Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹೀಗೆ ಭೂಮಿಯು ಆಕಾಶಗಳು ಅವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪರಲೋಕ - ಭೂಲೋಕಗಳೂ ಅವುಗಳಲ್ಲಿ ಇರುವ ಸಮಸ್ತವೂ ಹೀಗೆ ನಿರ್ಮಿತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹೀಗೆ ಭೂಮ್ಯಾಕಾಶಗಳೂ ಅವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಹೀಗೆ ಭೂಮಿಯೂ ಆಕಾಶವೂ ಅವುಗಳಲ್ಲಿರುವ ಪ್ರತಿಯೊಂದೂ ನಿರ್ಮಿತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹೀಗೆ ಭೂಮ್ಯಾಕಾಶಗಳೂ ಅವುಗಳಲ್ಲಿರುವ ಸಮಸ್ತವೂ ಸಂಪೂರ್ಣವಾಗಿ ನಿರ್ಮಿತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:1
34 ತಿಳಿವುಗಳ ಹೋಲಿಕೆ  

ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; ಅದರಲ್ಲಿರುವುದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು.


ಇದು ನನಗೂ ಇಸ್ರಾಯೇಲರಿಗೂ ನಡುವೆಯಿರುವ ಸದಾಕಾಲದ ಗುರುತು. ಏಕೆಂದರೆ ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನು ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸವನ್ನು ಮಾಡದೇ ವಿಶ್ರಮಿಸಿಕೊಂಡನಲ್ಲವೇ?”


ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದುದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.


ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು.


ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ, ಆತನೇ ದೇವರು. ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು. ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗೆನ್ನುತ್ತಾನೆ, “ನಾನೇ ಯೆಹೋವನು, ಇನ್ನು ಯಾರೂ ಇಲ್ಲ.


ಆಕಾಶಮಂಡಲವನ್ನು ಉಂಟುಮಾಡಿ ಹರಡಿ ಭೂಮಂಡಲವನ್ನೂ, ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, ಭೂಜನರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗೆನ್ನುತ್ತಾನೆ,


ಹಿಜ್ಕೀಯನು ಯೆಹೋವನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲರ ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕಭೂಲೋಕಗಳನ್ನು ಉಂಟುಮಾಡಿದವನು ನೀನೇ.


ಭೂಲೋಕವನ್ನು ಉಂಟುಮಾಡಿ ಅದರಲ್ಲಿನ ಮನುಷ್ಯರನ್ನು ಸೃಷ್ಟಿಸಿದವನು ನಾನೇ. ನನ್ನ ಕೈಗಳೇ ಆಕಾಶಮಂಡಲವನ್ನು ಹರಡಿದವು, ನಕ್ಷತ್ರಸೈನ್ಯಕ್ಕೆ ಅಪ್ಪಣೆಕೊಟ್ಟವನೂ ನಾನೇ.


ಭೂಮಿ, ಆಕಾಶ, ಸಾಗರ, ಜಲಚರ ಇವುಗಳನ್ನು ನಿರ್ಮಿಸಿದವನೂ, ವಾಗ್ದಾನವನ್ನು ಯಾವಾಗಲೂ ನೆರವೇರಿಸುವವನೂ,


ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶ ಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ, ಮನುಷ್ಯರೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ,


ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.


ಯೆಹೋವನೇ ನೀನೊಬ್ಬನೇ ದೇವರು; ನೀನು ಉನ್ನತೋನ್ನತವಾದ ಆಕಾಶವನ್ನೂ, ಅದರ ಸೈನ್ಯವನ್ನೂ, ಭೂಮಿಯನ್ನೂ ಅದರ ಮೇಲಿರುವುದನ್ನೂ, ಸಮುದ್ರಗಳನ್ನೂ ಎಲ್ಲಾ ಜಲಚರಗಳನ್ನೂ ಉಂಟುಮಾಡಿ, ಸಮಸ್ತ ಪ್ರಾಣಿಗಳಿಗೂ ಜೀವಕೊಡುವಾತನಾಗಿರುತ್ತೀ. ಆಕಾಶಸೈನ್ಯದವರು ನಿನ್ನನ್ನು ಆರಾಧಿಸುತ್ತಾರೆ.


ಇದಲ್ಲದೆ, “ಭೂಮ್ಯಾಕಾಶಗಳನ್ನು ಉಂಟುಮಾಡಿದ ಇಸ್ರಾಯೇಲ್ ದೇವರಾದ ಯೆಹೋವನು ತನಗೋಸ್ಕರ ದೇವಾಲಯವನ್ನೂ, ರಾಜನಿಗೋಸ್ಕರ ಅರಮನೆಯನ್ನೂ ಕಟ್ಟಿಸತಕ್ಕ ಬುದ್ಧಿ, ಜ್ಞಾನ, ವಿವೇಕವುಳ್ಳ ಮಗನನ್ನು ಅರಸನಾದ ದಾವೀದನಿಗೆ ಕೊಟ್ಟಿದ್ದರಿಂದ ಆತನಿಗೆ ಸ್ತೋತ್ರವಾಗಲಿ.


ಈಗ ನಂಬುವವರಾದ ನಾವುಗಳೇ ಆ ವಿಶ್ರಾಂತಿಯಲ್ಲಿ ಸೇರುವವರು. ಏಕೆಂದರೆ ಲೋಕಾದಿಯಿಂದ ತನ್ನ ಸೃಷ್ಟಿಯ ಕಾರ್ಯಗಳು ಮುಗಿದುಹೋದಾಗ್ಯೂ “ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ ಎಂದು ನಾನು ಕೋಪದಿಂದ ಪ್ರಮಾಣ ಮಾಡಿದೆನು” ಎಂದು ಹೇಳಿದೆಯಲ್ಲಾ.


ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು;, “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,


ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು. ಇಸ್ರಾಯೇಲ್ ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದು ಆತನ ನಾಮಧೇಯ.


ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ.


“ಇಗೋ, ನೂತನ ಆಕಾಶಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಸೃಷ್ಟಿಸುವೆನು; ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆ ಬಾರದು.


ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು, ನಾನು ಕರೆದ ಕೂಡಲೆ ಅವೆರಡೂ ಒಟ್ಟಾಗಿ ನಿಲ್ಲುವವು.


ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯ, ಚಂದ್ರ ಅಥವಾ ನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂ ಬಾರದು ಮತ್ತು ನಮಸ್ಕರಿಸಲೂ ಬಾರದು.


ಯೆಹೋವನಾದ ದೇವರು ಭೂಮಿಯು ಆಕಾಶಗಳನ್ನು ನಿರ್ಮಾಣ ಮಾಡಿದ ಚರಿತ್ರೆ ಇದೇ.


ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು.


ಆತನಿಂದ ದೂರಹೋಗಿ ಅನ್ಯದೇವರುಗಳನ್ನು ಪೂಜಿಸಬಾರದೆಂದು ಮತ್ತು ಆತನು ನಿಷೇಧಿಸಿರುವ ಸೂರ್ಯ, ಚಂದ್ರ ಅಥವಾ ನಕ್ಷತ್ರಮಂಡಲವನ್ನಾಗಲಿ ಸೇವಿಸಿ, ಪೂಜಿಸಿ ಯೆಹೋವನ ದೃಷ್ಟಿಯಲ್ಲಿ ಅಸಹ್ಯವಾದದ್ದನ್ನು ನಡಿಸಿದರೆ,


ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.


ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ನಿಮ್ಮ ಮಾರ್ಗಗಳಿಗಿಂತ ನನ್ನ ಮಾರ್ಗಗಳೂ, ನಿಮ್ಮ ಆಲೋಚನೆಗಳಿಗಿಂತ ನನ್ನ ಆಲೋಚನೆಗಳೂ ಅಷ್ಟು ಉನ್ನತವಾಗಿವೆ.


ಈ ಎಲ್ಲವುಗಳ ಸಾಕ್ಷಿಯಿಂದ ಯೆಹೋವನ ಕೈಯೇ ಸಕಲ ಕಾರ್ಯಗಳನ್ನು ಮಾಡುತ್ತದೆ ಎಂದು ಯಾರಿಗೆ ತಾನೇ ಗೊತ್ತಾಗುವುದಿಲ್ಲ?


ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ನಕ್ಷತ್ರಗಣಗಳನ್ನು ಪೂಜಿಸುವುದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವುದೇನಂದರೆ, “‘ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಲವತ್ತು ವರ್ಷ ನನಗೆ ಯಜ್ಞಗಳನ್ನೂ, ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ;


ಫಕ್ಕನೆ ಆ ದೂತನ ಸಂಗಡ ಸ್ವರ್ಗೀಯ ಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು, “ಮೇಲಣ ಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರೊಲಿದ ಮನುಷ್ಯರೊಳಗೆ ಸಮಾಧಾನ” ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು.


ನಕ್ಷತ್ರ ಸೈನ್ಯವೆಲ್ಲಾ ಗತಿಸಿ ಹೋಗುವುದು, ಆಕಾಶ ಮಂಡಲವು ಸುರಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಮಾಗಿದ ಹಣ್ಣು ಉದುರುವ ಹಾಗೂ ತಾರಾಮಂಡಲವೆಲ್ಲಾ ಬಾಡಿ ಕೆಳಗೆ ಉದುರುವುದು.


ಬೆಳಕನ್ನು ವಸ್ತ್ರದಂತೆ ಹೊದ್ದುಕೊಂಡಿರುವೆ; ಆಕಾಶವನ್ನು ಗುಡಾರದಂತೆ ಎತ್ತಿ ಹರಡಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು