Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರವಿುಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರು ತನ್ನ ಸೃಷ್ಟಿಕಾರ್ಯವನ್ನು ಮುಕ್ತಾಯಗೊಳಿಸಿ ಏಳನೆ ದಿನದಲ್ಲಿ ವಿಶ್ರಮಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇವರು ತಮ್ಮ ಕಾರ್ಯಗಳನ್ನೆಲ್ಲಾ ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:2
11 ತಿಳಿವುಗಳ ಹೋಲಿಕೆ  

ಎಲ್ಲಿಯೋ ಒಂದು ಕಡೆ ಏಳನೆಯ ದಿನವನ್ನು ಕುರಿತಾಗಿ, “ದೇವರು ತನ್ನ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನೆಂದು” ಬರೆದದೆ.


ಇದು ನನಗೂ ಇಸ್ರಾಯೇಲರಿಗೂ ನಡುವೆಯಿರುವ ಸದಾಕಾಲದ ಗುರುತು. ಏಕೆಂದರೆ ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನು ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸವನ್ನು ಮಾಡದೇ ವಿಶ್ರಮಿಸಿಕೊಂಡನಲ್ಲವೇ?”


ಏಳನೆಯ ದಿನ ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ. ಅದರಲ್ಲಿ ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ, ಪಶುಗಳು ಮತ್ತು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ನಿನ್ನಂತೆಯೇ ನಿನ್ನ ಗಂಡಾಳು ಹೆಣ್ಣಾಳುಗಳಿಗೂ ವಿಶ್ರಾಂತಿ ದೊರೆಯಬೇಕು.


ಆರು ದಿನಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನು ಮಾಡದೇ ಇರಬೇಕು. ಆ ಹೊತ್ತು ನಿಮ್ಮ ಎತ್ತುಗಳು, ಕತ್ತೆಗಳು, ದಾಸ, ದಾಸಿಯರು, ಪರದೇಶಸ್ಥರು ವಿಶ್ರಮಿಸಿಕೊಳ್ಳಲಿ.


ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯು ಇಂದಿನವರೆಗೂ ಕೆಲಸ ಮಾಡುತ್ತಿದ್ದಾನೆ, ನಾನೂ ಕೆಲಸ ಮಾಡುತ್ತೇನೆ” ಎಂದು ಹೇಳಿದನು.


ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ, ಸ್ವಇಚ್ಛೆಯಂತೆ ನಡೆಯದೆ, ಸ್ವಕಾರ್ಯದಲ್ಲಿ ನಿರತರಾಗದೆ, ಹರಟೆಹರಟದೆ, ಯೆಹೋವನ ಸಬ್ಬತ್ ಎಂಬ ಪರಿಶುದ್ಧದಿನವು ಉಲ್ಲಾಸಕರವೂ, ಮಾನ್ಯವೂ ಆದದ್ದೆಂದು ಘನಪಡಿಸಿದರೆ,


ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.


ಹೇಗೆಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೋ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನ್ನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ.


ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.


ಆರು ದಿನಗಳು ಕೆಲಸ ಮಾಡಬೇಕು. ಏಳನೆಯ ದಿನ ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿದೆ. ಅದು ಯೆಹೋವನಿಗೆ ಪರಿಶುದ್ಧವಾದ ದಿನ. ಇಂಥ ಸಬ್ಬತ್ ದಿನದಲ್ಲಿ ಕೆಲಸವೇನಾದರೂ ಮಾಡುವವನಿಗೆ ಮರಣಶಿಕ್ಷೆಯಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು