ನು ನಾಯಿಗಳಿಗೆ ನೀಡಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.


ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು” ಎಂದು ಯೆಹೋವನು ನುಡಿಯುತ್ತಾನೆ.


ಆದಕಾರಣ ಹದಮಳೆಗೆ ಅಡ್ಡಿಯಾಯಿತು, ಹಿಂಗಾರೂ ಆಗಲಿಲ್ಲ; ಆದರೂ ನೀನು ವ್ಯಭಿಚಾರಿಯಾಗಿ ನಾಚಿಕೆಗೆಟ್ಟಿದ್ದಿ.


ಅವರು, ‘ಹತ್ತಿರ ಬರಬೇಡ, ನಾನು ಮಡಿವಂತನು, ನೀನು ಸೇರತಕ್ಕವನಲ್ಲ’ ಎನ್ನುತ್ತಾ, ಅಂತು ಪ್ರತಿನಿತ್ಯವೂ ಮುಖದೆದುರಿಗೆ ನನ್ನನ್ನು ಕೆಣಕುತ್ತಾ, ನನ್ನ ಮೂಗಿಗೆ ದಿನವೆಲ್ಲಾ ಉರಿಯುವ ಬೆಂಕಿಯ ಹೊಗೆಯಾಗಿದ್ದಾರೆ.


ಅಜ್ಞಾನಿಯ ಮಾತುಗಳು ಆರಂಭದಲ್ಲಿ ಬುದ್ಧಿಹೀನತೆ, ಅಂತ್ಯದಲ್ಲಿ ಅಪಾಯದ ಮರಳುತನ.


ಈ ಲೋಕದಲ್ಲಿ ನಡೆಯುವ ಎಲ್ಲಾ ಸಂಗತಿಗಳಿಗೂ ಕೆಟ್ಟ ಪ್ರತಿಫಲ ಉಂಟು ಮತ್ತು ಎಲ್ಲರಿಗೂ ಒಂದೇ ಗತಿಯಾಗುವುದು. ಇದಲ್ಲದೆ ಮನುಷ್ಯರ ಹೃದಯದಲ್ಲಿ ಕೆಟ್ಟತನವು ತುಂಬಿದೆ. ಅವರು ಬದುಕಿರುವ ತನಕ ಹುಚ್ಚುತನವು ಅವರ ಮನಸ್ಸನ್ನು ಹಿಡಿದಿರುವುದು. ಅನಂತರ ಅವರು ಸಾಯುತ್ತಾರೆ.


ಕಲ್ಲು ಭಾರ, ಮರಳು ಭಾರ, ಎರಡಕ್ಕಿಂತಲೂ ಮೂಢನ ಕೋಪವು ಬಲು ಭಾರ.


ಮೂರ್ಖತನದಲ್ಲಿ ಮುಳುಗಿರುವ ಮೂಢನನ್ನು ಎದುರಾಗುವುದಕ್ಕಿಂತಲೂ, ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಎದುರಾಗುವುದು ಲೇಸು.


ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು, ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು.


ಈಗ ಮಾಡಬೇಕಾದದ್ದನ್ನು ನೀನೇ ಆಲೋಚಿಸಿ ಗೊತ್ತುಮಾಡು. ನಮ್ಮ ಯಜಮಾನನಿಗೂ, ಅವನ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ. ಮೂರ್ಖನಾದ ಅವನೊಡನೆ ಮಾತನಾಡುವುದು ಅಸಾಧ್ಯ” ಎಂದು ಹೇಳಿದನು.


“ಇಲ್ಲಿ ಬಾ, ನಿನ್ನ ಮಾಂಸವನ್ನು ಮೃಗ ಪಕ್ಷಿಗಳಿಗೆ ಹಂಚಿಕೊಡುತ್ತೇನೆ” ಅಂದನು.


ನೋಡಿದ ಮೇಲೆ ಯೆಹೋವನು, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇವರು ಇಷ್ಟು ದೊಡ್ಡ ಯೋಜನೆಯೊಂದಿಗೆ ಒಟ್ಟಾಗಿ ಕೆಲಸ ಮಾಡಲಾರಂಭಿಸಿದ್ದಾರೆ. ಇನ್ನು ಮುಂದೆ ಇವರು ಏನು ಮಾಡಲು ಉದ್ದೇಶಿಸಿದರೂ ಇವರಿಗೆ ಯಾವುದೂ ಅಸಾಧ್ಯವಾಗುವುದಿಲ್ಲ.


ಅರ್ಪಿಸುವವನು, ಮೊದಲು ಕೊಬ್ಬನ್ನು ಹೋಮಮಾಡಲಿ, ಅನಂತರ ನಿನಗೆ ಬೇಕಾದದ್ದನ್ನು ತೆಗೆದುಕೋ ಎಂದು ಹೇಳಿದರೆ ಅವನು, “ಈಗಲೇ ಕೊಡಬೇಕು; ಇಲ್ಲವಾದರೆ ಬಲಾತ್ಕಾರದಿಂದ ತೆಗೆದುಕೊಳ್ಳುವೆನು” ಎನ್ನುವನು.


ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವುದು, ಹೊಟ್ಟೆತುಂಬಿಸಿಕೊಳ್ಳುವುದು, ಸ್ವಂತ ಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಮತ್ತು ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬವಾಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು